AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಭೂಕಂಪನ; 3.9ರಷ್ಟು ತೀವ್ರತೆ ದಾಖಲು, ಭಯದಲ್ಲಿ ಜನ

ನಿನ್ನೆ ರಾತ್ರಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಮೊದಲಿಗೆ ಎರಡು ಕ್ಷಣಗಳ ಕಾಲ ಭೂಮಿಯಿಂದ ವಿಚಿತ್ರ ಶಬ್ದ ಕೇಳಿ‌ ಬಂದಿದೆ. ನಂತರ ಭೂಮಿ ನಡುಗಿದ ಅನುಭವವಾಗಿದೆ. ಹೀಗಾಗಿ ಜನರು ಭಯದಲ್ಲೇ ಕಾಲ ಕಳೆಯುವಂತಾಗಿದೆ.

ವಿಜಯಪುರದಲ್ಲಿ ಭೂಕಂಪನ; 3.9ರಷ್ಟು ತೀವ್ರತೆ ದಾಖಲು, ಭಯದಲ್ಲಿ ಜನ
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Sep 05, 2021 | 1:45 PM

Share

ವಿಜಯಪುರ: ರಾತ್ರಿ 11.47ರ ಸುಮಾರಿಗೆ ವಿಜಯಪುರ ಸೇರಿದಂತೆ ಜಿಲ್ಲೆಯಾದ್ಯಂತ ಭೂಮಿ ಕಂಪಿಸಿದ ಅನುಭವ, ವಿಚಿತ್ರ ಶಬ್ದ ಎದುರಾಗಿದೆ. ಭಯದಿಂದ ಜನರು ತಮ್ಮ ಮನೆಗಳಿಂದ ಹೊರಗಡೆ ಓಡಿಬಂದಿದ್ದಾರೆ. 3 ರಿಂದ 4 ಸೆಕೆಂಡ್ ಕಾಲ ಭೂಮಿ‌ ನಡುಗಿದ ಅನುಭವವಾಗಿದ್ದು ಭೂಮಿಯಿಂದ ಕೇಳಿ‌ ಬಂದ ವಿಚಿತ್ರ ಶಬ್ದಕ್ಕೆ ಜನರಲ್ಲಿ ಭೀತಿ ಎದುರಾಗಿದೆ. ಸದ್ಯ ಗಣಿ, ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ನಿನ್ನೆ ರಾತ್ರಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಮೊದಲಿಗೆ ಎರಡು ಕ್ಷಣಗಳ ಕಾಲ ಭೂಮಿಯಿಂದ ವಿಚಿತ್ರ ಶಬ್ದ ಕೇಳಿ‌ ಬಂದಿದೆ. ನಂತರ ಭೂಮಿ ನಡುಗಿದ ಅನುಭವವಾಗಿದೆ. ಹೀಗಾಗಿ ಜನರು ಭಯದಲ್ಲೇ ಕಾಲ ಕಳೆಯುವಂತಾಗಿದೆ. ಇನ್ನು ಮತ್ತೊಂದು ಕಡೆ ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.9ರಷ್ಟು ದಾಖಲಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂದುವಾಗಿದ್ದು ಅದರ ಅಲೆ ವಿಜಯಪುರ ಜಿಲ್ಲೆಯಲ್ಲಿ ಉಂಟಾಗಿ ಭೂಮಿ‌ಕಂಪಿಸಿದೆ. ಭೂಕಂಪದ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದಿಂದ ಮಾಹಿತಿ ಪಡೆದುಕೊಳ್ಳುತ್ತಿದೆ. ಹಾಗೂ ಆಲಮಟ್ಟಿಯ ಭೂಕಂಪ ಮಾಪನ‌ ಕೇಂದ್ರದಿಂದ ಮಾಹಿತಿ ಸಂಗ್ರಹಿಸುತ್ತಿದೆ.

ಇನ್ನು ತಡರಾತ್ರಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನವಾದ ಹಿನ್ನೆಲೆಯಲ್ಲಿ ಬಬಲಾದಿ ಸದಾಶಿವ ಮುತ್ಯಾ ಮಠದ ಶ್ರೀಗಳ ಕಾಲಜ್ಞಾನ ಹೇಳಿದ ವಿಡಿಯೋ ವೈರಲ್ ಆಗಿದೆ. ಕಳೆದ ಶಿವರಾತ್ರಿ ಜಾತ್ರೆಯ ದಿನ ಬಬಲಾದಿ ಸದಾಶಿವ ಮಠದ ಸಿದ್ದು ಮುತ್ಯಾ ಕಾಲಜ್ಞಾನ ಹೇಳಿದ್ದರು. ಶ್ರೀಗಳು 2021ರಲ್ಲಿ ಭೂಕಂಪನ ಉಂಟಾಗುತ್ತೆ ಎಂದು ಹೇಳಿದ್ದರು. ಅದರಂತೆ ಇದೀಗ ತಡರಾತ್ರಿ ಭೂಕಂಪನದ ಅನುಭವ ಉಂಟಾಗಿದೆ. ಹೀಗಾಗಿ ಶ್ರೀಗಳ ಹೇಳಿಕೆ ವಿಡಿಯೋ ವೈರಲ್ ಆಗಿದೆ. ಅಲ್ಲದೆ ಶ್ರೀಗಳು ರಾಜಕೀಯದಲ್ಲಿ ಏರಿಳಿತವಾಗುತ್ತೆ. ಒಂದೇ ಪಕ್ಷದಲ್ಲಿ ಅಸೂಯೆ ರಾಜಕಾರಣ ಹುಟ್ಟುತ್ತೆ ಎಂದಿದ್ದರು.

ವಿಜಯಪುರ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಭೂಕಂಪನವಾಗಿದೆ. ರಿಕ್ಟರ್ ಮಾಪನದಲ್ಲಿ 3.9 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ನಿಡಗುಂದಿ ತಾಲೂಕಿನ ಆಲಮಟ್ಟಿಯ ಡ್ಯಾಂ ಆವರಣದಲ್ಲಿನ ಭೂಕಂಪನ ಮಾಪನ ಕೇಂದ್ರದಲ್ಲಿ ಹಾಗೂ ನೆರೆಯ ಕಲಬುರಗಿ ಜಿಲ್ಲೆಯ ಭೂಕಂಪನ ಮಾಪನ ಕೇಂದ್ರದಲ್ಲಿ ಭೂಕಂಪನವಾಗಿದ್ದು ದಾಖಲಾಗಿದೆ. ಈ ನಿಟ್ಟಿನಲ್ಲಿ ಇಂದು ವಿಜಯಪುರ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ನೇತೃತ್ವದಲ್ಲಿ ತುರ್ತು ಸಭೆ ನಡೆಸಲಾಯಿತು. ಸಭೆಯಲ್ಲಿ ಎಲ್ಲೆಲ್ಲಿ ಭೂಕಂಪನವಾಗಿದೆ. ಎಷ್ಟು ಪ್ರಮಾಣದಲ್ಲಿ ಕಂಪನವಾಗಿದೆ ಎಂಬಿತ್ಯಾಧಿ ವಿಚಾರಗಳನ್ನು ಚರ್ಚೆ ಮಾಡಲಾಯಿತು.

ಇದನ್ನೂ ಓದಿ: Hyderabad Earthquake ಹೈದರಾಬಾದ್‌ ಸಮೀಪ ಭೂಕಂಪನ; 4.0 ತೀವ್ರತೆ ದಾಖಲು

Haiti Earthquake: ಹುಡುಕಿದಷ್ಟೂ ಸಿಗುತ್ತಿವೆ ಶವಗಳು; ಹೈಟಿ ಭೂಕಂಪ ಭೀಕರತೆ, ಸಾವಿನ ಸಂಖ್ಯೆ 2207ಕ್ಕೆ ಏರಿಕೆ

Published On - 7:46 am, Sun, 5 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ