Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಗುರು ಕೊಟ್ಟೂರೇಶ್ವರರ ರಥೋತ್ಸವ.. ಕೊಟ್ಟೂರು ದೊರೆಯೇ ನಿನಗಾರು ಸರಿಯೇ ಎಂದ ಭಕ್ತರು

ಭಕ್ತರು ಜಾತ್ರೆಗಾಗಿ ನೂರಾರು ಕೀಲೋಮೀಟರ್​ಗಳಿಂದ ಪಾದಯಾತ್ರೆಯ ಮೂಲಕವೇ ಬರುತ್ತಾರೆ. ತಮ್ಮ ಇಷ್ಟಾರ್ಥ ಈಡೇರಿದ ಭಕ್ತರು ಕಾಲ್ನಡಿಗೆಯಲ್ಲಿ ಶ್ರೀಕ್ಷೇತ್ರಕ್ಕೆ ಬಂದು ಗುರು ಕೊಟ್ಟೂರೇಶ್ವರನ ಕೃಪೆಗೆ ಪಾತ್ರರಾದರೆ ಇನ್ನೂ ಕೆಲ ಭಕ್ತರು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಪಾದಯಾತ್ರೆ ಮಾಡುತ್ತಾರೆ.

ವಿಜಯಪುರದಲ್ಲಿ ಗುರು ಕೊಟ್ಟೂರೇಶ್ವರರ ರಥೋತ್ಸವ.. ಕೊಟ್ಟೂರು ದೊರೆಯೇ ನಿನಗಾರು ಸರಿಯೇ ಎಂದ ಭಕ್ತರು
ವಿಜಯಪುರದಲ್ಲಿ ಗುರು ಕೊಟ್ಟೂರೇಶ್ವರ ರಥೋತ್ಸವ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Mar 08, 2021 | 4:32 PM

ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಗುರು ಕೊಟ್ಟೂರೇಶ್ವರ ಜಾತ್ರೆ ಅದ್ದೂರಿಯಾಗಿ ನಡೆಯಿತು. ಆದರೆ ಈ ವರ್ಷ ಕೊರೊನಾ ಕಾರಣಕ್ಕೆ ಸರ್ಕಾರದ ಕೆಲವೊಂದು ನಿಯಮಗಳು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿತ್ತು. ಜಿಲ್ಲೆಯ ಶ್ರೀಕ್ಷೇತ್ರ ಕೊಟ್ಟೂರಿನಲ್ಲಿ ಪವಾಡ ಪುರುಷರಾಗಿರುವ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ ಜರುಗಿತು. ಅತಿ ಎತ್ತರದ ತೇರು ಶ್ರೀಕ್ಷೇತ್ರದಲ್ಲಿ ಮೂಲ ನಕ್ಷತ್ರ ದಿನ ಲಕ್ಷಾಂತರ ಭಕ್ತರ ಸಮೂಹದಲ್ಲಿ ರಥವನ್ನು ಎಳೆಯಲಾಯಿತು. ಈ ರಥೋತ್ಸವವನ್ನ ಕಣ್ಣು ತುಂಬಿಕೊಳ್ಳಲು ಎರಡು ಕಣ್ಣು ಸಾಲುವುದಿಲ್ಲ. ಅಪಾರ ಭಕ್ತರು ಕೊಟ್ಟೂರೇಶ್ವರಗೆ ಆಗಮಿಸಿ ಪವಾಡ ಪುರುಷನ ಕೃಪೆಗೆ ಪಾತ್ರರಾದರು.

ರಥೋತ್ಸವಕ್ಕೆ ರಾಜ್ಯ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಿದರು. ಶ್ರೀಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬ ಭಕ್ತರು ತಾವು ಬೇಡಿಕೊಳ್ಳುವ ಇಷ್ಟಾರ್ಥಗಳು ಶ್ರೀ ಗುರು ಕೊಟ್ಟೂರೇಶ್ವರ ಈಡೇರಿಸುತ್ತಾನೆ ಎನ್ನುವ ನಂಬಿಕೆ ಪ್ರತಿಯೊಬ್ಬ ಭಕ್ತರದ್ದು. ಭಕ್ತರು ಜಾತ್ರೆಗಾಗಿ ನೂರಾರು ಕೀಲೋಮೀಟರ್​ಗಳಿಂದ ಪಾದಯಾತ್ರೆಯ ಮೂಲಕವೇ ಬರುತ್ತಾರೆ. ತಮ್ಮ ಇಷ್ಟಾರ್ಥ ಈಡೇರಿದ ಭಕ್ತರು ಕಾಲ್ನಡಿಗೆಯಲ್ಲಿ ಶ್ರೀಕ್ಷೇತ್ರಕ್ಕೆ ಬಂದು ಗುರು ಕೊಟ್ಟೂರೇಶ್ವರನ ಕೃಪೆಗೆ ಪಾತ್ರರಾದರೆ ಇನ್ನೂ ಕೆಲ ಭಕ್ತರು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಪಾದಯಾತ್ರೆ ಮಾಡುತ್ತಾರೆ. ಪಾದಯಾತ್ರೆಯ ಮೂಲಕ ಶ್ರೀಕ್ಷೇತ್ರ ಆಗಮಿಸಿದ ಭಕ್ತರಿಗೆ ತಂಪು ಪಾನೀಯ, ಪ್ರಸಾದ ನೀಡುತ್ತಾರೆ. ಜಾತಿ ಮತ ಪಂಥ ಭೇದ ಭಾವವಿಲ್ಲದೇ ಭಕ್ತರು ಆಗಮಿಸುತ್ತಾರೆ.

ದಲಿತ ಮಹಿಳೆಯಿಂದ ಕಳಸದಾರತಿ, ಧೂಪದಾರತಿ ನಡೆಯುತ್ತದೆ. ಪವಾಡಗಳ ಮೂಲಕ ಎಲ್ಲಾ ಭಕ್ತರ ಆರಾಧ್ಯ ದೈವರಾಗಿರುವ ಗುರು ಕೊಟ್ಟೂರೇಶ್ವರ ರಥೋತ್ಸವಕ್ಕಿಂತ ಮುಂಚೆಯೇ ಸ್ವಾಮಿಯ ಮೂರ್ತಿಯನ್ನ ಬೆಳ್ಳಿ ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮಾಡಲಾಗುತ್ತದೆ. ದಿನವಿಡಿ ಉಪವಾಸ ಇರುವ ದಲಿತ ಮಹಿಳೆ ಪಲ್ಲಕ್ಕಿಯಲ್ಲಿರುವ ಸ್ವಾಮಿಗೆ ಕಳಸದಾರತಿ, ಧೂಪದಾರತಿ ಮಾಡುತ್ತಾರೆ.

ಜಾತ್ರೆಯಲ್ಲಿ ನೂಕುನುಗ್ಗಲು

ದಲಿತ ಮಹಿಳೆ ಆರತಿ ಮಾಡಿದ ಬಳಿಕ ಪಲ್ಲಕ್ಕಿ ಉತ್ಸವ ತೇರು ಬಜಾರ್ ಮೂಲಕ ಸಾಗಿ ರಥೋತ್ಸವ ಜರುಗುವ ಸ್ಥಳಕ್ಕೆ ಬರುತ್ತದೆ. ಆಗ  ನಂದಿಕೋಲು, ಮತ್ತಿತರ ವಾದ್ಯಗಳು ರಥೋತ್ಸವಕ್ಕೆ ಮೆರಗು ತರುತ್ತವೆ. ಪಲ್ಲಕ್ಕಿಯನ್ನ ರಥದ ಸುತ್ತಲೂ ಐದು ಸುತ್ತು ಪ್ರದಕ್ಷಿಣೆ ಹಾಕಿದ ಬಳಿಕ ರಥದ ಒಳಗೆ ಸ್ವಾಮಿಯನ್ನ ಕೊಂಡೊಯ್ಯಲಾಗುತ್ತದೆ. ಇನ್ನು ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತೆಯೇ ಭಕ್ತರು ಕೊಟ್ಟೂರು ದೊರೆಯೇ ನಿನಗಾರು ಸರಿಯೇ, ಸರಿ ಸರಿ ಅಂದವರ ಹಲ್ಲುಮುರಿವೆ ಬಹುಪರಾಕ್ ಅಂತಾ ಘೋಷಣೆ ಮುಗಿಲು ಮುಟ್ಟುವಂತೆ ಕೂಗಿ ಬಾಳೆ ಹಣ್ಣುಗಳನ್ನ ರಥಕ್ಕೆ ಎಸೆದು ಭಕ್ತಿ ಸಮರ್ಪಿಸುತ್ತಾರೆ.

ಶ್ರೀ ಗುರು ಕೊಟ್ಟೂರೇಶ್ವರ

ಪಾದಯಾತ್ರೆ ಮೂಲಕ ಗುರುಕೊಟ್ಟೂರೇಶ್ವರ ರಥೋತ್ಸವಕ್ಕೆ ಆಗಮಿಸಿದ ಭಕ್ತರು

ಇದನ್ನೂ ಓದಿ

ತುಮಕೂರಿನಲ್ಲಿ ದನಗಳ ಜಾತ್ರೆ: ಕರ್ನಾಟಕದ ಮೂಲೆ ಮೂಲೆಗಳಿಂದ ರೈತರ ಆಗಮನ

ಬೇಂದ್ರೆ ಕುರಿತು ಬರೆದಿರುವ ಲೇಖನಗಳ ಸಂಗ್ರಹ ಕೃತಿ ‘ಕಂಡವರಿಗಷ್ಟೆ’ ಬಿಡುಗಡೆ: ಬೇಂದ್ರೆಗೆ ಸಮಾನರಾದ ಕವಿ ಯಾರೂ ಇಲ್ಲ -ಸಾಹಿತಿಗಳ ಬಣ್ಣನೆ

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್