ವಿಜಯಪುರದಲ್ಲಿ ಭೀಕರ ಅಪಘಾತ: ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಅಪರಿಚಿತ ವಾಹನ, ನಾಲ್ವರು ದುರ್ಮರಣ

| Updated By: ರಮೇಶ್ ಬಿ. ಜವಳಗೇರಾ

Updated on: Oct 18, 2023 | 6:55 AM

ಡಿವೈಡರ್ ಮೇಲೆ ಕುಳಿತಿದ್ದ ನಾಲ್ವರ ಮೇಲೆ ಹರಿದ ಅಪರಿಚಿತ ವಾಹನ ಹರಿದಿದೆ. ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ವಿಜಯಪುರದ ಹೊರವಲಯದಲ್ಲಿರುವ ಟೋಲ್​ ಗೇಟ್ ಬಳಿ ನಡೆದಿದ್ದು, ಯುವಕರಿಗೆ ಗುದ್ದಿದ ವಾಹನ ಪರಾರಿಯಾಗಿದೆ.

ವಿಜಯಪುರದಲ್ಲಿ ಭೀಕರ ಅಪಘಾತ: ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಅಪರಿಚಿತ ವಾಹನ, ನಾಲ್ವರು ದುರ್ಮರಣ
Follow us on

ವಿಜಯಪುರ, (ಅಕ್ಟೋಬರ್ 18): ಅಪರಿಚಿತ ವಾಹನವೊಂದು ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ವಿಜಯಪುರದ (Vijayapura) ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ಟೋಲ್​ಗೇಟ್ ಬಳಿ ನಡೆದಿದೆ. ಟ್ರಕ್ ಬೈಲ್ ಬಳಿಯ ಸರ್ವೀಸ್ ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದ ನಾಲ್ವರ ಮೇಲೆ ವಾಹನ ಹರಿದಿದೆ. ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ವಿಜಯಪುರದ ವಜ್ರಹನುಮಾನ್ ನಗರದ ಶಿವಾನಂದ ಚೌಧರಿ(25), ಸುನೀಲ್​(26), ಈರಣ್ಣ(26), ಪ್ರವೀಣ್ ಪಾಟೀಲ್(30) ಮೃತ ದುರ್ವೈವಿಗಳು.

ಅಪರಿಚಿತ ವಾಹನ ಎರಡು ಬೈಕ್ ಮೇಲೂ ಹರಿದು ಪರಾರಿಯಾಗಿದೆ. ಎರಡೂ ಬೈಕ್‌ಗಳು ಜಖಂ ಆಗಿವೆ. KA28 EZ 7126 ಹಾಗೂ KA28 W 9952 ನಂಬರಿನ ಪಲ್ಸರ್ ಹಾಗೂ ಸಿಬಿಝಡ್ ಬೈಕ್‌ಗಳಾಗಿವೆ. ಸ್ಥಳೀಯರ ಮಾಹಿತಿ ಪ್ರಕಾರ MH12 QW 8521 ನಂಬರಿನ ಲಾರಿ ಗುದ್ದಿ ಪರಾರಿಯಾಗಿದೆ. ವಾಹನ ಬಂದು ಗುದ್ದಿದ ರಭಸಕ್ಕೆ ಬೈಕ್​ ಹಾಗೂ ನಾಲ್ವರು ಯುವಕರ ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿವೆ.

ಇನ್ನು ಸ್ಥಳಕ್ಕೆ ವಿಜಯಪುರ ಗ್ರಾಮೀಣ ವಿಭಾಗದ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.