ಬಸವನಬಾಗೇವಾಡಿ ಮನಗೂಳಿ ಬಳಿ ಎಸ್​ಯುವಿ, ಕಂಟೇನರ್​, ಖಾಸಗಿ ಬಸ್ ಭೀಕರ ಅಪಘಾತ: 6 ಮಂದಿ ಸಾವು

ವಿಜಯಪುರ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಖಾಸಗಿ ಬಸ್, ಮಹೀಂದ್ರ ಟಿ​ಯುವಿ ಹಾಗೂ ಕಂಟೇನರ್ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿದ್ದಾರೆ. ಸದ್ಯ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸವನಬಾಗೇವಾಡಿ ಮನಗೂಳಿ ಬಳಿ ಎಸ್​ಯುವಿ, ಕಂಟೇನರ್​, ಖಾಸಗಿ ಬಸ್ ಭೀಕರ ಅಪಘಾತ: 6 ಮಂದಿ ಸಾವು
ಅಪಘಾತದ ತೀವ್ರತೆಗೆ ಬಸ್​ನ ಮುಂಭಾಗ ಹಾಗೂ ಸ್ಕಾರ್ಪಿಯೋ ನುಜ್ಜುಗುಜ್ಜಾಗಿರುವುದು
Edited By:

Updated on: May 21, 2025 | 10:23 AM

ವಿಜಯಪುರ, ಮೇ 21: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ (Managuli) ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 50 ರ ಚತುಷ್ಪಥ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಬಸ್ ಚಾಲಕ ಕೂಡ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಮಹೀಂದ್ರ ಟಿಯುವಿ 300 ಕಾರು, ಕಂಟೇನರ್​, ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ ಸಂಭವಿಸಿದ್ದು ಹೇಗೆ?

ವಿಜಯಪುರದತ್ತ ಪ್ರಯಾಣ ಮಾಡುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಗೆ ನಿಂತಿದ್ದ ಕಂಟೇನರ್​ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಬಸವರಾಜ ರಾಠೋಡ್ ಗಂಭೀರ ಗಾಯಗೊಂಡಿದ್ದರು. ಅವರು ನಂತರ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಸ್​​ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.

ಮಹಿಂದ್ರಾ ಕಾರಿನಲ್ಲಿ ತೆಲಂಗಾಣ ಮೂಲದ ಪಿ ಭಾಸ್ಕರ್ ಎಂಬುವರ ಕುಟುಂಬದವರು ಸಂಚರಿಸುತ್ತಿದ್ದರು. ಮುರುಡೇಶ್ವರ ಸೇರಿದಂತೆ ಇನ್ನಿತರ ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸಾಗುತ್ತಿದ್ದರು. ಭಾಸ್ಕರ್ ಅವರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಕೆನರಾ ಬ್ಯಾಂಕ್​​ನಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕುಟುಂಬದ ಸದಸ್ಯರೊಂದಿಗೆ ದಕ್ಷಿಣ ಕರ್ನಾಟಕದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಿಕೊಂಡು ಬರುತ್ತಿದ್ದಾಗ ದುರಂತ ಸಂಭವಿಸಿದೆ.

ಇದನ್ನೂ ಓದಿ
ನಿರಂತರ ಮಳೆಗೆ ಹೈರಾಣದ ಬೆಂಗಳೂರು ಜನ: ವ್ಯಾಪಾರ ವಹಿವಾಟು ಭಾರಿ ಕುಸಿತ
ಮಳೆ ಅವಾಂತರರಿಂದ ಎಚ್ಚೆತ್ತ ಬಿಬಿಎಂಪಿ, ವೈಜ್ಞಾನಿಕ ಕ್ರಮಕ್ಕೆ ಪ್ಲ್ಯಾನ್​
ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ
ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್

ಟಿ ಭಾಸ್ಕರ್ ಹಾಗೂ ಕುಟುಂಬದ ಪವಿತ್ರ, ಅಭಿರಾಮ್ ಹಾಗೂ ಜೋಶ್ನಾ ಎಂಬುವವರು ಅಪಘಾತದಲ್ಲಿ ಸ್ಥಳದಲ್ಲೇ ಅಸುನೀಗಿದ್ದಾರೆ. ಕಾರು ಚಾಲಕ ಹೊರ್ತಿ ಗ್ರಾಮದ ವಿಕಾಸ್ ಮಣಿ ಕೂಡ ಸಾವಿಡಗೀಡಾಗಿದ್ದಾರೆ. ಕಾರಿನಲ್ಲಿದ್ದ 10 ವರ್ಷದ ಬಾಲಕ ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​

ಬಸ್ಸು ಮುಂಬೈಯಿಂದ ಬಳ್ಳಾರಿಗೆ ಪ್ರಯಾಣಿಸುತ್ತಿತ್ತು. ಬಸ್​​ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್​​​ನಲ್ಲಿ ಕಳುಹಿಸಿಕೊಡಲಾಗಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಹಸ್ತಾಂತರಿಸಲಾಗಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:55 am, Wed, 21 May 25

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us