AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ದಾರಿ ಬಿಡಲು ಒತ್ತಾಯ ಪೂರ್ವಕ ಸಹಿ; ತಹಶೀಲ್ದಾರ್ ಕಚೇರಿ ಎದುರು ವಿಷದ ಬಾಟಲ್ ಹಿಡಿದು ಮಹಿಳೆ ಪ್ರತಿಭಟನೆ

ಪಕ್ಕದ ಜಮೀನಿನವರಿಗೆ ದಾರಿ ಇದ್ದರೂ ನಮ್ಮದೇ ಜಮೀನಿನಲ್ಲಿ ಹಾಯ್ದು ಹೋಗಲು, ಒತ್ತಾಯ ಪೂರ್ವಕವಾಗಿ ನನ್ನ ಬಳಿ ಸಹಿ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿ, ಮಹಿಳೆಯೋರ್ವಳು  ಸಿಂದಗಿ ತಹಶೀಲ್ದಾರ್(Sindagi Tahsildar) ಕಚೇರಿ ಎದುರು ವಿಷದ ಬಾಟಲ್ ಹಿಡಿದು ಪ್ರತಿಭಟನೆ ನಡೆಸಿದರು.

ಜಮೀನಿನಲ್ಲಿ ದಾರಿ ಬಿಡಲು ಒತ್ತಾಯ ಪೂರ್ವಕ ಸಹಿ; ತಹಶೀಲ್ದಾರ್ ಕಚೇರಿ ಎದುರು ವಿಷದ ಬಾಟಲ್ ಹಿಡಿದು ಮಹಿಳೆ ಪ್ರತಿಭಟನೆ
ಸಿಂದಗಿ ತಹಶೀಲ್ದಾರ್ ಕಚೇರಿ ಎದುರು ವಿಷದ ಬಾಟಲ್ ಹಿಡಿದು ಮಹಿಳೆ ಪ್ರತಿಭಟನೆ
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 20, 2024 | 6:03 PM

Share

ವಿಜಯಪುರ, ಜು.20: ತಮ್ಮ ಜಮೀನಿನಲ್ಲಿ ಬೇರೆ ರೈತರಿಗೆ ದಾರಿ ನೀಡಬೇಕೆಂದು ಒತ್ತಾಯಿಸಿ ಸಹಿ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿ, ಮಹಿಳೆಯೋರ್ವಳು  ಸಿಂದಗಿ ತಹಶೀಲ್ದಾರ್(Sindagi Tahsildar) ಕಚೇರಿ ಎದುರು ವಿಷದ ಬಾಟಲ್ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಚಾಂದಕವಟೆ ಗ್ರಾಮದ ಶಾಮಲಾಬಾಯಿ ಸುಳ್ಳೊಳ್ಳಿ ಎಂಬುವವರು ‘ಪಕ್ಕದ ಜಮೀನಿನವರಿಗೆ ದಾರಿ ಇದ್ದರೂ ನಮ್ಮದೇ ಜಮೀನಿನಲ್ಲಿ ಹಾಯ್ದು ಹೋಗಲು ಗ್ರಾಮ ಲೆಕ್ಕಿಗ ಪಿ ಕೆ ಹುಡೇದ್ ಎಂಬಾತ ‘ನನ್ನ ಬಳಿ ಸಹಿ ಮಾಡಿಸಿಕೊಂಡು ಅನುವು ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಜೊತೆಗೆ ಈ ವಿಚಾರದಲ್ಲಿ ನನ್ನ ಹಾಗೂ ಮಗನಿಂದ ಒತ್ತಾಯ ಪೂರ್ವಕವಾಗಿ ಸಹಿ ಮಾಡಿಸಿಕೊಂಡಿದ್ದಾರೆಂದು ಆಕ್ರೋಶ ಹೊರಹಾಕಿ, ತಹಶೀಲ್ದಾರ್ ಕಚೇರಿ ಎದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಪಟ್ಟು ಹಿಡಿದಿದ್ದರು. ಕೂಡಲೇ ವಿಷದ ಬಾಟಲ್ ಕಸಿದುಕೊಂಡ ಸ್ಥಳಿಯರು, ತಹಶೀಲ್ದಾರ್ ಪ್ರದೀಪ್ ಹಿರೇಮಠ ಮುಂದೆ ಕರೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ:ವಿಜಯಪುರ: ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ

ನೆಲದ ಮೇಲೆ ಮಹಿಳೆ ಕೂರಿಸಿ ವಿಚಾರಿಸಿದ ತಹಶೀಲ್ದಾರ್ ವಿರುದ್ದ ಸಾರ್ವಜನಿಕರ ಆಕ್ರೋಶ

ದಲಿತ ಸಮಾಜದ ಮಹಿಳೆಯೆಂದು ಆಕೆಯನ್ನು ಹಾಗೂ ಆಕೆಯ ಮಗನನ್ನು, ತಹಶೀಲ್ದಾರ್ ಬಸವರಾಜ ಹಿರೇಮಠ ಅವರು​ ಕಚೇರಿಯಲ್ಲಿ ನೆಲದ ಮೇಲೆ ಮಹಿಳೆ ಕೂರಿಸಿ ವಿಚಾರಿಸಿದ್ದಾರೆ. ಈ ಹಿನ್ನಲೆ ತಹಶೀಲ್ದಾರ್ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ದಲಿತ ಸಮಾಜದ ಮಹಿಳೆಯೆಂದು ಈ ರೀತಿ ನಡೆಸಿಕೊಂಡಿದ್ದು ತಪ್ಪು, ವಿಚಾರಣೆ ನೆಪದಲ್ಲಿ ನೆಲದ ಮೇಲೆ ಕೂಡಿಸಿದ್ದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. ಇನ್ನು ಮಹಿಳೆ ಶಾಮಲಾಬಾಯಿ ಜಮೀನಿನಲ್ಲಿ ಬೇರೆಯವರಿಗೆ ದಾರಿ ನೀಡಿದ್ದಾಗಿ ಒತ್ತಾಯ ಪೂರ್ವಕವಾಗಿ ಸಹಿ ಪಡೆದದವರ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟುಬ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Sat, 20 July 24

ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ