AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುತ್ತಲೆ ನಾನು ಕಾಂಗ್ರೆಸ್ ವಿರೋಧಿ: ಈಗ ಪಕ್ಷ ಚೇಂಜ್​ ಮಾಡಿ ಮಾಡೋದೇನಿದೆ: ಸಂಸದ ರಮೇಶ ಜಿಗಜಿಣಗಿ

ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರದ ಗಾಳಿ ಜೋರಾಗಿ ಬೀಸಿದೆ. ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಕೂಡ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ಮಾತು ಕೇಳಿಬಂದಿದೆ. ಸದ್ಯ ಈ ಕುರಿತಾಗಿ ವಿಜಯಪುರದಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದು, ಹುಟ್ಟುತ್ತಲೆ ನಾನು ಕಾಂಗ್ರೆಸ್ ವಿರೋಧಿಯಾಗಿ ಬೆಳೆದಿದ್ದೇನೆ. 40 ವರ್ಷದವರೆಗೂ ಕಾಂಗ್ರೆಸ್​​​ ವಿರೋಧಿಯಾಗಿ ರಾಜಕಾರಣ ಮಾಡಿದ್ದೇನೆ. ಇನ್ನೇನು ವಯಸ್ಸಾಗಿದೆ, ಮತ್ತೆ ಪಕ್ಷ ಬದಲಾಯಿಸಿ ರಾಜಕಾರಣ ಏನು ಮಾಡುವುದಿದೆ ಎಂದಿದ್ದಾರೆ.

ಹುಟ್ಟುತ್ತಲೆ ನಾನು ಕಾಂಗ್ರೆಸ್ ವಿರೋಧಿ: ಈಗ ಪಕ್ಷ ಚೇಂಜ್​ ಮಾಡಿ ಮಾಡೋದೇನಿದೆ: ಸಂಸದ ರಮೇಶ ಜಿಗಜಿಣಗಿ
ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Sep 04, 2023 | 7:18 PM

Share

ವಿಜಯಪುರ, ಸೆಪ್ಟೆಂಬರ್​ 4: ಹುಟ್ಟುತ್ತಲೆ ನಾನು ಕಾಂಗ್ರೆಸ್ ವಿರೋಧಿಯಾಗಿ ಬೆಳೆದಿದ್ದೇನೆ. 40 ವರ್ಷದವರೆಗೂ ಕಾಂಗ್ರೆಸ್ ವಿರೋಧಿಯಾಗಿ ರಾಜಕಾರಣ ಮಾಡಿದ್ದೇನೆ. ಇನ್ನೇನು ವಯಸ್ಸಾಗಿದೆ, ಮತ್ತೆ ಪಕ್ಷ ಬದಲಾಯಿಸಿ ರಾಜಕಾರಣ ಏನು ಮಾಡುವುದಿದೆ ಎಂದು ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ (MP Ramesh Jigajinagi) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಡುವುದಾದರೆ ನಮ್ಮ ವಂಶಕರು ಮಾಡುತ್ತಿರಬೇಕು. ನಾನಂತೂ ಕಾಂಗ್ರೆಸ್​ಗೆ ಹೋಗಲ್ಲ. ಪಕ್ಷಾಂತರಕ್ಕೆ ವಯಸ್ಸಾಗಿದೆ ಎಂದು ಹೇಳಿದ್ದಾರೆ.

ವಯಸ್ಸಿನ ಕಾರಣಕ್ಕೆ ಮುಂದಿನ ಎಂಪಿ ಚುನಾವಣೆಗೆ ಟಿಕೆಟ್ ಇಲ್ಲಾ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಯಸ್ಸು ಯಾರಿಗೆ ಆಗಿದೆ ಅಂತ ನಸುನಕ್ಕರು. ಕೆಲವೊಬ್ಬರು ಸಂಸದರಿಗೆ ಸ್ಪರ್ಧಿಸಬೇಕು ಇಚ್ಛೆ ಇದೆ. ಇನ್ನು ಕೆಲವೊಬ್ಬರಿಗೆ ಸ್ಪರ್ಧಿಸಬಾರದು ಸಾಕು ಅನ್ನುವ ಇಚ್ಛೆ ಇದೆ.

ಇದನ್ನೂ ಓದಿ: ವಕ್ಫ್​​ ಕಾಯ್ದೆ ರದ್ದು ಕೋರಿ ಪ್ರಧಾನಿ ಮೋದಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ

ನಾನೇನು ಯಾವತ್ತೂ ಸ್ಪರ್ಧಿಸಲ್ಲ ಎಂದಿಲ್ಲ. ಪಕ್ಷದವರು ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಇಲ್ಲಾಂದರೆ ಮನೆಯಲ್ಲಿ ಇರುತ್ತೇನೆ. ಸಿದ್ದೇಶ್ವರ ದೇಗುಲದಲ್ಲಿ ಕಾಯಿ ಒಡೆದು ಬಿಡುತ್ತೇನೆಂದು ಎಂದು ಹೇಳಿದರು.

ಎಂಬಿ ಪಾಟೀಲ್ ಹೇಳಿಕೆಗೆ ಸಂಸದ ರಮೇಶ ಜಿಗಜಿಣಗಿ ತಿರುಗೇಟು

ಮುಂಬರುವ 2024 ರ ಲೋಕಸಭಾ ಚುನಾವಣೆ ಟಿಕೆಟ್ ಸಿಗುವುದರ ಬಗ್ಗೆ ಜಿಗಜಿಣಗಿ ಯೋಚಿಸಲೆಂದು ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಎಂಬಿ ಪಾಟೀಲ್ ತಮ್ಮ ಪಕ್ಷ ಬಗ್ಗೆ ಹೇಳಿಕೊಳ್ಳಲಿ. ನಮ್ಮ ಪಕ್ಷದ ಬಗ್ಗೆ ಹೇಳುವುದಕ್ಕೆ ಅವರು ಯಾರು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಮಾನ ಹಕ್ಕುಗಳನ್ನು ನೀಡದ ಧರ್ಮ ಕಾಯಿಲೆಯಂತೆಯೇ; ಸ್ಟಾಲಿನ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಬೆಂಬಲ, ಬಿಜೆಪಿ ಕಿಡಿ

ನಮ್ಮ ಪಾರ್ಟಿ ಇದೆ, ಅಧ್ಯಕ್ಷರಿದ್ದಾರೆ. ನಮಗೆ ಟಿಕೆಟ್ ಕೊಡುತ್ತಾರೆ ಅಂತ ಭರವಸೆ ನನಗಿದೆ. ಎಂಬಿ ಪಾಟೀಲ್ ಏನು ಬಿಜೆಪಿ ಪಕ್ಷದಲ್ಲಿದ್ದಾರೆಯೇ. ಬಿಜೆಪಿಗೆ ಬಂದು ಹೇಳಲಿ, ಆಗ ನಿಜ ಅಂತೀನ. ಎಂಬಿ ಪಾಟೀಲ್​ರಿಗೆ ಬಿಜೆಪಿಗೆ ಆಹ್ವಾನ ಕೊಡುತ್ತಾರೆ ಎಂಬ ಪ್ರಶ್ನೆಗೆ, ಉತ್ತರಿಸಿದ ಅವರು, ನಾವ್ಯಾಕೆ ಆಹ್ವಾನ ಕೊಡಬೇಕು. ಬರುವ ಇಚ್ಛೆ ಇದ್ದರೆ ಬರಲಿ. ಬಿಡುವ ಇಚ್ಛೆ ಇದ್ದರೆ ಬಿಡಲಿ. ಬಿಜೆಪಿಯಲ್ಲಿ ಏನು ಕಡಿಮೆ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?