AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮಂಗಳಮುಖಿಯರಿಂದ ಯುವತಿ ಮೇಲೆ ಹಲ್ಲೆ ಪ್ರಕರಣ; ಐವರು ಅರೆಸ್ಟ್​

ಏಳೆಂಟು ಜನ ಮಂಗಳಮುಖಿಯರು ಸೇರಿಕೊಂಡು ವಿಜಯಪುರ ನಗರದ ಕೇಂದ್ರ ಬಸ್ ನಿಲ್ಧಾಣದ ಬಳಿ ಜುಲೈ 21 ರಂದು ಯುವತಿಯನ್ನು ಸಂಪೂರ್ಣ ಬೆತ್ತಲೆ ಮಾಡಿ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ, ವಿಡಿಯೋ ವೈರಲ್ ಆದ 24 ಗಂಟೆಗಳಲ್ಲಿ ಐವರು ಮಂಗಳಮುಖಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಜಯಪುರ: ಮಂಗಳಮುಖಿಯರಿಂದ ಯುವತಿ ಮೇಲೆ ಹಲ್ಲೆ ಪ್ರಕರಣ; ಐವರು ಅರೆಸ್ಟ್​
ಮಂಗಳಮುಖಿಯರಿಂದ ಯುವತಿ ಮೇಲೆ ಹಲ್ಲೆ; ಐವರು ಅರೆಸ್ಟ್​
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 01, 2024 | 11:01 PM

Share

ವಿಜಯಪುರ, ಆ.01: ಮಂಗಳಮುಖಿಯರು ಸೇರಿಕೊಂಡು ಹೆಣ್ತನದಿಂದ ವಿಮುಖಳಾಗಿ ಪುರುಷರಂತೆ ವೇಷಭೂಷಣ ತೊಟ್ಟಿದ್ದ ಯುವತಿಯನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್​ ಮಾಡಲಾಗಿದೆ. ವಿಜಯಪುರ(Vijayapura) ನಗರದ ಕೇಂದ್ರ ಬಸ್ ನಿಲ್ಧಾಣದ ಬಳಿ ಜುಲೈ 21 ರಂದು ಯುವತಿಯನ್ನು ಸಂಪೂರ್ಣ ಬೆತ್ತಲೆ ಮಾಡಿ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ, ವಿಡಿಯೋ ವೈರಲ್ ಆದ 24 ಗಂಟೆಗಳಲ್ಲಿ ಐವರು ಮಂಗಳಮುಖಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

6 ಮಂಗಳಮುಖಿಯರ ಮೇಲೆ ದೂರು

ಹಲ್ಲೆಗೊಳಗಾದ ಯುವತಿ (ರೇಖಾ ರೆಡ್ಡಿ ಉರ್ಪ್ ಸಚಿವ ರೆಡ್ಡಿ) ಅವರು 6 ಮಂಗಳಮುಖಿಯರ ಮೇಲೆ ನಗರದ ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಸದ್ಯ ಮಂಗಳಮುಖಿಯರಾದ ಅಶ್ವಿನಿ, ಹುಲಿಗೆಮ್ಮಾ, ಕವಿತಾ, ದಾನಮ್ಮಾ ಹಾಗೂ ಮಾಹನಮ್ಮಾ ಅವರನ್ನು ಬಂಧಿಸಲಾಗಿದೆ. ಈ ಹಲ್ಲೆಯ ಕುರಿತು ತನಿಖೆ ಮಾಡಲಾಗುತ್ತಿದೆ, ತನಿಖೆ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ವಿಜಯಪುರ ಎಸ್ಪಿ ಋಷಿಕೇಷ ಸೋನೆವಣೆ ಹೇಳಿದ್ದಾರೆ.

ಇದನ್ನೂ ಓದಿ:ವಿಜಯಪುರ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ

ಇನ್ನು ತನ್ನ ಮೇಲೆ ಹಲ್ಲೆ ಮಾಡಿರೋ ಮಂಗಳಮುಖಿಯರ ಬಂಧನವಾಗಿದ್ದಕ್ಕೆ ಹಲ್ಲೆಗೊಳಗಾದ ಯುವತಿ ಸಂತಸ ಪಟ್ಟು, ನಾನು ಹೆಣ್ಣಾಗಿ ಹುಟ್ಟಿ ಪುರುಷರಂತೆ ಬದಲಾಗಿದ್ದೇನೆ. ಮಂಗಳಮುಖಿ ಅಶ್ವಿನಿ ಜೊತೆಗೆ ನನ್ನ ಒಡನಾಟ ಇತ್ತು. ಆಕೆ ಜೊತೆಗೆ ಪೂನಾದಲ್ಲೇ ಇದ್ದೇ. ನಾನು ಗಂಡಲ್ಲಾ, ಹೆಣ್ಣು ಎಂದು ಮಂಗಳಮುಖಿಯರಿಗೆ ಗೊತ್ತಾಗಿತ್ತು. ಪೂನಾದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದ್ದರು ಆಗ ನಾನು ನಮ್ಮೂರಿಗೆ ಬಂದು ನೆಲೆಸಿದ್ದೆ. ನಂತರ ಇನ್ಸಸ್ಟಾಗ್ರಾಂನಲ್ಲಿ ನನ್ನ ಮೇಲೆ ಹಲ್ಲೆ ಮಾಡಿದವರಿಗೆ ಬೈಯ್ದ ವಿಡಿಯೋ ಪೋಸ್ಟ್ ಮಾಡಿದ್ದೇ. ಅದರಿಂದ ಸಿಟ್ಟಾಗಿ ಮಂಗಳಮುಖಿಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಮಂಗಳಮುಖಿಯರ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕೆಂದು ಹಲ್ಲೆಗೊಳದಾದ ಯುವತಿ ಹೇಳಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 pm, Thu, 1 August 24

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ