AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ತಲೆ ಎತ್ತಿದ ಜಲ್ಲಿ ಕ್ರಷರ್: ದಂಧೆಕೋರರ ಹಾವಳಿ ತಗ್ಗಿಸಲು ರೈತರ ಪಟ್ಟು

ವಿಜಯಪುರ: ಆ ಜಿಲ್ಲೆ ಜನ ಹಂತಕರ ಆಟಾಟೋಪಕ್ಕೆ ನಲುಗಿ ಹೋಗಿದ್ರು. ಆದ್ರೀಗ ದಂಧೆಕೋರರ ಅಟ್ಟಹಾಸಕ್ಕೆ ಬೆಚ್ಚಿಬಿದ್ದಿದ್ದಾರೆ. ನಿರಾತಂಕವಾಗಿ ದಂಧೆಕೋರರು ತಮ್ಮ ಕೆಲಸ ಮಾಡ್ಕೊಂಡು ಹೋಗ್ತಿದ್ದಾರಂತೆ. ಹಾಗಾದ್ರೆ ಆ ಜಾಗ ಇರೋದಾದ್ರೂ ಎಲ್ಲಿ? ದಂಧೆಕೋರರ ಉಪಟಳ ಹೇಗಿದೆ ಅನ್ನೋದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ. ಕೃಷ್ಣಾನದಿ ತಟದ ಕೊಲ್ಹಾರ ಪಟ್ಟಣ ಈಗ ಅಕ್ರಮಗಳ ತಾಣವಾಗಿದೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕೃಷಿಯನ್ನೇ ನಂಬಿ ಜನ ಜೀವನ ಸಾಗಿಸ್ತಿದ್ದು, ಅಕ್ರಮ ಮರಳು ಹಾಗೂ ಜಲ್ಲಿ ಕ್ರಷರ್​ಗಳ ಉಪಟಳಕ್ಕೆ […]

ಅಕ್ರಮವಾಗಿ ತಲೆ ಎತ್ತಿದ ಜಲ್ಲಿ ಕ್ರಷರ್: ದಂಧೆಕೋರರ ಹಾವಳಿ ತಗ್ಗಿಸಲು ರೈತರ ಪಟ್ಟು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 21, 2020 | 5:41 PM

Share

ವಿಜಯಪುರ: ಆ ಜಿಲ್ಲೆ ಜನ ಹಂತಕರ ಆಟಾಟೋಪಕ್ಕೆ ನಲುಗಿ ಹೋಗಿದ್ರು. ಆದ್ರೀಗ ದಂಧೆಕೋರರ ಅಟ್ಟಹಾಸಕ್ಕೆ ಬೆಚ್ಚಿಬಿದ್ದಿದ್ದಾರೆ. ನಿರಾತಂಕವಾಗಿ ದಂಧೆಕೋರರು ತಮ್ಮ ಕೆಲಸ ಮಾಡ್ಕೊಂಡು ಹೋಗ್ತಿದ್ದಾರಂತೆ. ಹಾಗಾದ್ರೆ ಆ ಜಾಗ ಇರೋದಾದ್ರೂ ಎಲ್ಲಿ? ದಂಧೆಕೋರರ ಉಪಟಳ ಹೇಗಿದೆ ಅನ್ನೋದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.

ಕೃಷ್ಣಾನದಿ ತಟದ ಕೊಲ್ಹಾರ ಪಟ್ಟಣ ಈಗ ಅಕ್ರಮಗಳ ತಾಣವಾಗಿದೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕೃಷಿಯನ್ನೇ ನಂಬಿ ಜನ ಜೀವನ ಸಾಗಿಸ್ತಿದ್ದು, ಅಕ್ರಮ ಮರಳು ಹಾಗೂ ಜಲ್ಲಿ ಕ್ರಷರ್​ಗಳ ಉಪಟಳಕ್ಕೆ ನಲುಗಿ ಹೋಗಿದ್ದಾರೆ.

ಪರವಾನಗಿ ಪಡೆದಿಲ್ಲ, ಯಾರದ್ದೇ ಭಯವಿಲ್ಲ! ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರವಾನಿಗೆ ಪಡೆಯದೇ ಕೃಷಿ ಭೂಮಿಯಲ್ಲಿ ಕ್ರಷರ್ ಘಟಕಗಳನ್ನ ಮತ್ತು ಗಣಿಗಾರಿಕೆ ನಡೆಸಲಾಗ್ತಿದೆ. ಕೊಲ್ಹಾರ ಪಟ್ಟಣದ ಸಮೀಪವಿರೋ ಮಹದೇವಪ್ಪನ ಬೆಟ್ಟದ ಬಳಿ ಫವಲತ್ತಾದ ಭೂಮಿಯಲ್ಲೇ ಅಕ್ರಮ ಗಣಿಗಾರಿಕೆ, ಕ್ರಷರ್ ಘಟಕಗಳು ತಲೆ ಎತ್ತಿವೆ. ಇದ್ರಿಂದ ಸುತ್ತಮುತ್ತಲ ನೂರಾರು ಎಕರೆ ಪ್ರದೇಶದಲ್ಲಿ ಬೆಳೆಯುವ ಬೆಳೆಗಳ ಮೇಲೆ ದುಷ್ಪರಿಣಾಮ ಬೀರ್ತಿದೆ. ಬೆಳೆಗಳ ಮೇಲೆ ಗಣಿ ಧೂಳು ಬೀಳ್ತಿರೋದ್ರಿಂದ ರೈತರು ನಲುಗಿ ಹೋಗಿದ್ದಾರೆ. ಅತ್ತ ಫಸಲು ಬರದೆ, ಮೇವೂ ಸರಿಯಾಗಿ ಸಿಗದೆ ರೈತ ಸಮುದಾಯ ಪರದಾಡ್ತಿದೆ. ಹೀಗಾಗಿ, ಸಮಸ್ಯೆ ಬಗೆಹರಿಸಿ ಅಂತಾ ಜಿಲ್ಲಾಧಿಕಾರಿ ಕಚೇರಿ ಬಾಗಿಲು ಬಡಿಯುತ್ತಿದ್ದಾರೆ.

ರೈತರ ಮನವಿಯನ್ನ ಗಂಭೀರವಾಗಿ ಪರಿಗಣಿಸಿರೋ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕಲ್ಲು ಗಣಿಗಾರಿಕೆ ಹಾಗೂ ಜಲ್ಲಿ ಕ್ರಷರ್ ಘಟಕಗಳ ಕುರಿತು ಮಾಹಿತಿ ನೀಡುವಂತೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಒಟ್ನಲ್ಲಿ ದಂಧೆಕೋರರ ಅಟ್ಟಹಾಸಕ್ಕೆ ರೈತರು ನಲುಗುತ್ತಿದ್ದಾರೆ. ಒಂದ್ಕಡೆ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಾ ರಾಜ್ಯದ ಸಂಪತ್ತನ್ನ ದಂಧೆಕೋರರು ದೋಚುತ್ತಿದ್ದರೆ, ಮತ್ತೊಂದೆಡೆ ಇದರಿಂದ ರೈತ ಸಮುದಾಯಕ್ಕೆ ಭಾರಿ ತೊಂದರೆ ಆಗ್ತಿದೆ. ದಂಧೆಕೋರರ ಅಟ್ಟಹಾಸಕ್ಕೆ ಸರ್ಕಾರ ಆದಷ್ಟು ಬೇಗ ಕಡಿವಾಣ ಹಾಕಬೇಕಿದೆ.

Published On - 5:40 pm, Fri, 21 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ