AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು

ಭೂಕಂಪನದ ಬಗ್ಗೆ ಜಿಲ್ಲಾಡಳಿತ ನಿಖರ ಮಾಹಿತಿ ಕಲೆ ಹಾಕುತ್ತಿದ್ದು, ಜನರು ಯಾವುದೇ ಭಯಕ್ಕೆ ಒಳಗಾಗಬಾರದು ಎಂದು ಡಿಸಿ ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದರು.

Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 09, 2022 | 8:20 AM

ವಿಜಯಪುರ: ಜಿಲ್ಲೆಯಲ್ಲಿ ಬೆಳಿಗ್ಗೆ 6.21ಕ್ಕೆ ಮತ್ತೆ ಭೂಮಿ ಕಂಪಿಸಿದ್ದು, (Earthquake) ಭಯದಿಂದ ಮನೆಗಳಿಂದ ಜನರು ಹೊರಗಡೆ ಓಡಿಬಂದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕಂಪನದ ಅನುಭವ ಹೆಚ್ಚಾಗಿದೆ. ಜಿಲ್ಲೆಯಲ್ಲಿ ವಿಜಯಪುರ ನಗರ, ವಿಜಯಪುರ ತಾಲೂಕಿನ ನಾಗಠಾಣ, ಅಲಿಯಾಬಾದ ಹಾಗೂ ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಸೋಮದೇವರಹಟ್ಟಿ ಸೇರಿ ಹಲವೆಡೆ ಭೂಮಿ ಕಂಪಿಸಿದ್ದು, ಭಯದಲ್ಲಿ ಜನರು ಕಾಲ‌‌ ಕಳೆಯುತ್ತಿವಂತ್ತಾಗಿದೆ. 4.9 ತೀವ್ರತೆಯಲ್ಲಿ ಭೂಮಿಯಾಳದ 5 ಕಿಲೋ ಮೀಟರ್ ಒಳಗಿನಿಂದ ಭೂಮಿ ನಡುಗಿದೆ. ಜಿಲ್ಲೆಯ ಇಂಡಿ ಬಸವನಬಾಗೇವಾಡಿ ಭಾಗದಲ್ಲಿ ಭೂಕಂಪನ ಕೇಂದ್ರೀಕೃತವಾಗಿತ್ತು. ಬಾಗಲಕೋಟೆಯ ಜಮಖಂಡಿ ರಬಕವಿ ಹಾಗೂ ಮಹಾರಾಷ್ಟ್ರದ ಪೂನಾ ಸಹ ಕಂಪನದ ಭಾಗವಾಗಿದ್ದವು. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿಯಿಂದ ಪ್ರಾಥಮಿಕ ವರದಿ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಮಳೆಯ ಆರ್ಭಟಕ್ಕೆ ಕರ್ನಾಟಕ ತತ್ತರ; ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ

ಭೂಕಂಪನದ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ‌ ನಿರ್ವಹಣಾ‌ ಕೇಂದ್ರ  ಅಧಿಕಾರಿಗಳು ನಿಖರ ಮಾಹಿತಿ ನೀಡಲಿದ್ದಾರೆ. ಭೂಕಂಪನದ ಬಗ್ಗೆ ಜಿಲ್ಲಾಡಳಿತ ನಿಖರ ಮಾಹಿತಿ ಕಲೆ ಹಾಕುತ್ತಿದ್ದು, ಜನರು ಯಾವುದೇ ಭಯಕ್ಕೆ ಒಳಗಾಗಬಾರದು ಎಂದು ಡಿಸಿ ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದರು.

ಇದನ್ನೂ ಓದಿ: ಜಮ್ಮು-ಕಾಶ್ಮೀರದ ಅಮರನಾಥ ಗುಹೆ ಬಳಿ ಮೇಘ ಸ್ಫೋಟ: ಮೈಸೂರಿನ ಆರು ಪ್ರವಾಸಿಗರು ಸೇಫ್

ಬಾಗಲಕೋಟೆ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ:

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹುಡ್ಕೊ ಕಾಲೋನಿ ಬಳಿ ಬೆಳಗ್ಗೆ 6 ಗಂಟೆ 21 ನಿಮಿಷಕ್ಕೆ ಭೂಮಿ ಕಂಪಿಸಿರುವ ಅನುಭವವಾಗಿದೆ. ಮೊದಲು ಟೈರ್ ಬ್ಲಾಸ್ಟ್ ತರಹ ಶಬ್ದ ಕೇಳಿಬಂದಿದ್ದು, ಬಳಿಕ ಎರಡು ಸೆಕೆಂಡ್​ ಭೂಮಿ ಕಂಪಿಸಿದೆ. ಕಂಪನದ ಅನುಭವದ ಕುರಿತು ಜಿಯಾಗ್ರಫಿ ಅಧ್ಯಯನ ‌ಮಾಡಿರುವ ಆನಂದ ಕಾಳಪ್ಪನವರ ಹೇಳಿದರು. ಭೂಕಂಪನದ ಬಗ್ಗೆ ಜಿಲ್ಲಾಡಳಿತ ಮಾಹಿತಿ ಕಲೆ ಹಾಕುತ್ತಿದೆ.

Published On - 8:19 am, Sat, 9 July 22

ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್