ಕೊಳವೆ ಬಾವಿಗೆ ಬಿದ್ದು ಬದುಕಿ ಬಂದ ಎರಡು ವರ್ಷದ ಸಾತ್ವಿಕ್ ಆರೋಗ್ಯ ಸ್ಥಿತಿ ಹೇಗಿದೆ?

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಪುಟ್ಟ ಕಂದಮ್ಮ ಬದುಕಿ ಬಂದಿದ್ದು, ಎಲ್ಲಾ ಪರೀಕ್ಷೆಗಳಲ್ಲಿಯೂ ಆರೋಗ್ಯ ಸಹಜ ಸ್ಥಿತಿಯಲ್ಲಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಸಧ್ಯ ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಬಾಲಕನಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಕೊಳವೆ ಬಾವಿಗೆ ಬಿದ್ದು ಬದುಕಿ ಬಂದ ಎರಡು ವರ್ಷದ ಸಾತ್ವಿಕ್ ಆರೋಗ್ಯ ಸ್ಥಿತಿ ಹೇಗಿದೆ?
ಸಾತ್ವಿಕ್ ಆರೋಗ್ಯ ಸ್ಥಿತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 05, 2024 | 11:02 AM

ವಿಜಯಪುರ, ಏ.05: ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಸಾತ್ವಿಕ್​ ಎಂಬ ಬಾಲಕನನ್ನು ರಕ್ಷಣೆ ಮಾಡಲಾಗಿದ್ದು ವಿಜಯಪುರ ಜಿಲ್ಲಾಸ್ಪತ್ರೆ(Vijayapura District hospital) ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಪರೀಕ್ಷೆಗಳಲ್ಲಿಯೂ ಆರೋಗ್ಯ ಸಹಜ ಸ್ಥಿತಿಯಲ್ಲಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಸಿಟಿ ಸ್ಕ್ಯಾನ್, ಎಂಆರ್​ಐ ಸ್ಕ್ಯಾನ್ ಮೂಲಕ ತಲೆ ಹಾಗೂ ಮೆದುಳಿನ ಸ್ಕ್ಯಾನ್, ಹೊಟ್ಟೆಯ ಸ್ಕ್ಯಾನ್‌, ರಕ್ತದ ವಿವಿಧ ಪರೀಕ್ಷೆಯನ್ನ  ಮಾಡಲಾಗಿದ್ದು, ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಬಾಲಕನಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಸಂಜೆ 4 ಗಂಟೆವರೆಗೆ ಬಾಲಕನ ಆರೋಗ್ಯದ ಮೇಲೆ ನಿಗಾ ಇಡುವ ವೈದ್ಯರು

ಲವಲವಿಕೆಯಿಂದಲೇ ಇರುವ ಪುಟ್ಟ ಬಾಲಕ ಸಾತ್ವಿಕ್ ನೋಡಿ ಪೋಷಕರಲ್ಲಿ ಸಂತಸ ಮೂಡಿದೆ. ಜೊತೆಗೆ ಇಂದು ಬೆಳಗ್ಗೆ ಸಾತ್ವಿಕ್​ಗೆ ತಾಯಿ ಪೂಜಾ ಅವರು ಎದೆ ಹಾಲು ನೀಡಿದ್ದು, ವೈದ್ಯರ ಸೂಚನೆಯ ಮೇರೆಗೆ ಸಿರಿಧಾನ್ಯದ ಗಂಜಿ ನೀಡಲಾಗುತ್ತಿದೆ. ಸಂಜೆ 4ರವರೆಗೆ ಬಾಲಕನ ಆರೋಗ್ಯದ ಮೇಲೆ ವೈದ್ಯರು ನಿಗಾ ಇಡಲಿದ್ದಾರೆ. ಬಳಿಕ ಬಾಲಕನ ಆರೋಗ್ಯದ ಬೆಳವಣಿಗೆ ನೋಡಿಕೊಂಡು ಡಿಸ್ಚಾರ್ಜ್​ ಮಾಡುವ ಬಗ್ಗೆ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಕೊಳವೆಬಾವಿಗೆ ಬಿದ್ದ 2 ವರ್ಷದ ಸಾತ್ವಿಕ್ ಸಾವನ್ನು ಗೆದ್ದು ಬಂದ: 20 ಗಂಟೆಗಳ ಕಾರ್ಯಾಚರಣೆ ಹೇಗಿತ್ತು? ಇಲ್ಲಿದೆ ವಿವರ

ಇನ್ನು ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಬಳಿ ಜಮೀನಿನಲ್ಲಿ ಸಂಜೆ ಆಟವಾಡುತ್ತ ಹೋಗಿ ಕೊಳವೆ ಬಾವಿಯಲ್ಲಿ ಬಾಲಕ ಬಿದ್ದದ್ದ. ನಂತರ ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿ ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್ ಸಿಬ್ಬಂದಿ ಸಾತ್ವಿಕ್​ನನ್ನು​ ರಕ್ಷಣೆ ಮಾಡಿದ್ದರು. ಈ ಹಿನ್ನಲೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರು ರಕ್ಷಣಾ ತಂಡಗಳಾದ ಅಗ್ನಿಶಾಮಕ ದಳ, NDRF ತಂಡ , SDRF ತಂಡಗಳಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ನಗರದ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us