AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಜಮೀನಿಗೆ ಬಂತೆಂದು ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದಾಯಾದಿಗಳು!

ಹುಟ್ಟುತ್ತಾ ಅಣ್ಣತಮ್ಮಂದಿರರು ಬೆಳೆಯುತ್ತಾ ಬೆಳೆಯುತ್ತಾ ದಾಯಾದಿಗಳು ಎಂಬ ಮಾತು ವಿಜಯಪುರ ಜಿಲ್ಲೆಯಲ್ಲಿ ನಿಜವಾಗಿದೆ. ಹಳೇ ದ್ವೇಷಕ್ಕೆ ದಾಯಾದಿಗಳೇ ಕುಟುಂಬಸ್ಥರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ನಾಯಿ ಜಮೀನಿಗೆ ಬಂತೆಂದು ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದಾಯಾದಿಗಳು!
ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದಾಯಾದಿಗಳು (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: May 16, 2023 | 3:06 PM

Share

ವಿಜಯಪುರ: ಹುಟ್ಟುತ್ತಾ ಅಣ್ಣತಮ್ಮಂದಿರರು ಬೆಳೆಯುತ್ತಾ ಬೆಳೆಯುತ್ತಾ ದಾಯಾದಿಗಳು ಎಂಬ ಮಾತು ಇಲ್ಲಿ ನಿಜವಾಗಿದೆ. ಸಹೋರರ ಮಕ್ಕಳು ಹಳೆಯ ದ್ವೇಷವನ್ನು ಮನಸ್ಸಿನಲ್ಲಿಟ್ಟು ಜಗಳ ತೆಗೆದು ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿವಾಗಿ ಹಲ್ಲೆ (Assault) ಮಾಡಿದ ಘಟನೆ ಇದಕ್ಕೆ ಉದಾಹರಣೆಯಾಗಿದೆ. ನಿನ್ನೆ ವಿಜಯಪುರ (Vijayapura) ಜಿಲ್ಲೆ ಇಂಡಿ ತಾಲೂಕಿನ ಮೈಲಾರ ಗ್ರಾಮದ ತೋಟದ ಮನೆಯ ಬಳಿ ದಾಯಾದಿಗಳೇ ಹೊಡೆದಾಡಿಕೊಂಡಿದ್ದಾರೆ.

ಮೈಲಾರ ಗ್ರಾಮದ ಪಾಟೀಲ್ ಕುಟುಂಬಗಳ ಮದ್ಯೆ ಹಳೆಯ ಜಗಳವಿತ್ತು. ನಿನ್ನೆ ಕುಟುಂಬಸ್ಥರ ಮನೆಯ ನಾಯಿ ಅದೇ ಕುಟುಂಬದ ಮತ್ತೋರ್ವ ಸದಸ್ಯನ ಜಮೀನಿಗೆ ಹೋಗಿದೆ. ಇದನ್ನೇ ಕಾರಣ ಮಾಡಿಕೊಂಡು ಹಳೇ ದ್ವೇಷವನ್ನು ಸಾಧಿಸಲು ನಿರ್ಧಿರಿಸಿದ ಅಶೋಕ ಪಾಟೀಲ್, ಅರವಿಂದ ಪಾಟೀಲ್, ಸಂಕೇತ ನಾರಾಯಣ ಘಾಟಗೆ, ತುಕಾರಾಂ ಪಾಟೀಲ್ ಎಂಬವರು ದಾಯಾದಿ ಸಹೋದರರರಾದ ಬೂಬಾಸಾಹೇಬ ಪಾಟೀಲ್, ಸಂಜೀವ ಪಾಟೀಲ್, ಮಾರುತಿ ಮಾಟೀಲ್ ಮೇಲೆ ಮುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ಹಾಕಿದ್ದಕ್ಕೆ ಅನ್ಯಕೋಮಿಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ

ಕೊಡಲಿ ಬಡಿಗೆ ಹಾಗೂ ರಾಡ್ ಬಳಸಿ ಬೂಬಾಸಾಹೇಬ ಪಾಟೀಲ್, ಸಂಜೀವ ಪಾಟೀಲ್, ಮಾರುತಿ ಮಾಟೀಲ್ ಮನ ಬಂದಂತೆ ಹಲ್ಲೆ ನಡೆಸಿದ್ದು, ಬೂಬಾಸಾಹೇಬ ಪಾಟೀಲ್, ಸಂಜೀವ ಪಾಟೀಲ್, ಮಾರುತಿ ಮಾಟೀಲ್ ಅವರಿಗೆ ಗಂಭೀರ ಗಾಯಗಳಾಗಿವೆ. ತಲೆ, ಮುಖ, ಎದೆ ಹಾಗೂ ಬೆನ್ನಿಗೆ ಗಾಯಗಳಾಗಿವೆ. ಬೂಬಾಸಾಹೇಬ ಪಾಟೀಲ್ ಎಂಬುವವರಿಗೆ ಹೆಚ್ಚಿನ ಗಾಯವಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ತೀವ್ರ ಹಲ್ಲೆಗೆ ಒಳಗಾಗಿರುವ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಹಲ್ಲೆ ನಡೆಸಿದ ಅಶೋಕ ಪಾಟೀಲ್, ಅರವಿಂದ ಪಾಟೀಲ್, ಸಂಕೇತ ನಾರಾಯಣ ಘಾಟಗೆ, ತುಕಾರಾಂ ಪಾಟೀಲ್ ವಿರುದ್ದ ದೂರು ಗಾಯಾಳುಗಳು ನೀಡಿದ್ದು, ಹೊರ್ತಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈವರೆಗೆ ಯಾರ ಬಂಧನವಾಗಿಲ್ಲ. ತಮ್ಮ ಜೀವ ತೆಗೆಯಲು ಬಂದು ಹಲ್ಲೆ ಮಾಡಿರುವವರನ್ನು ಕೂಡಲೇ ಬಂಧಿಸಬೇಕೆಂದು ಮೂವರು ಗಾಯಾಳುಗಳು ಒತ್ತಾಯ ಮಾಡಿದ್ದಾರೆ.

ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ

ಕ್ರೈಂ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು