AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಮಹಿಳಾ ವಿವಿಯಲ್ಲಿ ಕೆಲಸ ಕೊಡಿಸೋ ಆಮಿಷ; ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ

ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯದ ಹೆಸರಿನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಹಣ ವಸೂಲಿ ಮಾಡಿದ ಆರೋಪಗಳು ಕೇಳಿಬಂದಿದೆ. ಈ ಹಿನ್ನಲೆ ಕುಲಸಚಿವ ಪ್ರೋ. ಬಿ ಎಸ್ ನಾವಿ ಅವರು ಇಂಥವರಿಂದ ಮೋಸ ಹೋಗದಂತೆ ಜಾಗೃತರಾಗಿ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ವಿಜಯಪುರದ ಮಹಿಳಾ ವಿವಿಯಲ್ಲಿ ಕೆಲಸ ಕೊಡಿಸೋ ಆಮಿಷ; ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ
ವಿಜಯಪುರ ಮಹಿಳಾ ವಿಶ್ವ ವಿದ್ಯಾನಿಲಯ
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 14, 2023 | 2:20 PM

Share

ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ(Karnataka State Women’s University)ದ ಹೆಸರಿನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಹಣ ವಸೂಲಿ ಮಾಡಿದ ಆರೋಪಗಳು ಕೇಳಿಬಂದಿದೆ. ಈ ಹಿನ್ನಲೆ ಕುಲಸಚಿವ ಪ್ರೋ. ಬಿ ಎಸ್ ನಾವಿ ಅವರು ‘ ವಿಶ್ವವಿದ್ಯಾನಿಲಯದಲ್ಲಿ ಉದ್ಯೋಗ ಕೊಡಿಸುವುದಾಗಿ ಕೆಲವರು ಉದ್ಯೋಗಾಕಾಂಕ್ಷಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಮಹಿಳಾ ವಿಶ್ವವಿದ್ಯಾನಿಲಯದ ಲಾಂಭನ ಮತ್ತು ಕವರಗಳನ್ನು ದುರ್ಭಳಕೆ ಮಾಡಿಕೊಂಡು, ಹಿಂದಿನ ಹಾಗೂ ಪ್ರಸಕ್ತ ಕುಲಸಚಿವರ ಹಾಗೂ ಸಹಾಯಕ ಕುಲಸಚಿವರ ನಕಲಿ ಸಹಿಯನ್ನ ಬಳಸಿಕೊಂಡು ಪತ್ರ ನೀಡಿದ್ದಾರೆ. ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ ಹೊರಡಿಸಿದ್ದಾರೆ.

ಮಹಿಳಾ ವಿವಿಗೂ ಈ ಜಾಲಕ್ಕೂ ಯಾವುದೇ ಸಂಬಂಧವಿಲ್ಲ

ಇನ್ನು ಇಂಥವರಿಂದ ಮೋಸ ಹೋಗದಂತೆ ಜಾಗೃತರಾಗಬೇಕೆಂದು ಈ ಪ್ರಕಟಣೆ ಹೊರಡಿಸಲಾಗಿದೆ. ಮಹಿಳಾ ವಿಶ್ವ ವಿದ್ಯಾನಿಲಯಕ್ಕೂ ಈ ಜಾಲಕ್ಕೂ ಯಾವುದೇ ಸಂಬಂಧವಿಲ್ಲ ವಿವಿಯಲ್ಲಿ ಭೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಸಾರ್ವಜನಿಕರು ಉದ್ಯೋಗ ಕೊಡಿಸುವುದಾಗಿ ಬರುವ ವ್ಯಕ್ತಿಗಳಿಂದ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಏಷ್ಯಾದಲ್ಲೇ ಉತೃಷ್ಟ ಒಣ ದ್ರಾಕ್ಷಿ ವಿಜಯಪುರ ಜಿಲ್ಲೆಯಲ್ಲಿ ಬೆಳೆಯುತ್ತಾರೆ, ಆದರೆ ಬೆಳೆಗಾರರ ಪಾಲಿಗೆ ಅದು ಕಹಿ ಕಹಿ, ಬಿಸಿಯೂಟಕ್ಕೆ ಸೇರಿಸಲು ಮನವಿ

ಉದ್ಯೋಗ ಭರವಸೆ ನೀಡಿದರೆ ಅಂಥವರ ಹೆಸರನ್ನು ಮಾಹಿತಿಯನ್ನು ನೀಡಲು ಮನವಿ

ಜೊತೆಗೆ ಈ ಕುರಿತು ಉದ್ಯೋಗ ಭರವಸೆ ನೀಡಿದರೆ ಅಂಥವರ ಮಾಹಿತಿಯನ್ನು ವಿಶ್ವ ವಿದ್ಯಾಲಯಕ್ಕೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಕುಲಸಚಿವರು ಮನವಿ ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಲಭ್ಯವಾಗಿದೆ ಆ ಹಿನ್ನಲೆ ಕುಲಪತಿ ಪ್ರೋ ತುಳಸಿಮಾಲಾ ಉದ್ಯೋಗದ ಹೆಸರಿನಲ್ಲಿ ಹಣ ಪಡೆದವರ ಮಾಹಿತಿ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ವಿವಿಯ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕುಲಪತಿ ತಿಳಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್