ವೀಕೆಂಡ್ ಕರ್ಫ್ಯೂ ನೆಪದಲ್ಲಿ ಪೊಲೀಸರಿಂದ ಮಾರಾಟಕ್ಕೆ ಅಡ್ಡಿ ಆರೋಪ; ಮೆಂತ್ಯ, ಕೊತ್ತಂಬರಿ ಸೊಪ್ಪು ರಸ್ತೆಗೆ ಎಸೆದು ರೈತನ ಆಕ್ರೋಶ

ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಭೀಮನಗೌಡ ಬಿರಾದಾರ್ ಎಂಬ ರೈತ ನಗರದ ಅಥಣಿ ರಸ್ತೆಯ ಬಳಿಯ ತರಕಾರಿ ಮಾರುಕಟ್ಟೆ ಬಳಿ ರಸ್ತೆಯಲ್ಲಿ ಸೊಪ್ಪು ಎಸೆದು ಪ್ರತಿಭಟನೆ ಮಾಡುತ್ತಿದ್ದಾನೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದರೂ ನಮಗೆ ಪೊಲೀಸರು ಕಿರಿಕಿರಿ ನೀಡುತ್ತಾರೆಂದು ರೈತ ಆರೋಪಿಸಿದ್ದಾರೆ.

ವೀಕೆಂಡ್ ಕರ್ಫ್ಯೂ ನೆಪದಲ್ಲಿ ಪೊಲೀಸರಿಂದ ಮಾರಾಟಕ್ಕೆ ಅಡ್ಡಿ ಆರೋಪ; ಮೆಂತ್ಯ, ಕೊತ್ತಂಬರಿ ಸೊಪ್ಪು ರಸ್ತೆಗೆ ಎಸೆದು ರೈತನ ಆಕ್ರೋಶ
ವೀಕೆಂಡ್ ಕರ್ಫ್ಯೂ ನೆಪದಲ್ಲಿ ಪೊಲೀಸರಿಂದ ಮಾರಾಟಕ್ಕೆ ಅಡ್ಡಿ ಆರೋಪ; ಮೆಂತ್ಯ, ಕೊತ್ತಂಬರಿ ಸೊಪ್ಪು ರಸ್ತೆಗೆ ಎಸೆದು ರೈತನ ಆಕ್ರೋಶ
Follow us
| Updated By: ಆಯೇಷಾ ಬಾನು

Updated on: Jan 16, 2022 | 11:09 AM

ವಿಜಯಪುರ: ವೀಕೆಂಡ್ ಕರ್ಫ್ಯೂ ನೆಪದಲ್ಲಿ ಮಾರಾಟಕ್ಕೆ ಅಡ್ಡಿ ಆರೋಪ ಮಾಡಿ ಮೆಂತ್ಯ, ಕೊತ್ತಂಬರಿ ಸೊಪ್ಪು ರಸ್ತೆಗೆ ಎಸೆದು ರೈತ ಆಕ್ರೋಶ ಹೊರ ಹಾಕಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಆದರೂ ಪೊಲೀಸರು ನಮಗೆ ಅಡ್ಡಪಡಿಸುತ್ತಿದ್ದಾರೆ. ಅನಗತ್ಯವಾಗಿ ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು ಪೊಲೀಸರ ವಿರುದ್ಧ ರೈತ ಆಕ್ರೋಶ ಹೊರಹಾಕಿದ್ದಾರೆ.

ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಭೀಮನಗೌಡ ಬಿರಾದಾರ್ ಎಂಬ ರೈತ ನಗರದ ಅಥಣಿ ರಸ್ತೆಯ ಬಳಿಯ ತರಕಾರಿ ಮಾರುಕಟ್ಟೆ ಬಳಿ ರಸ್ತೆಯಲ್ಲಿ ಸೊಪ್ಪು ಎಸೆದು ಪ್ರತಿಭಟನೆ ಮಾಡುತ್ತಿದ್ದಾನೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದರೂ ನಮಗೆ ಪೊಲೀಸರು ಕಿರಿಕಿರಿ ನೀಡುತ್ತಾರೆಂದು ರೈತ ಆರೋಪಿಸಿದ್ದಾರೆ. ಜಮೀನಿನಲ್ಲಿ ಸಾಲ ಸೋಲ‌ ಮಾಡಿ ಬೆಳೆದ ತರಕಾರಿ ಹಾಗೂ ಸೊಪ್ಪನ್ನು ಮಾರಲು ಬಿಡುತ್ತಿಲ್ಲಾ ಎಂದು ಅಸಮಾಧಾನ‌ ಹೊರ ಹಾಕಿದ್ದಾರೆ. ತರಕಾರಿ, ಸೊಪ್ಪು‌ ಮಾರಾಟ ಮಾಡದಿದ್ದರೆ ಹಾಳಾಗುತ್ತದೆ. ಹೀಗಾದರೆ ರೈತರು ಬದುಕುವುದು ಹೇಗೆ ಎಂದು ರೈತ ಭೀಮನಗೌಡ ಪ್ರಶ್ನೆ ಮಾಡಿದ್ದಾರೆ. ಇತರೆ ತರಕಾರಿ ಮಾರಾಟಗಾರರು ಮತ್ತು ಸ್ಥಳೀಯರು ರೈತನಿಗೆ‌ ಬೆಂಬಲ ವ್ಯಕ್ತಪಡಿಸಿದ್ದು ಪೊಲೀಸರ ವಿರುದ್ಧ ಗರಂ ಆಗಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ವಿಜಯಪುರ ಎಸ್‌ಪಿ ಆನಂದ್ ಕುಮಾರ್, ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ರೈತರಿಗೆ ತೊಂದರೆ ನೀಡಿದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ತಕ್ಷಣವೇ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ರೈತರಿಗೆ ತೊಂದರೆ ನೀಡದಂತೆ ಪೊಲೀಸರಿಗೆ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.

ಜನರು ಗುಂಪು ಸೇರಿದರೆ ಸಮಸ್ಯೆಯಾಗುತ್ತೆಂದು ಅಂತರ ಕಾಯ್ದುಕೊಂಡು ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಆದರೆ ರೈತನಿಗೆ ಸಮಸ್ಯೆಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ವೈಯಕ್ತಿಕವಾಗಿ ತೆಗೆದುಕೊಂಡು ಕ್ರಮ ತೆಗೆದುಕೊಳ್ಳುವೆ. ಕೊವಿಡ್ ನಿಯಮ ಪಾಲಿಸಿ ವ್ಯಾಪಾರ ವಹಿವಾಟು ಮಾಡಿಕೊಳ್ಳಲಿ ಎಂದು ವಿಜಯಪುರ ಎಸ್‌ಪಿ ಆನಂದ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಸರ್ಜಾ ಜತೆಗಿನ ಅಪರೂಪದ ಫೋಟೋ ಹಂಚಿಕೊಂಡ ಗೆಳೆಯ ಪನ್ನಗ ಭರಣ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್