AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಕೆಲವೆಡೆ ಭಾರೀ ಮಳೆ; ಸಿಡಿಲು ಬಡಿದು ಓರ್ವ ಸಾವು

ರಾಜ್ಯದಲ್ಲಿ ಕೆಲದಿನಗಳಿಂದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಭೀಕರ ಬರಕ್ಕೆ ತತ್ತರಿಸಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಅದರಂತೆ ಇಂದು(ಏ.11) ಕೂಡ ವಿಜಯಪುರ, ಕಲಬುರಗಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ವಿಜಯಪುರದ ಇಂಡಿ ತಾಲೂಕಿನಲ್ಲಿ 16 ವರ್ಷದ ಬಾಲಕ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ.

ರಾಜ್ಯದ ಕೆಲವೆಡೆ ಭಾರೀ ಮಳೆ; ಸಿಡಿಲು ಬಡಿದು ಓರ್ವ ಸಾವು
ರಾಜ್ಯದ ವಿವಿಧೆಡೆ ಮಳೆ; ಸಿಡಿಲಿಗೆ ಓರ್ವ ಸಾವು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 11, 2024 | 7:36 PM

Share

ವಿಜಯಪುರ, ಏ.11: ರಾಜ್ಯದಲ್ಲಿ ಇಂದು(ಏ.11) ಹಲವೆಡೆ ಭಾರೀ ಮಳೆಯಾಗಿದ್ದು, ಬಿರು ಬಿಸಿಲಿಗೆ ತತ್ತರಿಸಿದ್ದ ಜನ ವರುಣನ ಆಗಮನದಿಂದ ಸಂತಸಗೊಂಡಿದ್ದಾರೆ. ಅದರಂತೆ ವಿಜಯಪುರ(Vijayapura) ತಾಲೂಕು, ತಿಕೋಟ ಗ್ರಾಮದಲ್ಲಿ ಮಳೆ ತಂಪೆರೆದಿದ್ದು, ಇಂಡಿ ತಾಲೂಕಿನ ಮಾವಿನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಬೀರಪ್ಪ ನಿಂಗಪ್ಪ ಅವರಾದಿ(16) ಮೃತ ರ್ದುದೈವಿ. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ತಂಪೆರೆದ ಮಳೆರಾಯ

ಕಲಬುರಗಿ: ಕಳೆದೊಂದು ವಾರದಿಂದ ನಿಗಿನಿಗಿ ಕೆಂಡವಾಗಿದ್ದ ಕಲಬುರಗಿರಯಲ್ಲಿ ಇಂದು ಮಳೆರಾಯ ತಂಪೆರೆದಿದ್ದಾನೆ. ಜಿಲ್ಲೆಯ ಅಫಜಲಪುರ ತಾಲೂಕಿನ ಹಲವೆಡೆ ಗುಡುಗು, ಮಿಂಚು ಸಹಿತ ಧಾರಕಾರ‌ ಮಳೆಯಾಗಿದೆ. ವರ್ಷದ ಮೊದಲ ಮಳೆಗೆ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಲಬುರಗಿ ನಗರದಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ:ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ

ಕಾಫಿನಾಡಿನ ಮಲೆನಾಡು ಭಾಗದಲ್ಲಿ ವರುಣನ ಸಿಂಚನ

ಚಿಕ್ಕಮಗಳೂರು: ತಾಲೂಕಿನ ಮಲೆನಾಡು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗಿದೆ. ಕಳೆದ ಅರ್ಧಗಂಟೆಯಿಂದ ಕೆರೆಮಕ್ಕಿ, ಬೈಗೂರು, ಹಂಗರವಳ್ಳಿ, ಆವುತಿ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಶುರುವಾಗಿದೆ. ಬಿಸಿಲ ಝಳಕ್ಕೆ ಕಂಗಲಾಗಿದ್ದ ಮಲೆನಾಡಿಗರು ಮಳೆ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮಳೆಯಿಂದ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಭಾಗದಲ್ಲಿ ಸುರಿದ ವರ್ಷದ ಮೊದಲ ಮಳೆ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್