ಪಕ್ಷಾತೀತವಾಗಿ ಗ್ರಾಮದ ಅಭಿವೃದ್ಧಿಯತ್ತ ಚಿತ್ತ: ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಮಾದರಿಯಾದ ಗುಣಕಿ ಗ್ರಾಮ ಪಂಚಾಯ್ತಿ

ಸಾಮಾನ್ಯವಾಗಿ ಚುನಾವಣೆ ಅಂದರೆ ಅಲ್ಲಿ ಹಣ, ಜಾತಿ ಬಲ, ತೋಳ್ಬಲ ಪ್ರದರ್ಶನವಾಗುತ್ತದೆ. ಗುಂಡು‌ ತುಂಡು ಪಾರ್ಟಿ ಇರುತ್ತದೆ. ಇದಕ್ಕಾಗಿ ಅಪಾರ ಪ್ರಮಾಣದ ಖರ್ಚು ವೆಚ್ಚವಾಗುತ್ತದೆ. ಅದರಲ್ಲೂ ಗ್ರಾಮ ಪಂಚಾಯತಿ ಮಟ್ಟದ ಚುನಾವಣೆಯಲ್ಲಿ ಪ್ರತಿಷ್ಠೆ ಪ್ರದರ್ಶನವಾಗುತ್ತದೆ. ಇದಾವುದು ಇಲ್ಲದೆ ವಿಜಯಪುರ ಜಿಲ್ಲೆಯ ಗುಣಕಿ ಗ್ರಾಮ ಪಂಚಾಯ್ತಿ ಚುನಾವಣೆ ಮಾದರಿಯಾಗಿದೆ.

ಪಕ್ಷಾತೀತವಾಗಿ ಗ್ರಾಮದ ಅಭಿವೃದ್ಧಿಯತ್ತ ಚಿತ್ತ: ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಮಾದರಿಯಾದ ಗುಣಕಿ ಗ್ರಾಮ ಪಂಚಾಯ್ತಿ
ಗುಣಕಿ ಗ್ರಾಮ ಪಂಚಾಯಿತಿ ಚುನಾವಣೆ
Edited By:

Updated on: Jul 28, 2024 | 3:13 PM

ವಿಜಯಪುರ, ಜುಲೈ 28: ವಿಜಯಪುರ (Vijyapura) ತಾಲೂಕಿನ ಗುಣಕಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ರಾಜ್ಯಕ್ಕೆ ಮಾದರಿಯಾಗಿದೆ. ಗ್ರಾಮದ ಗುರು ಹಿರಿಯರು ಕೂಡಿಕೊಂಡು ಗುಣಕಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯನ್ನು ಮಾಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಮೀಸಲಾತಿ ಅನ್ವಯ ಇಲ್ಲಿನ ಹಿರಿಯರು ಯಾರಿಗೆ ಅಧಿಕಾರ ನೀಡಬೇಕೆಂದು ತೀರ್ಮಾನ ಮಾಡುತ್ತಾರೆ, ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುರ್ಚಿಯಲ್ಲಿ ಕೂರುತ್ತಾರೆ.

ಗ್ರಾಮದ ಹಿರಿಯರು ಗ್ರಾಮ ಪಂಚಾಯತಿ ಸದಸ್ಯರ ಜೊತೆಗೆ ಸಭೆ ನಡೆಸಿ ಕಾಶೀರಾಯಗೌಡ ಪಾಟೀಲರನ್ನು ಎಂಬುವರನ್ನು ಅಧ್ಯಕ್ಷರನ್ನಾಗಿ ಮಾಡಲು ಸೂಚನೆ ನೀಡಿದರು. ಎಲ್ಲ ಸದಸ್ಯರು ಸರ್ವಾನುಮತದಿಂದ ಒಪ್ಪಿ ಅವಿರೋಧವಾಗಿ ಆಯ್ಕೆ ಮಾಡಿದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾಶೀರಾಯಗೌಡ ಪಾಟೀಲ್​ ಅವರಿಗೆ ಸನ್ಮಾನಿಸಿ ಸಿಹಿ ತಿನ್ನಿಸಲಾಯಿತು. ನೂತನ ಆಧ್ಯಕ್ಷರು ಉತ್ತಮವಾಗಿ ಕೆಲಸ ಮಾಡಲಿ ಎಂದು ಆಶಿಸಿದರು.

ಒಟ್ಟು 22 ಸದಸ್ಯ ಬಲದ ಗುಣಕಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಗುಣಕಿ,‌ ಕನ್ನಾಳ, ಮಿಂಚನಾಳ, ಮಿಂಚನಾಳ ತಾಂಡಾ, ಮಿಂಚನಾಳ ಆರ್​ಎಸ್ ಹಾಗೂ ಕನ್ನಾಳ ತಾಂಡಾ ಬರುತ್ತವೆ. ಗ್ರಾಮ ಪಂಚಾಯತಿಗೆ ಆರು ಗ್ರಾಮಗಳ ಸದಸ್ಯರು ಆಯ್ಕೆಯಾಗುತ್ತಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ 2001ರಿಂದಲೂ ನಡೆದುಕೊಂಡು ಬಂದಿದೆ. ಇದೆಲ್ಲರ ರುವಾರಿ ಕನ್ನಾಳ ಗ್ರಾಮದ ಶಿವನಗೌಡ ಬಿರಾದಾರ್ ಎಂಬುವವರ ನಿರ್ದೇಶನವೇ ಕಾರಣವೆಂದು ಸದಸ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಹೂಳು ತುಂಬಿ ರೈತರಿಗೆ ಕಣ್ಣೀರು ತರಸುತ್ತಿರುವ ಡೋಣಿ ನದಿ, ತಲೆ ಹಾಕದ ಜನಪ್ರತಿನಿಧಿಗಳು

ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು, ಹಣ ಖರ್ಚು ಮಾಡುವುದಕ್ಕಿಂತ ಈ ರೀತಿ ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಿದರೆ ಚುನಾವಣೆ ಖರ್ಚು ಉಳಿಸಬಹುದು. ಅಭಿವೃದ್ದಿ ಕೆಲಸ ಕಾರ್ಯಗಳನ್ನು ಮಾಡಬಹುದು ಎಂದು ಗ್ರಾಮ ಪಂಚಾಯತಿ ಸದಸ್ಯರು ಹೇಳಿದರು.

ಗುಣಕಿ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ದುಂದು ವೆಚ್ಚ ಮಾಡದೆ ಅವಿರೋಧವಾಗಿ ಆಯ್ಕೆ ಮಾಡಿರುವುದು ಮಾದರಿಯಾಗಿದೆ. ಇದೇ ರೀತಿ ಇತರೆ ಗ್ರಾಮಗಳಲ್ಲಿನ ಚುನಾವಣೆಗಳು ನಡೆಯಬೇಕಿದೆ. ಈ ಮೂಲಕ ಆಧಿಕಾರಕ್ಕಾಗಿ ಮಾಡುವ ಖರ್ಚು ವೆಚ್ಚಗಳು, ಜಗಳ, ದ್ವೇಷ, ಅಸೂಯೆಗಳಿಗೆ ಜಾಗವಿಲ್ಲದಂತಾಗುತ್ತದೆ. ಈ ಮೂಲಕ ಗುಣಕಿ ಗ್ರಾಮದ ಪಂಚಾಯತಿ ಅಧ್ಯಕ್ಷ ಚುನಾವಣೆ ಮಾದರಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:12 pm, Sun, 28 July 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us