AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ವ್ಯಕ್ತಿ ಸಾವು

ರಾಜ್ಯಾದ್ಯಂತ ಮೊಹರಂ ಹಬ್ಬವು ಅದ್ದೂರಿಯಾಗಿ ನಡೆದಿದೆ. ಈ ವೇಳೆ ಹಲವೆಡೆ ಅವಘಡಗಳು ಸಂಭವಿಸಿದ್ದು, ವಿಜಯಪುರ(Vijayapura) ನಗರದ ಮೆಹತರ್ ಮಹಲ್ ಎದುರು ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇತ್ತ ಮಸ್ಕಿ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಮೊಹರಂ ಅಲಾಯಿ ಕುಣಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಕೊನೆಯುಸಿರೆಳೆದಿದ್ದಾನೆ.

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ವ್ಯಕ್ತಿ ಸಾವು
ಮೃತ ವ್ಯಕ್ತಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 16, 2024 | 9:10 PM

Share

ವಿಜಯಪುರ, ಜು.16: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ವಿಜಯಪುರ(Vijayapura) ನಗರದ ಮೆಹತರ್ ಮಹಲ್ ಎದುರು ನಡೆದಿದೆ. ವಾಹನ ಚಾಲಕ ಮೊಹಮ್ಮದ್ ಇನಾಂದಾರ್(40) ಮೃತ ವ್ಯಕ್ತಿ. ಎದುರಿಗೆ ಬಂದ‌ ಕಾರಿಗೆ ದಾರಿ ಬಿಡುವ ವೇಳೆ ಟ್ರಾನ್ಸ್​ಫಾರ್ಮರ್​ಗೆ ವಾಹನ ತಗುಲಿದೆ. ಈ ವೇಳೆ ಶಾಕ್​ನಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮತ್ತೋರ್ವ ಸಾಧಿಕ್‌ ಎಂಬಾತನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗೋಲಗುಂಬಜ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಹರಂ ಅಲಾಯಿ ಕುಣಿಗೆ ಬಿದ್ದು ವ್ಯಕ್ತಿ ಸಾವು

ರಾಯಚೂರು: ಮಸ್ಕಿ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಮೊಹರಂ ಅಲಾಯಿ ಕುಣಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಕೊನೆಯುಸಿರೆಳೆದ ಘಟನೆ ನಡೆದಿದೆ. ಯಮನಪ್ಪ ಹಳೆಗೌಡ್ರು(45) ಮೃತ ರ್ದುದೈವಿ. ಇದೇ ಜುಲೈ.14 ರ ರಾತ್ರಿ ಈ ಘಟನೆ ನಡೆದಿದೆ. ಮೊಹರಂ ಹಿನ್ನೆಲೆ ಮೊನ್ನೆ ರಾತ್ರಿ ಬೊಮ್ಮನಾಳ ಗ್ರಾಮದ ಮಸೀದಿ ಎದುರಿನ ಅಲಾಯಿ ಕುಣಿಯಲ್ಲಿ ಆಚರಣೆ ನಡೆಸಲಾಗಿತ್ತು. ಈ ವೇಳೆ ಅಲಾಯ ಕುಣಿಯಲ್ಲಿ ಓಡುತ್ತಿದ್ದಾಗ ಯಮನಪ್ಪ ಕಾಲುಜಾರಿ ಬಿದ್ದಿದ್ದ.

ಇದನ್ನೂ ಓದಿ:ಗೌರಿಬಿದನೂರು ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಯಾವಾಗ ಯಮನಪ್ಪ ಬಿದ್ದನೂ ಕೂಡಲೇ ಆತನ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಸ್ಥಳದಲ್ಲೇ ಯಮನಪ್ಪ ಸಾವನ್ನಪ್ಪಿದ್ದಾನೆ. ಇನ್ನು ಕುಣಿಯಲ್ಲಿ ಬಿದ್ದಿದ್ದವನನ್ನು ಮೇಲೇತ್ತಿದ್ದ ಸ್ಥಳೀಯರು, ಬಿಂದಿಗೆಗಳ ಮೂಲಕ ನೀರು ಎರಚಿ ಯಮನಪ್ಪ ರಕ್ಷಣೆಗೆ ಗ್ರಾಮಸ್ಥರು ಯತ್ನಿಸಿದ್ದಾರೆ. ಆದರೆ, ತೀವ್ರವಾಗಿ ಬೆಂಕಿ ತಗುಲಿದ ಹಿನ್ನೆಲೆ ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ