AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ವ್ಯಕ್ತಿ ಸಾವು

ರಾಜ್ಯಾದ್ಯಂತ ಮೊಹರಂ ಹಬ್ಬವು ಅದ್ದೂರಿಯಾಗಿ ನಡೆದಿದೆ. ಈ ವೇಳೆ ಹಲವೆಡೆ ಅವಘಡಗಳು ಸಂಭವಿಸಿದ್ದು, ವಿಜಯಪುರ(Vijayapura) ನಗರದ ಮೆಹತರ್ ಮಹಲ್ ಎದುರು ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇತ್ತ ಮಸ್ಕಿ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಮೊಹರಂ ಅಲಾಯಿ ಕುಣಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಕೊನೆಯುಸಿರೆಳೆದಿದ್ದಾನೆ.

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ವ್ಯಕ್ತಿ ಸಾವು
ಮೃತ ವ್ಯಕ್ತಿ
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 16, 2024 | 9:10 PM

Share

ವಿಜಯಪುರ, ಜು.16: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ವಿಜಯಪುರ(Vijayapura) ನಗರದ ಮೆಹತರ್ ಮಹಲ್ ಎದುರು ನಡೆದಿದೆ. ವಾಹನ ಚಾಲಕ ಮೊಹಮ್ಮದ್ ಇನಾಂದಾರ್(40) ಮೃತ ವ್ಯಕ್ತಿ. ಎದುರಿಗೆ ಬಂದ‌ ಕಾರಿಗೆ ದಾರಿ ಬಿಡುವ ವೇಳೆ ಟ್ರಾನ್ಸ್​ಫಾರ್ಮರ್​ಗೆ ವಾಹನ ತಗುಲಿದೆ. ಈ ವೇಳೆ ಶಾಕ್​ನಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮತ್ತೋರ್ವ ಸಾಧಿಕ್‌ ಎಂಬಾತನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗೋಲಗುಂಬಜ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಹರಂ ಅಲಾಯಿ ಕುಣಿಗೆ ಬಿದ್ದು ವ್ಯಕ್ತಿ ಸಾವು

ರಾಯಚೂರು: ಮಸ್ಕಿ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಮೊಹರಂ ಅಲಾಯಿ ಕುಣಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಕೊನೆಯುಸಿರೆಳೆದ ಘಟನೆ ನಡೆದಿದೆ. ಯಮನಪ್ಪ ಹಳೆಗೌಡ್ರು(45) ಮೃತ ರ್ದುದೈವಿ. ಇದೇ ಜುಲೈ.14 ರ ರಾತ್ರಿ ಈ ಘಟನೆ ನಡೆದಿದೆ. ಮೊಹರಂ ಹಿನ್ನೆಲೆ ಮೊನ್ನೆ ರಾತ್ರಿ ಬೊಮ್ಮನಾಳ ಗ್ರಾಮದ ಮಸೀದಿ ಎದುರಿನ ಅಲಾಯಿ ಕುಣಿಯಲ್ಲಿ ಆಚರಣೆ ನಡೆಸಲಾಗಿತ್ತು. ಈ ವೇಳೆ ಅಲಾಯ ಕುಣಿಯಲ್ಲಿ ಓಡುತ್ತಿದ್ದಾಗ ಯಮನಪ್ಪ ಕಾಲುಜಾರಿ ಬಿದ್ದಿದ್ದ.

ಇದನ್ನೂ ಓದಿ:ಗೌರಿಬಿದನೂರು ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಯಾವಾಗ ಯಮನಪ್ಪ ಬಿದ್ದನೂ ಕೂಡಲೇ ಆತನ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಸ್ಥಳದಲ್ಲೇ ಯಮನಪ್ಪ ಸಾವನ್ನಪ್ಪಿದ್ದಾನೆ. ಇನ್ನು ಕುಣಿಯಲ್ಲಿ ಬಿದ್ದಿದ್ದವನನ್ನು ಮೇಲೇತ್ತಿದ್ದ ಸ್ಥಳೀಯರು, ಬಿಂದಿಗೆಗಳ ಮೂಲಕ ನೀರು ಎರಚಿ ಯಮನಪ್ಪ ರಕ್ಷಣೆಗೆ ಗ್ರಾಮಸ್ಥರು ಯತ್ನಿಸಿದ್ದಾರೆ. ಆದರೆ, ತೀವ್ರವಾಗಿ ಬೆಂಕಿ ತಗುಲಿದ ಹಿನ್ನೆಲೆ ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ