AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮಟ್ಟಿ ಶಾಸ್ತ್ರಿ ಸಾಗರಕ್ಕೆ ಹೆಚ್ಚಿದ ಒಳಹರಿವು; ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು

ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ(Lal Bahadur Shastri Sagar Dam) ಕ್ಕೆ ಒಂದೇ ದಿನದಲ್ಲಿ ಒಳಹರಿವು ದ್ವಿಗುಣಗೊಂಡಿದೆ. ಪರಿಣಾಮ ಜಲಾಶಯದಿಂದ ಕೃಷ್ಣಾ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ಸಂಜೆ ವೇಳೆಗೆ ಒಂದೂವರೆ ಲಕ್ಷ ಕ್ಯೂಸೆಕ್ ಮೀರಿದೆ. ಈ ಹಿನ್ನಲೆ ಅಧಿಕಾರಿಗಳು, ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದ್ದಾರೆ.

ಆಲಮಟ್ಟಿ ಶಾಸ್ತ್ರಿ ಸಾಗರಕ್ಕೆ ಹೆಚ್ಚಿದ ಒಳಹರಿವು; ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು
ಆಲಮಟ್ಟಿ ಡ್ಯಾಂಗೆ ಹೆಚ್ಚಿದ ಒಳಹರಿವು, ಕೃಷ್ಣಾ ನದಿ ತೀರದ ಜನರಿಗೆ ಎಚ್ಚರಿಕೆ
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 21, 2024 | 9:59 PM

Share

ವಿಜಯಪುರ, ಜು.21: ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ(Lal Bahadur Shastri Sagar Dam) ಕ್ಕೆ ಒಂದೇ ದಿನದಲ್ಲಿ ಒಳಹರಿವು ದ್ವಿಗುಣಗೊಂಡಿದೆ. ಪರಿಣಾಮ ಜಲಾಶಯದಿಂದ ಕೃಷ್ಣಾ ನದಿಗೆ ಬಿಡುತ್ತಿರುವ ನೀರಿನ ಪ್ರಮಾಣ ಸಂಜೆ ವೇಳೆಗೆ ಒಂದೂವರೆ ಲಕ್ಷ ಕ್ಯೂಸೆಕ್ ಮೀರಿದೆ. ಇಂದು (ಭಾನುವಾರ) ಬೆಳಿಗ್ಗೆ ಜಲಾಶಯಕ್ಕೆ 87,127 ಕ್ಯೂಸೆಕ್ ಇದ್ದ ಒಳಹರಿವು, ಮಧ್ಯಾಹ್ನದ ವೇಳೆಗೆ 1.25 ಲಕ್ಷಕ್ಕೆ ಏರಿಕೆಯಾಗಿತ್ತು. ಪರಿಣಾಮ ಬೆಳಿಗ್ಗೆ 8 ಕ್ಕೆ 99,584 ಕ್ಯೂಸೆಕ್ ಇದ್ದ ಜಲಾಶಯದ ಹೊರ ಹರಿವಿನ ಪ್ರಮಾಣ ಮಧ್ಯಾಹ್ನದ ವೇಳೆಗೆ 1.25 ಲಕ್ಷ ಕ್ಯೂಸೆಕ್ ಗೆ ಏರಿತ್ತು.

ನಂತರ ಸಾಯಂಕಾಲದ ವೇಳೆಗೆ ಶಾಸ್ತ್ರೀ ಸಾಗರಕ್ಕೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ 1.25 ಲಕ್ಷ ಕ್ಯೂಸೆಕ್ ಗೆ ಏರಿಕೆಯಾದರೆ ಹೊರ ಹರಿವಿನ ಪ್ರಮಾಣ 1.50 ಲಕ್ಷ ಕ್ಯೂಸೆಕ್ ಗೆ ಏರಿಕೆಯಾಗಿದೆ. ಶನಿವಾರ ರಾತ್ರಿಯಿಂದಲೇ ಜಲಾಶಯಕ್ಕೆ ಒಳಹರಿವಿನ ಪ್ರಮಾಣದ ಭಾರಿ ಏರಿಕೆ ಕಂಡು ಬರುತ್ತಲೇ ಇತ್ತು.

ಇದನ್ನೂ ಓದಿ: ಆಲಮಟ್ಟಿಗೆ 3 ದಿನಗಳಲ್ಲಿ 6 ಟಿಎಂಸಿ ಒಳಹರಿವು, ಜು.05ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಪ್ರವಾಹದ ಮುನ್ನೆಚ್ಚರಿಕೆ ನೀಡಿದ ಅಧಿಕಾರಿಗಳು

ಇದನ್ನರಿತ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಭಾನುವಾರ ಬೆಳಗಿನಿಂದಲೇ ಕೃಷ್ಣಾ ನದಿ ಮೂಲಕ ಬಸವ ಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿ ಬಿಡಲು ಆರಂಭಿಸಿದ್ದರು. ಕಾರಣ, ಶಾಸ್ತ್ರಿ ಸಾಗರದಿಂದ ಕಾಲ ಕಾಲಕ್ಕೆ ನದಿಗೆ ಬಿಡುತ್ತಿರುವ ನೀರಿನ‌ ಕುರಿತು ನದಿ ತೀರದ ಜನರಿಗೆ ಮಾಹಿತಿ ನೀಡುತ್ತ, ಪ್ರವಾಹದ ಮುನ್ನೆಚ್ಚರಿಕೆ ನೀಡಿದ್ದಾರೆ. ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ