AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಅಭಿವೃದ್ಧಿ ಕೆಲಸ ಒಪ್ಪಿಕೊಳ್ಳದವರ ವಿರುದ್ಧ ಮಾಜಿ ಸಚಿವ ಎಸ್​ಕೆ ಬೆಳ್ಳುಬ್ಬಿ ವಿವಾದಾತ್ಮಕ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿ ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಕಾಂಗ್ರೆಸ್​ನವರಿಗೆ ಹೋಗಿ ಕೇಳಿ ಅವರೂ ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಳ್ಳದವರು ಹಾದರಕ್ಕೆ ಹುಟ್ಟಿದಂಗೆ ಎಂದು ಬಿಜೆಪಿ ಮಾಜಿ ಸಚಿವ ಎಸ್​​ಕೆ ಬೆಳ್ಳುಬ್ಬಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ವತಿಯಿಂದ ವಿಜಪುರದಲ್ಲಿ ಆಯೋಜಿಸಿದ್ದ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ಅಭಿವೃದ್ಧಿ ಕೆಲಸ ಒಪ್ಪಿಕೊಳ್ಳದವರ ವಿರುದ್ಧ ಮಾಜಿ ಸಚಿವ ಎಸ್​ಕೆ ಬೆಳ್ಳುಬ್ಬಿ ವಿವಾದಾತ್ಮಕ ಹೇಳಿಕೆ
ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 09, 2023 | 5:31 PM

Share

ವಿಜಯಪುರ, ಸೆಪ್ಟೆಂಬರ್​ 9: ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಕೆಲಸ ಮಾಡಿದ್ದಾರೆ. ಮೋದಿ ಕೆಲಸಗಳನ್ನು ಒಪ್ಪಿಕೊಳ್ಳದವರು ಹಾದರಕ್ಕೆ ಹುಟ್ಟಿದಂಗೆ. ಕಾಂಗ್ರೆಸ್​ನವರಿಗೆ ಹೋಗಿ ಕೇಳಿ ಅವರೂ ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಳ್ಳದವರು ಹಾದರಕ್ಕೆ ಹುಟ್ಟಿದಂಗೆ ಎಂದು ಬಿಜೆಪಿ ಮಾಜಿ ಸಚಿವ ಎಸ್​​ಕೆ ಬೆಳ್ಳುಬ್ಬಿ (SK Bellumbi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ನಡೆದ ಬಿಜೆಪಿ ಪಕ್ಷದ ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಅಭಿವೃದ್ದಿ ಕಾರ್ಯಗಳನ್ನು ಹೇಳುವ ಭರದಲ್ಲಿ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ.

ಪಿಎಂ ಮೋದಿ ಅವರು ಕಳೆದ 9 ವರ್ಷಗಳ ಆಧಿಕಾರಾವಧಿಯಲ್ಲಿ ಅಸಂಖ್ಯಾತ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. 9 ವರ್ಷದಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯವನ್ನು ಮೋದಿ ಅವರು ಮಾಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್; ಏನು?

ಕಾಂಗ್ರೆಸ್​​ನವರ ಮನೆಗೆ ಹೋಗಿ ಕೇಳಿ ಬೇಕಾದರೆ ಅಭಿವೃದ್ಧಿ ವಿಚಾರವಾಗಿ ಅವರು ಒಪ್ಪಿಕೊಳ್ಳುತ್ತಾರೆ. ಒಳ್ಳೆಯ ಕೆಲಸವನ್ನು ಒಪ್ಪಲೇಬೇಕು, ಒಪ್ಪದಿದ್ದರೆ ಅವರು ಮನುಷ್ಯರಲ್ಲ ರಾಕ್ಷಸರು. ಅವರು ಭಾರತ ಮಾತೆಯ ಮಕ್ಕಳಲ್ಲ ಹಾದರಕ್ಕೆ ಹುಟ್ಟಿದಂಗೆ ಎಂದು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ.

ಭಾರತ ಮಾತೆಗೆ ನಾವು ತಾಯಿ ಎಂದು ಕರೆಯುತ್ತೇವೆ. ತಾಯಿಗೆ ಅವಮಾನ ಮಾಡಿದವರು ಯಾರೇ ಇದ್ದರೂ ಅವರು ದೇಶದ್ರೋಹಿನೇ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್​ನವರಿಗೆ 135 ಸೀಟು ಗೆದ್ದ ಮೇಲೆ ದುರಂಹಕಾರ ಬಂದಿದೆ: ಯತ್ನಾಳ್

‘135 ಜನ ಶಾಸಕರಿದ್ರೂ ಲೋಕಸಭೆ ಚುನಾವಣೆ ಎದುರಿಸೋಕೆ ನಿಮಗೆ ನಮ್ಮದೇ *** ಬೇಕು ಅಂದರೆ, ಏನು ಮಾಡೋಣ? ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ನಿನ್ನೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ; ಕೋರ್ಟ್​ ಮೆಟ್ಟಿಲೇರಲು ವಿಪಕ್ಷ ನಾಯಕಿ ಸಿದ್ಧತೆ, ಕಾರಣ ಇಲ್ಲಿದೆ

ಕಾಂಗ್ರೆಸ್​ನವರಿಗೆ 135 ಸೀಟು ಗೆದ್ದ ಮೇಲೆ ದುರಂಹಕಾರ ಬಂದಿದೆ. ಸೂರ್ಯ ಚಂದ್ರರನ್ನು ಅಳುವ ಲೆಕ್ಕಕ್ಕೆ ಹೋಗಿದ್ದಾರೆ. ಡಿಸೆಂಬರ್​ವರೆಗೂ ಈ ಸರ್ಕಾರ ಉಳಿಯುವುದಿಲ್ಲ. ಐದು ವರ್ಷ ಆಳುವುದು ದೂರದ ಮಾತು. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹಗುರವಾಗಿ ಮಾತನಾಡುತ್ತಾರೆ. ಈ ಸರ್ಕಾರ ಉಳಿಯುವುದಕ್ಕೆ ಸಾಧ್ಯವಿಲ್ಲ. ಪಕ್ಷಕ್ಕೆ ಬೇಸಿಕ್ ಇಲ್ಲ, ಅಸ್ಥಿತ್ವನೇ ಇಲ್ಲ. ಇನ್ನೇನು ಸರ್ಕಾರ ಉಳಿಯುತ್ತದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:23 pm, Sat, 9 September 23

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ