AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಕಂದ! ಎಂಟು ತಿಂಗಳ ಮಗುವನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ

ಕಾಲ ಎಷ್ಟೇ ಬದಲಾದರೂ ಸಮಾಜದಲ್ಲಿ ಜನರ ಮನಸ್ಥಿತಿ ಇನ್ನೂ ಬದಲಾಗಿಲ್ಲ ಎನ್ನಬಹುದು. ಶೈಕ್ಷಣಿಕ, ವೈಜ್ಞಾನಿಕವಾಗಿ ಎಷ್ಟೇ ಸಾಧನೆ ಮಾಡಿದ್ದರೂ ಇಂದಿಗೂ ಹೆಣ್ಣು, ಹುಣ್ಣು ಎಂದೇ ಭಾವಿಸಲಾಗುತ್ತಿದೆ. ನೆಲದಿಂದ ನಭದವರೆಗೂ ಮಹಿಳೆ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದರೂ ಹಿಂದಿನ ಮನಸ್ಥಿತಿ ಇನ್ನೂ ಬದಲಾವಣೆಯೇ ಆಗಿಲ್ಲ. ವಿಜಯಪುರ ನಗರದಲ್ಲಿ ಇಂದು ನಡೆದ ಘಟನೆಯೇ ಇದಕ್ಕೆ ಸಾಕ್ಷಿಯಾಗಿದೆ. ಏಳರಿಂದ ಎಂಟು ತಿಂಗಳ ಹೆಣ್ಣು ಮಗುವನ್ನು ಬಟ್ಟೆಯಲ್ಲಿ ಸುತ್ತಿ ಮಗುವಿನ ತಾಯಿ, ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋಗಿದ್ದಾರೆ. ಪೋಷಕರ ಮನಸ್ಥಿತಿಗೆ ಜನರು ಹಿಡಿ ಹಿಡಿ ಶಾಪ ಹಾಕಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಅಯ್ಯೋ ಕಂದ! ಎಂಟು ತಿಂಗಳ ಮಗುವನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ
ಎಂಟು ತಿಂಗಳ ಮಗುವನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟು ಹೋದ ತಾಯಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Aug 23, 2024 | 3:37 PM

Share

ವಿಜಯಪುರ, ಆ.23: ನಗರದ ಪದ್ಮಾವತಿ ಕಾಲೋನಿ 2 ರಲ್ಲಿ ನಿರ್ಮಾಣ ಹಂತದ ಕಟ್ಟಡದ ಕಾಂಪೌಂಡ್​ನಲ್ಲಿಂದು ಸುಮಾರು 7 ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಮಗು ಪತ್ತೆಯಾಗಿದೆ. ಬಟ್ಟೆಯಲ್ಲಿ ಮಗುವನ್ನು ಇಟ್ಟು ತಾಯಿ ಅಲ್ಲಿಂದ ಪರಾರಿಯಾಗಿದ್ದಾರೆ. ಹೆಣ್ಣು ಮಗುವನ್ನು ಯಾರು ಇಟ್ಟು ಹೋಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಇಂದು ನಸುಕಿನ ಜಾವ ಇದೇ ಕಾಲೋನಿಯ ನಿವಾಸಿ ಸಂತೋಷ್​ ನಾಗೂರ ಎಂಬ ಯುವಕ, ನಿರ್ಮಾಣ ಹಂತದ ಕಟ್ಟಡ ಕಾಂಪೌಂಡ್​ನಲ್ಲಿ ಹೆಣ್ಣು ಮಗು ಇರುವುದನ್ನು ಕಂಡಿದ್ದಾರೆ. ಸುತ್ತಮುತ್ತಲಿನ ಜನರನ್ನು ವಿಚಾರಿಸಿದ ಬಳಿಕ ಸಂತೋಷ್​, ಕಟ್ಟಡದ ಮಾಲೀಕ ಕೃಷ್ಣಪ್ಪ ಬಡಿಗೇರಗೆ ಮಾಹಿತಿ ನೀಡಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕಾಂಪೌಂಡ್​ನಲ್ಲಿ ಹೆಣ್ಣು ಮಗು ಸಿಕ್ಕ ವಿಚಾರ ತಿಳಿಯುತ್ತಿದಂತೆ ಸ್ಥಳೀಯರೆಲ್ಲರೂ ನೆರೆದಿದ್ದರು. ಅಳುತ್ತಿದ್ದ ಮಗುವನ್ನು ಸಂತೈಸಿ ಹಾಲುಣಿಸಿದ್ದಾರೆ. ಬಳಿಕ ಕೃಷ್ಣಪ್ಪ, ಆದರ್ಶ ನಗರ ಪೊಲೀಸರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆದರ್ಶನಗರ ಪೊಲೀಸರು, ಪರಿಶೀಲನೆ ಮಾಡಿ ಅಂಬ್ಯುಲೆನ್ಸ್ ಮೂಲಕ ಮಗುವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಅಮ್ಮನೊಂದಿಗೆ ಬೆಚ್ಚಗೆ ಮಲಗಿದ್ದ 3 ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ!

ಇನ್ನು ಮಗುವಿನ ಬಳಿ ಇತರೆ ಯಾವುದೇ ವಸ್ತುಗಳಾಗಲಿ, ಗುರುತು ಪತ್ತೆ ಹಚ್ಚುವಂತ ಯಾವುದೇ ದಾಖಲೆಗಳು ಸಿಕ್ಕಿಲ್ಲ. ಬಟ್ಟೆಯಲ್ಲಿ ಸುತ್ತಿಟ್ಟು ಹೋಗಿದ್ದು ಮಾತ್ರ ಕಂಡು ಬಂದಿದೆ. ನೆರೆದಿದ್ದವರೆಲ್ಲ ಹೆಣ್ಣು ಮಗುವನ್ನು ಕಂಡು ಮಮ್ಮಲ ಮರುಗಿದರು. ಯಾಕಾಗಿ ಮಗುವಿನ ತಾಯಿ ಬಿಟ್ಟು ಹೋಗಿದ್ದಾಳೆಂದು ಹಿಡಿಶಾಪ ಹಾಕಿದರು. ಶ್ರಾವಣ ಶುಕ್ರವಾರ ಲಕ್ಷ್ಮೀ ಪೂಜೆ ಮಾಡುತ್ತೇವೆ. ಶ್ರದ್ಧಾ ಭಕ್ತಿಯಿಂದ ಲಕ್ಷ್ಮೀ ಪೂಜೆ ಮಾಡುವ ನಾವು ಅದೇ ಮಾತೆಯ ಸ್ವರೂಪಿ ಹೆಣ್ಣನ್ನು ಬಿಟ್ಟು ಹೋಗಿದ್ದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದರು. ಜೊತೆಗೆ ಮಗುವನ್ನು ಬಿಟ್ಟು ಹೋದವರನ್ನು ಪತ್ತೆ ಮಾಡಿ, ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕಂದು ಒತ್ತಾಯ ಮಾಡಿದ್ದಾರೆ.

ಈ ಕುರಿತು ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಬಿಟ್ಟು ಹೋದವರ ಪತ್ತೆಗಾಗಿ ಪೊಲೀಸರು ಮುಂದಾಗಿದ್ಧಾರೆ. ಪದ್ಮಾವತಿ ನಗರದಲ್ಲಿರುವ ಹಾಗೂ ಇಲ್ಲಿ ಸಂಪರ್ಕಿಸುವ ರಸ್ತೆಗಳ ಬಳಿಯ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ವೀಕ್ಷಣೆ ಮಾಡಲಾಗುತ್ತಿದೆ. ಅದರ ಆಧಾರದ ಮೇಲೆ ಹೆಣ್ಣು ಮಗುವನ್ನು ಬಿಟ್ಟು ಹೋದವರ ಪತ್ತೆ ಮಾಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಿದ ಬಳಿಕ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಸುಪರ್ಧಿಗೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Fri, 23 August 24

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು