AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನಪದ ಸಾಹಿತಿ, ಭಾವೈಕ್ಯತೆಯ‌ ಹರಿಕಾರ ಕಾಹು ಬಿಜಾಪುರ ನಿಧನ

ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಗೊಳಸಂಗಿ ಗ್ರಾಮದಲ್ಲಿದ್ದ ಕಾಹು ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ಜಾನಪದ ಸಾಹಿತಿ, ಭಾವೈಕ್ಯತೆಯ‌ ಹರಿಕಾರ ಕಾಹು ಬಿಜಾಪುರ ನಿಧನ
ಜಾನಪದ ಸಾಹಿತಿ ಕಾಹು ಬಿಜಾಪುರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 04, 2022 | 12:21 PM

Share

ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಜಾನಪದ ಸಾಹಿತಿ, ಭಾವೈಕ್ಯತೆಯ‌ ಹರಿಕಾರ ಕಾಸೀಮಸಾಬ ಹುಸೇನಸಾಬ ಬಿಜಾಪುರ (88) ಇತ್ತೀಚೆಗೆ ನಿಧನರಾದರು. ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಗೊಳಸಂಗಿ ಗ್ರಾಮದಲ್ಲಿದ್ದ ಕಾಹು ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮಿದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕಾಹು ಎಂದೇ ಅವರು ಸಾಂಸ್ಕೃತಿಕ ವಲಯದಲ್ಲಿ ಜನಜನಿತರಾಗಿದ್ದರು.‌ ಮೃತರು ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿದ್ದ ಕಾಹು ಅವರು ಫೆಬ್ರುವರಿ 4, 1935ರಂದು ಜನನಿಸಿದ್ದರು.‌ 2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದರು. ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು, ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

‘ವಿವಿಧೆತೆಯಲ್ಲಿ ಏಕತೆಯ ಮಂತ್ರ ಜಪಿಸುತ್ತ ಐದು ದಶಕಗಳ ಕಾಲ ಭಾವೈಕ್ಯದ ದಾರ ಪೋಣಿಸಿದ ಸೂತ್ರಧಾರರಾಗಿದ್ದ ಸಂತ ಸಾಹಿತಿ ಕಾಹು ಬಿಜಾಪುರ’ ಎಂದು ಬಸವನಬಾಗೇವಾಡಿ ತಾಲೂಕಿನ ಯರನಾಳ ವಿರಕ್ತಮಠದ ಸಂಗನಬಸವ ಶಿವಾಚಾರ್ಯರು ಸಂತಾಪ ಸಂದೇಶದಲ್ಲಿ ತಿಳಿಸಿದರು.

ಗೊಳಸಂಗಿ ಗ್ರಾಮದಲ್ಲಿ ಮಸೀದಿಯೊಂದನ್ನು ನನ್ನ ಕೈಯಾರೆ ಉದ್ಘಾಟನೆ ಮಾಡಿಸಿದ್ದಲ್ಲದೇ ಅದೇ ಮಸೀದಿಯಲ್ಲಿ ಲಿಂಗಪೂಜೆಯನ್ನೂ ಮಾಡಲು ಮಾಡಲು ಅವಕಾಶ ಕಲ್ಪಿಸಿದ್ದರು. ಆಧುನಿಕ ಬಸವಣ್ಣನಂತೆ ಜೀವಿಸಿದ್ದರು ಎಂದು ಯರನಾಳ ಶ್ರೀಗಳು ಹೇಳಿದರು. ಗೊಳಸಂಗಿ ಗ್ರಾಮದಲ್ಲಿ ಇಸ್ಲಾಂ ಧರ್ಮದ ನಿಯಮಾವಳಿ ಪ್ರಕಾರ ಕಾಹು ಬಿಜಾಪುರ ಅವರ ಅಂತ್ಯಕ್ರಿಯೆ ನೆರವೇರಿತು.

Published On - 11:59 am, Sun, 4 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​