AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನಪದ ಸಾಹಿತಿ, ಭಾವೈಕ್ಯತೆಯ‌ ಹರಿಕಾರ ಕಾಹು ಬಿಜಾಪುರ ನಿಧನ

ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಗೊಳಸಂಗಿ ಗ್ರಾಮದಲ್ಲಿದ್ದ ಕಾಹು ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ಜಾನಪದ ಸಾಹಿತಿ, ಭಾವೈಕ್ಯತೆಯ‌ ಹರಿಕಾರ ಕಾಹು ಬಿಜಾಪುರ ನಿಧನ
ಜಾನಪದ ಸಾಹಿತಿ ಕಾಹು ಬಿಜಾಪುರ
TV9 Web
| Edited By: |

Updated on:Sep 04, 2022 | 12:21 PM

Share

ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಜಾನಪದ ಸಾಹಿತಿ, ಭಾವೈಕ್ಯತೆಯ‌ ಹರಿಕಾರ ಕಾಸೀಮಸಾಬ ಹುಸೇನಸಾಬ ಬಿಜಾಪುರ (88) ಇತ್ತೀಚೆಗೆ ನಿಧನರಾದರು. ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಗೊಳಸಂಗಿ ಗ್ರಾಮದಲ್ಲಿದ್ದ ಕಾಹು ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮಿದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕಾಹು ಎಂದೇ ಅವರು ಸಾಂಸ್ಕೃತಿಕ ವಲಯದಲ್ಲಿ ಜನಜನಿತರಾಗಿದ್ದರು.‌ ಮೃತರು ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿದ್ದ ಕಾಹು ಅವರು ಫೆಬ್ರುವರಿ 4, 1935ರಂದು ಜನನಿಸಿದ್ದರು.‌ 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದರು. ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು, ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

‘ವಿವಿಧೆತೆಯಲ್ಲಿ ಏಕತೆಯ ಮಂತ್ರ ಜಪಿಸುತ್ತ ಐದು ದಶಕಗಳ ಕಾಲ ಭಾವೈಕ್ಯದ ದಾರ ಪೋಣಿಸಿದ ಸೂತ್ರಧಾರರಾಗಿದ್ದ ಸಂತ ಸಾಹಿತಿ ಕಾಹು ಬಿಜಾಪುರ’ ಎಂದು ಬಸವನಬಾಗೇವಾಡಿ ತಾಲೂಕಿನ ಯರನಾಳ ವಿರಕ್ತಮಠದ ಸಂಗನಬಸವ ಶಿವಾಚಾರ್ಯರು ಸಂತಾಪ ಸಂದೇಶದಲ್ಲಿ ತಿಳಿಸಿದರು.

ಗೊಳಸಂಗಿ ಗ್ರಾಮದಲ್ಲಿ ಮಸೀದಿಯೊಂದನ್ನು ನನ್ನ ಕೈಯಾರೆ ಉದ್ಘಾಟನೆ ಮಾಡಿಸಿದ್ದಲ್ಲದೇ ಅದೇ ಮಸೀದಿಯಲ್ಲಿ ಲಿಂಗಪೂಜೆಯನ್ನೂ ಮಾಡಲು ಮಾಡಲು ಅವಕಾಶ ಕಲ್ಪಿಸಿದ್ದರು. ಆಧುನಿಕ ಬಸವಣ್ಣನಂತೆ ಜೀವಿಸಿದ್ದರು ಎಂದು ಯರನಾಳ ಶ್ರೀಗಳು ಹೇಳಿದರು. ಗೊಳಸಂಗಿ ಗ್ರಾಮದಲ್ಲಿ ಇಸ್ಲಾಂ ಧರ್ಮದ ನಿಯಮಾವಳಿ ಪ್ರಕಾರ ಕಾಹು ಬಿಜಾಪುರ ಅವರ ಅಂತ್ಯಕ್ರಿಯೆ ನೆರವೇರಿತು.

Published On - 11:59 am, Sun, 4 September 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ