AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರ ವಿರೋಧದ ನಡುವೆ ಮದುವೆಯಾಗಿದಕ್ಕೆ ಮಗಳನ್ನೇ ವಿಧವೆ ಮಾಡಿದ ಅಪ್ಪ; ವಿಜಯಪುರ ಮಾಜಿ ಕಾರ್ಪೊರೇಟರ್ ಸೇರಿ ನಾಲ್ವರ ಬಂಧನ

ಮೃತ ಮುಸ್ತಕಿನ್ ಪತ್ನಿ ಅತೀಕಾಳ ತಂದೆ ಹಾಗೂ ಮಾಜಿ ಕಾರ್ಪೊರೇಟರ್ ರೌಫ್ ಶೇಖ್ ಹಾಗೂ ಇತರರು ಕೊಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಗಾಂಧಿಚೌಕ್ ಪೊಲೀಸರು ಈಗಾಗಲೇ ಮಾಜಿ ಕಾರ್ಪೊರೇಟರ್ ರೌಫ್ ಶೇಖ್ ಹಾಗೂ ಇತರೆ ನಾಲ್ವರನ್ನು ಬಂಧಿಸಿದ್ದಾರೆ.

ಮನೆಯವರ ವಿರೋಧದ ನಡುವೆ ಮದುವೆಯಾಗಿದಕ್ಕೆ ಮಗಳನ್ನೇ ವಿಧವೆ ಮಾಡಿದ ಅಪ್ಪ; ವಿಜಯಪುರ ಮಾಜಿ ಕಾರ್ಪೊರೇಟರ್ ಸೇರಿ ನಾಲ್ವರ ಬಂಧನ
ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ವಿ ಶ್ರೀಧರ ಹಾಗೂ ಕೊಲೆಗೀಡಾದ ಮುಸ್ತಕಿನ್ ಪತ್ನಿ ಅತೀಕಾ ಒತ್ತಾಯಿಸಿದ್ದಾರೆ.
TV9 Web
| Edited By: |

Updated on: Mar 11, 2022 | 3:27 PM

Share

ವಿಜಯಪುರ: ಮನೆಯವರ ವಿರೋಧದ ಮಧ್ಯೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಕ್ಕೆ ಕೋಪಗೊಂಡ ಯುವತಿ ಮನೆಯವರು ಮಗಳನ್ನೇ ವಿಧವೆ ಮಾಡಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿತ್ತು. ಕಳೆದ ಫೆಬ್ರವರಿ 15 ರಂದು ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಕ್ರೈಂ ವಿಭಾಗದ ಪಿಎಸ್ಐ ರಿಯಾಜ್ ಅಹಮ್ಮದ್ ಕೂಡಗಿ ಎಂಬುವವರ ಪುತ್ರ ಮುಸ್ತಕಿನ್ ಕೂಡಗಿ ನಗರದ ಹೊರ ಭಾಗದ ಬೈಪಾಸ್ ಮೇಲೆ ಸ್ಕೂಟಿಯಲ್ಲಿ ಬರುವಾಗ ಬುಲೆರೋ ಹಾಯಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಸಂಬಂಧ ಈಗ ನಾಲ್ವರನ್ನು ಬಂಧಿಸಲಾಗಿದೆ.

ಮೃತ ಮುಸ್ತಕಿನ್ ಪತ್ನಿ ಅತೀಕಾಳ ತಂದೆ ಹಾಗೂ ಮಾಜಿ ಕಾರ್ಪೊರೇಟರ್ ರೌಫ್ ಶೇಖ್ ಹಾಗೂ ಇತರರು ಕೊಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಗಾಂಧಿಚೌಕ್ ಪೊಲೀಸರು ಈಗಾಗಲೇ ಮಾಜಿ ಕಾರ್ಪೊರೇಟರ್ ರೌಫ್ ಶೇಖ್ ಹಾಗೂ ಇತರೆ ನಾಲ್ವರನ್ನು ಬಂಧಿಸಿದ್ದಾರೆ. ಆದರೆ ಇನ್ನುಳಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ವಿ ಶ್ರೀಧರ ಹಾಗೂ ಕೊಲೆಗೀಡಾದ ಮುಸ್ತಕಿನ್ ಪತ್ನಿ ಅತೀಕಾ ಒತ್ತಾಯಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೆಲವೇ ಆರೋಪಿಗಳನ್ನು ಬಂಧಿಸಿದರೆ ಸಾಲದು. ಇನ್ನೂ ಕೆಲ ಆರೋಪಿಗಳು ಹೊರಗಡೆ ಇದ್ದಾರೆ. ಇಡೀ ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸಬೇಕೆಂದು ಇದೇ ವೇಳೆ ಪೊಲೀಸ್ ಮಹಾ ಸಂಘದ ರಾಜ್ಯಾಧ್ಯಕ್ಷ ವಿ ಶ್ರೀಧರ ಒತ್ತಾಯ ಮಾಡಿದರು. ಮುಸ್ತಕಿನ್ ಕೂಡಗಿಯನ್ನು ಕೊಲೆ ಮಾಡಿರೋ ಆರೋಪಿಗಳಿಂದ ಅತೀಕಾಳ ಹಾಗೂ ಇಡೀ ಕೂಡಗಿ ಕುಟುಂಬದವರಿಗೆ ಜೀವಭಯವಿದೆ. ಪೊಲೀಸರು ಕೂಡಗಿ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯ ಮಾಡಿದರು.

ಇದನ್ನೂ ಓದಿ: ಸಮಾಜವಾದಿ ಪಕ್ಷದ ‘ಜಂಗಲ್ ರಾಜ್’ ಮರಳುವ ಭಯದಿಂದ ದಲಿತರು ಮತ್ತು ಒಬಿಸಿಗಳು ಬಿಜೆಪಿಗೆ ಮತ ಹಾಕಿದರು: ಮಾಯಾವತಿ|

ಸಿಎಂ ಬೊಮ್ಮಾಯಿಗೆ ಹೇಳಿ ಉಚಿತವಾಗಿ ಬರೆಸಿಕೊಡಲಿ; ಈಗಲ್ಟನ್ ವಿಚಾರವಾಗಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಡಿಕೆ ಸುರೇಶ್

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​