AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳವೆ ಬಾವಿಗೆ ಬಿದ್ದು ಬದುಕಿ ಬಂದ ಎರಡು ವರ್ಷದ ಸಾತ್ವಿಕ್ ಆರೋಗ್ಯ ಸ್ಥಿತಿ ಹೇಗಿದೆ?

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಪುಟ್ಟ ಕಂದಮ್ಮ ಬದುಕಿ ಬಂದಿದ್ದು, ಎಲ್ಲಾ ಪರೀಕ್ಷೆಗಳಲ್ಲಿಯೂ ಆರೋಗ್ಯ ಸಹಜ ಸ್ಥಿತಿಯಲ್ಲಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಸಧ್ಯ ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಬಾಲಕನಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಕೊಳವೆ ಬಾವಿಗೆ ಬಿದ್ದು ಬದುಕಿ ಬಂದ ಎರಡು ವರ್ಷದ ಸಾತ್ವಿಕ್ ಆರೋಗ್ಯ ಸ್ಥಿತಿ ಹೇಗಿದೆ?
ಸಾತ್ವಿಕ್ ಆರೋಗ್ಯ ಸ್ಥಿತಿ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 05, 2024 | 11:02 AM

ವಿಜಯಪುರ, ಏ.05: ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಸಾತ್ವಿಕ್​ ಎಂಬ ಬಾಲಕನನ್ನು ರಕ್ಷಣೆ ಮಾಡಲಾಗಿದ್ದು ವಿಜಯಪುರ ಜಿಲ್ಲಾಸ್ಪತ್ರೆ(Vijayapura District hospital) ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಪರೀಕ್ಷೆಗಳಲ್ಲಿಯೂ ಆರೋಗ್ಯ ಸಹಜ ಸ್ಥಿತಿಯಲ್ಲಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಸಿಟಿ ಸ್ಕ್ಯಾನ್, ಎಂಆರ್​ಐ ಸ್ಕ್ಯಾನ್ ಮೂಲಕ ತಲೆ ಹಾಗೂ ಮೆದುಳಿನ ಸ್ಕ್ಯಾನ್, ಹೊಟ್ಟೆಯ ಸ್ಕ್ಯಾನ್‌, ರಕ್ತದ ವಿವಿಧ ಪರೀಕ್ಷೆಯನ್ನ  ಮಾಡಲಾಗಿದ್ದು, ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಬಾಲಕನಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಸಂಜೆ 4 ಗಂಟೆವರೆಗೆ ಬಾಲಕನ ಆರೋಗ್ಯದ ಮೇಲೆ ನಿಗಾ ಇಡುವ ವೈದ್ಯರು

ಲವಲವಿಕೆಯಿಂದಲೇ ಇರುವ ಪುಟ್ಟ ಬಾಲಕ ಸಾತ್ವಿಕ್ ನೋಡಿ ಪೋಷಕರಲ್ಲಿ ಸಂತಸ ಮೂಡಿದೆ. ಜೊತೆಗೆ ಇಂದು ಬೆಳಗ್ಗೆ ಸಾತ್ವಿಕ್​ಗೆ ತಾಯಿ ಪೂಜಾ ಅವರು ಎದೆ ಹಾಲು ನೀಡಿದ್ದು, ವೈದ್ಯರ ಸೂಚನೆಯ ಮೇರೆಗೆ ಸಿರಿಧಾನ್ಯದ ಗಂಜಿ ನೀಡಲಾಗುತ್ತಿದೆ. ಸಂಜೆ 4ರವರೆಗೆ ಬಾಲಕನ ಆರೋಗ್ಯದ ಮೇಲೆ ವೈದ್ಯರು ನಿಗಾ ಇಡಲಿದ್ದಾರೆ. ಬಳಿಕ ಬಾಲಕನ ಆರೋಗ್ಯದ ಬೆಳವಣಿಗೆ ನೋಡಿಕೊಂಡು ಡಿಸ್ಚಾರ್ಜ್​ ಮಾಡುವ ಬಗ್ಗೆ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಕೊಳವೆಬಾವಿಗೆ ಬಿದ್ದ 2 ವರ್ಷದ ಸಾತ್ವಿಕ್ ಸಾವನ್ನು ಗೆದ್ದು ಬಂದ: 20 ಗಂಟೆಗಳ ಕಾರ್ಯಾಚರಣೆ ಹೇಗಿತ್ತು? ಇಲ್ಲಿದೆ ವಿವರ

ಇನ್ನು ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಬಳಿ ಜಮೀನಿನಲ್ಲಿ ಸಂಜೆ ಆಟವಾಡುತ್ತ ಹೋಗಿ ಕೊಳವೆ ಬಾವಿಯಲ್ಲಿ ಬಾಲಕ ಬಿದ್ದದ್ದ. ನಂತರ ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿ ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್ ಸಿಬ್ಬಂದಿ ಸಾತ್ವಿಕ್​ನನ್ನು​ ರಕ್ಷಣೆ ಮಾಡಿದ್ದರು. ಈ ಹಿನ್ನಲೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರು ರಕ್ಷಣಾ ತಂಡಗಳಾದ ಅಗ್ನಿಶಾಮಕ ದಳ, NDRF ತಂಡ , SDRF ತಂಡಗಳಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ನಗರದ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ