AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura: ವಿಜಯಪುರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ; ಭಾರೀ ಶಬ್ದಕ್ಕೆ ಜನರಲ್ಲಿ ಆತಂಕ

Vijayapura Earthquake: ಭೂಮಿಯ ಆಳದಿಂದ ಭಾರೀ ಶಬ್ದ ಕೇಳಿ ಬಂದಿದೆ. ಶಬ್ದ ಕೇಳಿ ಆತಂಕಗೊಂಡ ಜನರು ಭಯದಿಂದ ಹೊರಗೋಡಿ ಬಂದಿದ್ದಾರೆ. ಹಲವಾರು ಗ್ರಾಮಗಳ ಜನತೆ ಇದೀಗ ಆತಂಕದಲ್ಲಿದೆ.

Vijayapura: ವಿಜಯಪುರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ; ಭಾರೀ ಶಬ್ದಕ್ಕೆ ಜನರಲ್ಲಿ ಆತಂಕ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Nov 03, 2021 | 9:38 PM

Share

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿದೆ. ಇಂದು (ನವೆಂಬರ್ 3) ರಾತ್ರಿ 8.26 ಕ್ಕೆ ಭೂಕಂಪನದ ಅನುಭವ ಉಂಟಾಗಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ನಡುಗಿದ ಅನುಭವ ಉಂಟಾಗಿದೆ. ಭೂಮಿಯ ಆಳದಿಂದ ಭಾರೀ ಶಬ್ದ ಕೇಳಿ ಬಂದಿದೆ. ಶಬ್ದ ಕೇಳಿ ಆತಂಕಗೊಂಡ ಜನರು ಭಯದಿಂದ ಹೊರಗೋಡಿ ಬಂದಿದ್ದಾರೆ. ಹಲವಾರು ಗ್ರಾಮಗಳ ಜನತೆ ಇದೀಗ ಆತಂಕದಲ್ಲಿದೆ.

ಸೆಪ್ಟೆಂಬರ್​ನಿಂದ ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ. ಅಕ್ಟೋಬರ್ 1, 2, 3, 7ರಂದು ಕ್ರಮವಾಗಿ ವಿಜಯಪುರದ ತಿಕೋಟ, ಬಸವನಬಾಗೇವಾಡಿ ಮುಂತಾದ ಕಡೆಗಳಲ್ಲಿ ಭೂಕಂಪನವಾಗಿತ್ತು. ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ ಮಾತ್ರವಲ್ಲದೆ ಅಕ್ಟೋಬರ್ ಮೊದಲ ವಾರ ಸಿಂಧಗಿ, ಬೀದರ್, ಕಲಬುರ್ಗಿಯಲ್ಲೂ ಭೂಕಂಪನದ ಅನುಭವವಾಗಿತ್ತು.

ಇನ್ನು, ಕಲಬುರಗಿಯಲ್ಲಿ ಕೂಡ ಭೂಕಂಪನದಿಂದ ಜನರು ಗಾಬರಿಯಾಗಿದ್ದು, ತಮ್ಮ ಊರುಗಳನ್ನೇ ತೊರೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ ಎಚ್, ತೇಗಲತಿಪ್ಪಿ, ಕೆರೂರು ಸೇರಿದಂತೆ ಹತ್ತಕ್ಕೂ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಲಘು ಭೂಕಂಪನಗಳು ಮೇಲಿಂದ ಮೇಲೆ ಆಗುತ್ತಿವೆ. ಹಗಲು ರಾತ್ರಿಯೆನ್ನದೇ ನಿರಂತರವಾಗಿ ಉಂಟಾಗುತ್ತಿರುವ ಭೂ ಕಂಪನದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಕಲಬುರ್ಗಿಯಲ್ಲಿ 4.1 ತೀವ್ರತೆಯ ಭೂಕಂಪನವಾಗಿತ್ತು. ಇದರಿಂದ ಅನೇಕ ಜನರು ಊರು ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಭೂಕಂಪನಕ್ಕೆ ತತ್ತರಿಸಿದ ಗ್ರಾಮಸ್ಥರು; ಎನ್​ಜಿಆರ್​ಐ ತಂಡದಿಂದ ಅಧ್ಯಯನ ಆರಂಭ

ಇದನ್ನೂ ಓದಿ: Vijayapura Earthquake: ವಿಜಯಪುರದ ಬಸವನಬಾಗೇವಾಡಿಯಲ್ಲಿ ಮತ್ತೆ ಭೂಕಂಪನ; ಇನ್ನೆರಡು ದಿನಗಳಲ್ಲಿ ತಜ್ಞರ ಭೇಟಿ

Published On - 9:32 pm, Wed, 3 November 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!