ನೇಕಾರರಿಗೆ ದಸರಾ ಉಡುಗೊರೆ ನೀಡಿದ ಸರ್ಕಾರ: ಉಚಿತ ವಿದ್ಯುತ್ ಘೋಷಣೆ: ಸಚಿವ ಶಿವಾನಂದ ‌ಪಾಟೀಲ್‌

ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ‌ಪಾಟೀಲ್​​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಹೆಚ್​ಪಿವರೆಗೆ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ದಸರಾ ಹಬ್ಬದ ಉಡುಗೊರೆ ನೀಡಿದೆ.

ನೇಕಾರರಿಗೆ ದಸರಾ ಉಡುಗೊರೆ ನೀಡಿದ ಸರ್ಕಾರ: ಉಚಿತ ವಿದ್ಯುತ್ ಘೋಷಣೆ: ಸಚಿವ ಶಿವಾನಂದ ‌ಪಾಟೀಲ್‌
ಜವಳಿ ಸಚಿವ ಶಿವಾನಂದ ‌ಪಾಟೀಲ್‌
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 21, 2023 | 4:27 PM

ವಿಜಯಪುರ, ಅಕ್ಟೋಬರ್​​​​​ 21: ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ‌ಪಾಟೀಲ್ (Shivanand Patil)​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಹೆಚ್​ಪಿವರೆಗೆ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ್ದಾರೆ. ನೇಕಾರರಿಗೆ ಇದರಿಂದ ದೊಡ್ಡ ಅನುಕೂಲವಾಗಲಿದೆ. ಚುನಾವಣೆಯಲ್ಲಿ ಘೋಷಿಸಿರುವುದನ್ನು ಕಾರ್ಯರೂಪಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ಸುಮಾರು 35ರಿಂದ 40 ಸಾವಿರ ಕುಟುಂಬಗಳಿಗೆ ಅನುಕೂಲವಾಗಲಿದೆ. ಒಟ್ಟು 120ರಿಂದ 140 ಕೋಟಿ ರೂ. ವೆಚ್ಚ ತಗುಲುತ್ತದೆ. ನ.20ರಂದು ವಿಜಯಪುರದಲ್ಲಿ ಸಹಕಾರಿ ಸಪ್ತಾಹ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಸಚಿವ ಶಿವಾನಂದ ಪಾಟೀಲ್ ಮೇಲೆ ನೋಟುಗಳ ಸುರಿಮಳೆ: ಸಚಿವರ ಸಮರ್ಥನೆ ಹೀಗಿದೆ ನೋಡಿ

ಸಹಕಾರಿ ರತ್ನ ಪ್ರಶಸ್ತಿ ವಿಜಯಪುರದಲ್ಲೇ ಪ್ರದಾನ ಮಾಡಲಾಗುವುದು. ಬರಗಾಲ ಹಿನ್ನೆಲೆ ಸಾಂಪ್ರದಾಯಿಕವಾಗಿ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಚಿವ ಗಡ್ಕರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ಸಚಿವ ಶಿವಾನಂದ ಪಾಟೀಲ್ ಮೇಲೆ ಇತ್ತೀಚೆಗೆ ನೋಟುಗಳ ಸುರಿಮಳೆಗೈದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ರಾಜ್ಯದಲ್ಲಿ ಬರಗಾಲ ಇದೆ. ವಿದ್ಯುತ್ ಅಭಾವವಿದೆ. ವಿದ್ಯುತ್ ಇಲ್ಲದೇ ರೈತರ ಬೆಳೆಗಳು ಹಾಳಾಗುತ್ತಿವೆ. ಇಂಥ ಸಂದರ್ಭದಲ್ಲಿ ಸಚಿವರ ಮೇಲೆ ನೋಟಿನ ಮಳೆಗೈದರೂ ಸಚಿವರು ಯಾವುದೇ ಪ್ರತಿರೋಧ‌ ತೋರಿಲ್ಲ.

ಇದನ್ನೂ ಓದಿ: ಆಪರೇಷನ್​ಗೆ ಮುಂದಾದ ಯಡಿಯೂರಪ್ಪ ಕುಟುಂಬದ ವ್ಯಕ್ತಿ, ಶಾಸಕರಿಗೆ ತಲಾ 50 ಕೋಟಿ ಆಮಿಷ; ಅಯನೂರು ಮಂಜುನಾಥ್ ಆರೋಪ

ಬರದ ಮಧ್ಯೆ ಸಚಿವ ಶಿವಾನಂದ ಪಾಟೀಲ ನೋಟುಗಳನ್ನು ತಮ್ಮ ಮೇಲೆ‌ ಹಾರಿಸಿದರೂ ತಡೆಯಲಿಲ್ಲಾ ಎಂದು ವಿರೋಧ ಪಕ್ಷಗಳ ನಾಯಕರು ಟೀಕಿಸಿದ್ದರು. ಆದರೆ, ಪ್ರತಿಪಕ್ಷಗಳ ಟೀಕೆಗೆ ಶಿವಾನಂದ ಪಾಟೀಲ್ ಅವರು ತೀಕ್ಷ್ಣವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಹೆಸ್ಕಾಂ ಕಚೇರಿಗೆ ಬೀಗ ಹಾಕಿ ರೈತರಿಂದ ಪ್ರತಿಭಟನೆ

ರೈತರ ಪಂಪ್ಸೆಟ್​ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಹಿನ್ನಲೆ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ನೇತೃತ್ವದಲ್ಲಿ ಹೆಸ್ಕಾಂ ಕಚೇರಿಗೆ ಬೀಗ ಹಾಕಿ ರೈತರಿಂದ ಪ್ರತಿಭಟನೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಉಪಕೇಂದ್ರದ ಕಚೇರಿಗೆ ನಿನ್ನೆ ರಾತ್ರಿ ಬೀಗ ಜಡಿದು ರೈತರು ಪ್ರತಿಭಟನೆ ಮಾಡಿದ್ದಾರೆ. ರೈತರ ಪಂಪ್ ಸೆಟ್ ಮತ್ತು ತೋಟದ ವಸತಿಗಳಿಗೆ ಸರಿಯಾಗಿ ವಿದ್ಯುತ್ ನೀಡದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Sat, 21 October 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ