AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಮಹಿಳಾ ವಿವಿಯಲ್ಲಿ ಕೆಲಸ ಕೊಡಿಸೋ ಆಮಿಷ; ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ

ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯದ ಹೆಸರಿನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಹಣ ವಸೂಲಿ ಮಾಡಿದ ಆರೋಪಗಳು ಕೇಳಿಬಂದಿದೆ. ಈ ಹಿನ್ನಲೆ ಕುಲಸಚಿವ ಪ್ರೋ. ಬಿ ಎಸ್ ನಾವಿ ಅವರು ಇಂಥವರಿಂದ ಮೋಸ ಹೋಗದಂತೆ ಜಾಗೃತರಾಗಿ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ವಿಜಯಪುರದ ಮಹಿಳಾ ವಿವಿಯಲ್ಲಿ ಕೆಲಸ ಕೊಡಿಸೋ ಆಮಿಷ; ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ
ವಿಜಯಪುರ ಮಹಿಳಾ ವಿಶ್ವ ವಿದ್ಯಾನಿಲಯ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 14, 2023 | 2:20 PM

Share

ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ(Karnataka State Women’s University)ದ ಹೆಸರಿನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಹಣ ವಸೂಲಿ ಮಾಡಿದ ಆರೋಪಗಳು ಕೇಳಿಬಂದಿದೆ. ಈ ಹಿನ್ನಲೆ ಕುಲಸಚಿವ ಪ್ರೋ. ಬಿ ಎಸ್ ನಾವಿ ಅವರು ‘ ವಿಶ್ವವಿದ್ಯಾನಿಲಯದಲ್ಲಿ ಉದ್ಯೋಗ ಕೊಡಿಸುವುದಾಗಿ ಕೆಲವರು ಉದ್ಯೋಗಾಕಾಂಕ್ಷಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಮಹಿಳಾ ವಿಶ್ವವಿದ್ಯಾನಿಲಯದ ಲಾಂಭನ ಮತ್ತು ಕವರಗಳನ್ನು ದುರ್ಭಳಕೆ ಮಾಡಿಕೊಂಡು, ಹಿಂದಿನ ಹಾಗೂ ಪ್ರಸಕ್ತ ಕುಲಸಚಿವರ ಹಾಗೂ ಸಹಾಯಕ ಕುಲಸಚಿವರ ನಕಲಿ ಸಹಿಯನ್ನ ಬಳಸಿಕೊಂಡು ಪತ್ರ ನೀಡಿದ್ದಾರೆ. ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ ಹೊರಡಿಸಿದ್ದಾರೆ.

ಮಹಿಳಾ ವಿವಿಗೂ ಈ ಜಾಲಕ್ಕೂ ಯಾವುದೇ ಸಂಬಂಧವಿಲ್ಲ

ಇನ್ನು ಇಂಥವರಿಂದ ಮೋಸ ಹೋಗದಂತೆ ಜಾಗೃತರಾಗಬೇಕೆಂದು ಈ ಪ್ರಕಟಣೆ ಹೊರಡಿಸಲಾಗಿದೆ. ಮಹಿಳಾ ವಿಶ್ವ ವಿದ್ಯಾನಿಲಯಕ್ಕೂ ಈ ಜಾಲಕ್ಕೂ ಯಾವುದೇ ಸಂಬಂಧವಿಲ್ಲ ವಿವಿಯಲ್ಲಿ ಭೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಸಾರ್ವಜನಿಕರು ಉದ್ಯೋಗ ಕೊಡಿಸುವುದಾಗಿ ಬರುವ ವ್ಯಕ್ತಿಗಳಿಂದ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಏಷ್ಯಾದಲ್ಲೇ ಉತೃಷ್ಟ ಒಣ ದ್ರಾಕ್ಷಿ ವಿಜಯಪುರ ಜಿಲ್ಲೆಯಲ್ಲಿ ಬೆಳೆಯುತ್ತಾರೆ, ಆದರೆ ಬೆಳೆಗಾರರ ಪಾಲಿಗೆ ಅದು ಕಹಿ ಕಹಿ, ಬಿಸಿಯೂಟಕ್ಕೆ ಸೇರಿಸಲು ಮನವಿ

ಉದ್ಯೋಗ ಭರವಸೆ ನೀಡಿದರೆ ಅಂಥವರ ಹೆಸರನ್ನು ಮಾಹಿತಿಯನ್ನು ನೀಡಲು ಮನವಿ

ಜೊತೆಗೆ ಈ ಕುರಿತು ಉದ್ಯೋಗ ಭರವಸೆ ನೀಡಿದರೆ ಅಂಥವರ ಮಾಹಿತಿಯನ್ನು ವಿಶ್ವ ವಿದ್ಯಾಲಯಕ್ಕೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಕುಲಸಚಿವರು ಮನವಿ ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಲಭ್ಯವಾಗಿದೆ ಆ ಹಿನ್ನಲೆ ಕುಲಪತಿ ಪ್ರೋ ತುಳಸಿಮಾಲಾ ಉದ್ಯೋಗದ ಹೆಸರಿನಲ್ಲಿ ಹಣ ಪಡೆದವರ ಮಾಹಿತಿ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ವಿವಿಯ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕುಲಪತಿ ತಿಳಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!