AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಸಿಗಲಿಲ್ಲ, ಮಗ ಉಳಿಯಲಿಲ್ಲ, ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು: ಕಾನ್ಸಸ್ಟೇಬಲ್ ಅಳಲು

ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಎ.ಎಸ್. ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದಿಂದ ಮೃತಪಟ್ಟಿದೆ. ಮಗು ಆಸ್ಪತ್ರೆಗೆ ದಾಖಲಾಗಿದ್ದಾಗ ಅಧಿಕಾರಿಗಳು ರಜೆ ನೀಡಿಲ್ಲ ಎಂದು ಕಾನ್‌ಸ್ಟೆಬಲ್ ಎ.ಎಸ್. ಬಂಡುಗೋಳ ಆರೋಪ ಮಾಡಿದ್ದಾರೆ. ಹಿರಿಯ ಅಧಿಕಾರಿಗಳು ರಜೆ ನೀಡದಿದ್ದಕ್ಕೆ ಕಾನ್‌ಸ್ಟೆಬಲ್ ಎ.ಎಸ್. ಬಂಡುಗೋಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಿದ್ದರೆ ಏನಿದು ಪ್ರಕರಣ? ಇಲ್ಲಿದೆ ವಿವರ

ರಜೆ ಸಿಗಲಿಲ್ಲ, ಮಗ ಉಳಿಯಲಿಲ್ಲ, ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು: ಕಾನ್ಸಸ್ಟೇಬಲ್ ಅಳಲು
ಪೇದೆ ಎ.ಎಸ್ ಬಂಡುಗೊಳ ವಾಟ್ಸಪ್​ ಸಂದೇಶ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Mar 04, 2025 | 11:52 AM

Share

ವಿಜಯಪುರ, ಮಾರ್ಚ್​ 04: “ನನ್ನ ಮಗನಿಗೆ ಚಿಕಿತ್ಸೆ ಕೊಡಿಸಲು ರಜೆ ಸಿಗಲಿಲ್ಲ, ಕಡೆಗೂ ‌ನನ್ನ ಮಗ ಉಳಿಯಲಿಲ್ಲ. ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು. ನನಗೆ ಬಹಳ ನೋವಾಗಿದೆ” ಈ ರೀತಿಯಾಗಿ ವಿಜಯಪುರ (Vijayapura) ಜಿಲ್ಲಾ ಪೊಲೀಸ್ ಸಿಬ್ಬಂದಿಗಳ ವಾಟ್ಸಪ್​ ಗ್ರೂಪ್​ನಲ್ಲಿ ಗಾಂಧಿ ಚೌಕ್​ ಪೊಲೀಸ್ ಠಾಣೆಯ (Gandhi Chowk Police Station) ಪೊಲೀಸ್​ ಪೇದೆ ಎ. ಎಸ್ ಬಂಡುಗೊಳ ಸಂದೇಶ ಕಳುಹಿಸಿದ್ದಾರೆ.

ಕಾನ್ಸಸ್ಟೇಬಲ್ ಎಎಸ್ ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಗು‌ ಮೃತಪಟ್ಟಿದೆ. ಮಗು ಮೃತಪಟ್ಟ ಬಳಿಕ ಎಎಸ್ ಬಂಡುಗೊಳ ಅವರು ಐಸಿಯುನಲ್ಲಿನ ಮಗುವಿನ ಫೋಟೋ ತೆಗೆದು ಪೊಲೀಸ್ ಸಿಬ್ಬಂದಿಗಳ ಗ್ರೂಪ್​ನಲ್ಲಿ ಈ ರೀತಿಯಾಗಿ ಬರೆದು ಹಾಕಿದ್ದಾರೆ. ಈ‌ ಘಟನೆಯನ್ನು ಜೊಹೇದ್ ಕಿಂಗ್ ಎಂಬ ಹೆಸರಿನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಸ್ಟ್​ ಮಾಡಿ, ಡಿಜಿಪಿ, ಗೃಹ ಸಚಿವ ಜಿ‌. ಪರಮೇಶ್ವರ್​ ಹಾಗೂ ಟಿವಿ9ಗೆ ಟ್ಯಾಗ್ ಮಾಡಲಾಗಿದೆ.

ಇದನ್ನೂ ಓದಿ: ಕಿರುಸಾಲ, ಬಡ್ಡಿ ವ್ಯವಹಾರ: ವಿಜಯಪುರ ಜಿಲ್ಲೆಯ 25 ಠಾಣಾ ವ್ಯಾಪ್ತಿಯ 104 ಕಡೆ ಪೊಲೀಸರು ದಾಳಿ

ಇದನ್ನೂ ಓದಿ
Image
ವಿಜಯಪುರ ವೈದ್ಯಕೀಯ​ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ‍್ಯಾಗಿಂಗ್
Image
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು
Image
ಭೀಮಾತೀರದ ಹಂತಕ ಬಾಗಪ್ಪ ಹರಿಜನ ಕೊಲೆ ರಹಸ್ಯ ಬಯಲು
Image
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ

ಈ ಕುರಿತು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಕಾನ್ಸಸ್ಟೇಬಲ್ ಎ ಎಸ್ ಬಂಡುಗೋಳ ಮೌಖಿಕವಾಗಿ ಹಾಗೂ ಲಿಖಿತವಾಗಿ ಗಾಂಧಿಚೌಕ್ ಪೊಲೀಸ್ ಠಾಣಾಧಿಕಾರಿಗಳ ಬಳಿ‌‌ ರಜೆ ಕೇಳಿಲ್ಲ. ಕಾನ್ಸಸ್ಟೇಬಲ್ ಎ ಎಸ್ ಬಂಡುಗೋಳ ಎರಡು ದಿನ ಕರ್ತವ್ಯಕ್ಕೆ ಹಾಜರಾಗಿಲ್ಲ. ಎ ಎಸ್ ಬಂಡುಗೋಳ‌ ಪತ್ನಿಗೆ ಇದು ಮೂರನೇ ಹೆರಿಗೆ ಎಂದು ತಿಳಿದು‌ಬಂದಿದೆ. ಇಲಾಖಾ‌ ಸಿಬ್ಬಂದಿಗಳ ಗ್ರೂಪ್​ನಲ್ಲಿ ಪೋಸ್ಟ್ ಹಾಕಿದ್ದಾನೆ. ಈ ಘಟನೆ ಕುರಿತು ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More