ಗುಮ್ಮಟನಗರಿ ವಿಜಯಪುರದಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ; ಆತಂಕದಲ್ಲಿ ಜಿಲ್ಲೆಯ ಜನ

ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದ್ದು, ರಿಕ್ಟರ್​​ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಈ ವರ್ಷದಲ್ಲಿ ಇದು ಎರಡನೇ ಬಾರಿಗೆ ಆಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಗುಮ್ಮಟನಗರಿ ವಿಜಯಪುರದಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ; ಆತಂಕದಲ್ಲಿ ಜಿಲ್ಲೆಯ ಜನ
ವಿಜಯಪುರ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 06, 2023 | 10:50 AM

ವಿಜಯಪುರ: ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನ(Earthquake)ವಾಗಿದೆ. ತಡರಾತ್ರಿ 1:38ರ ಸುಮಾರಿಗೆ ವಿಜಯಪುರ ತಾಲೂಕಿನ ಐನಾಪುರ, ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ ಹಾಗೂ ಸುತ್ತಮುತ್ತಲೂ ಹಲವೆಡೆ ಭೂಮಿ ಕಂಪಿಸಿದ್ದು, ರಿಕ್ಟರ್​​ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಈ ಕುರಿತು ವಿಜಯಪುರ ಜಿಲ್ಲಾಡಳಿತ ಖಚಿತಪಡಿಸಿದೆ. ಇಂತಹ ಘಟನೆಗಳು ಜಿಲ್ಲೆಯಲ್ಲಿ ಹಲವು ಬಾರಿ ನಡೆದಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಭೂಕಂಪನ ತಜ್ಞರು ಹೇಳಿದ್ದು, ಜಿಲ್ಲೆಯ ಆಲಮಟ್ಟಿ ಜಲಾಶಯವಿರುವುದರಿಂದ ಇದು ಸಾಮನ್ಯವಾಗಿದೆ ಎಂದಿದ್ದಾರೆ.

ಈ ಹಿಂದೆ ಹಲವು ಬಾರಿ ಕಂಪಿಸಿದ್ದ ಭೂಮಿ

ಕಳೆದ ಏಪ್ರಿಲ್ 21 ರಂದು ರಾತ್ರಿ 10.45ರ ಸುಮಾರಿಗೆ ದೊಡ್ಡ ಶಬ್ದದೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿತ್ತು. ಇದರಿಂದ ಗಾಬರಿಗೊಂಡಿದ್ದ ಜನರು ಮನೆಗಳಿಂದ ಹೊರಬಂದು ನಿಂತುಕೊಂಡಿದ್ದರು. ಹಿಂದೆ ಈ ರೀತಿ ಭೂಮಿ ಕಂಪಿಸಿದ್ದರೂ ಈ ರೀತಿಯಾಗಿ ಶಬ್ದ ಬಂದಿರಲಿಲ್ಲವೆಂದಿದ್ದರು. ಇನ್ನು ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಭೂಕಂಪನವಾಗುತ್ತಾ ಬಂದಿದೆ.

ಇದನ್ನೂ ಓದಿ:Vijayapura Earthquake: ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ: ಪದೇ ಪದೇ ಕಂಪನದಿಂದ ಆತಂಕಗೊಂಡ ಹಳ್ಳಿ ಜನ

ಇನ್ನು ಜಿಲ್ಲೆಯಲ್ಲಿ ಆಲಮಟ್ಟಿ ಜಲಾಶಯವಿರುವ ಕಾರಣ ಭೂಕಂಪನವಾಗುವುದು ಸಹಜ, ಇದಕ್ಕೆ ಹೆದರುವ ಅವಶ್ಯಕತೆಯಿಲ್ಲ ಎಂದು ಭೂಕಂಪನ ತಜ್ಞರು ಪರಿಶೀಲನೆ ನಡೆಸಿ, ಹೇಳಿದ್ದರು. ಆದರೂ, ಸಹ ಮಾರನೇ ದಿನವೂ ವಿಜಯಪುರ ನಗರದ ಹಲವು ಕಡೆ ಭೂಕಂಪನ ಅನುಭವನ್ನು ಸಾರ್ವಜನಿಕರು ಅನುಭವಿಸಿದ್ದರು. ಇದಾದ 2 ತಿಂಗಳ ನಂತರ ಇದೀಗ ಮತ್ತೆ ಭೂಕಂಪನವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us