AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಮ್ಮಟನಗರಿ ವಿಜಯಪುರದಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ; ಆತಂಕದಲ್ಲಿ ಜಿಲ್ಲೆಯ ಜನ

ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದ್ದು, ರಿಕ್ಟರ್​​ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಈ ವರ್ಷದಲ್ಲಿ ಇದು ಎರಡನೇ ಬಾರಿಗೆ ಆಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಗುಮ್ಮಟನಗರಿ ವಿಜಯಪುರದಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ; ಆತಂಕದಲ್ಲಿ ಜಿಲ್ಲೆಯ ಜನ
ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 06, 2023 | 10:50 AM

Share

ವಿಜಯಪುರ: ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನ(Earthquake)ವಾಗಿದೆ. ತಡರಾತ್ರಿ 1:38ರ ಸುಮಾರಿಗೆ ವಿಜಯಪುರ ತಾಲೂಕಿನ ಐನಾಪುರ, ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ ಹಾಗೂ ಸುತ್ತಮುತ್ತಲೂ ಹಲವೆಡೆ ಭೂಮಿ ಕಂಪಿಸಿದ್ದು, ರಿಕ್ಟರ್​​ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಈ ಕುರಿತು ವಿಜಯಪುರ ಜಿಲ್ಲಾಡಳಿತ ಖಚಿತಪಡಿಸಿದೆ. ಇಂತಹ ಘಟನೆಗಳು ಜಿಲ್ಲೆಯಲ್ಲಿ ಹಲವು ಬಾರಿ ನಡೆದಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಭೂಕಂಪನ ತಜ್ಞರು ಹೇಳಿದ್ದು, ಜಿಲ್ಲೆಯ ಆಲಮಟ್ಟಿ ಜಲಾಶಯವಿರುವುದರಿಂದ ಇದು ಸಾಮನ್ಯವಾಗಿದೆ ಎಂದಿದ್ದಾರೆ.

ಈ ಹಿಂದೆ ಹಲವು ಬಾರಿ ಕಂಪಿಸಿದ್ದ ಭೂಮಿ

ಕಳೆದ ಏಪ್ರಿಲ್ 21 ರಂದು ರಾತ್ರಿ 10.45ರ ಸುಮಾರಿಗೆ ದೊಡ್ಡ ಶಬ್ದದೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿತ್ತು. ಇದರಿಂದ ಗಾಬರಿಗೊಂಡಿದ್ದ ಜನರು ಮನೆಗಳಿಂದ ಹೊರಬಂದು ನಿಂತುಕೊಂಡಿದ್ದರು. ಹಿಂದೆ ಈ ರೀತಿ ಭೂಮಿ ಕಂಪಿಸಿದ್ದರೂ ಈ ರೀತಿಯಾಗಿ ಶಬ್ದ ಬಂದಿರಲಿಲ್ಲವೆಂದಿದ್ದರು. ಇನ್ನು ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಭೂಕಂಪನವಾಗುತ್ತಾ ಬಂದಿದೆ.

ಇದನ್ನೂ ಓದಿ:Vijayapura Earthquake: ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ: ಪದೇ ಪದೇ ಕಂಪನದಿಂದ ಆತಂಕಗೊಂಡ ಹಳ್ಳಿ ಜನ

ಇನ್ನು ಜಿಲ್ಲೆಯಲ್ಲಿ ಆಲಮಟ್ಟಿ ಜಲಾಶಯವಿರುವ ಕಾರಣ ಭೂಕಂಪನವಾಗುವುದು ಸಹಜ, ಇದಕ್ಕೆ ಹೆದರುವ ಅವಶ್ಯಕತೆಯಿಲ್ಲ ಎಂದು ಭೂಕಂಪನ ತಜ್ಞರು ಪರಿಶೀಲನೆ ನಡೆಸಿ, ಹೇಳಿದ್ದರು. ಆದರೂ, ಸಹ ಮಾರನೇ ದಿನವೂ ವಿಜಯಪುರ ನಗರದ ಹಲವು ಕಡೆ ಭೂಕಂಪನ ಅನುಭವನ್ನು ಸಾರ್ವಜನಿಕರು ಅನುಭವಿಸಿದ್ದರು. ಇದಾದ 2 ತಿಂಗಳ ನಂತರ ಇದೀಗ ಮತ್ತೆ ಭೂಕಂಪನವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ