ವಿಜಯಪುರ: ಮಂಗಳಮುಖಿಯರಿಂದ ಯುವತಿ ಮೇಲೆ ಹಲ್ಲೆ ಪ್ರಕರಣ; ಐವರು ಅರೆಸ್ಟ್​

ಏಳೆಂಟು ಜನ ಮಂಗಳಮುಖಿಯರು ಸೇರಿಕೊಂಡು ವಿಜಯಪುರ ನಗರದ ಕೇಂದ್ರ ಬಸ್ ನಿಲ್ಧಾಣದ ಬಳಿ ಜುಲೈ 21 ರಂದು ಯುವತಿಯನ್ನು ಸಂಪೂರ್ಣ ಬೆತ್ತಲೆ ಮಾಡಿ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ, ವಿಡಿಯೋ ವೈರಲ್ ಆದ 24 ಗಂಟೆಗಳಲ್ಲಿ ಐವರು ಮಂಗಳಮುಖಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಜಯಪುರ: ಮಂಗಳಮುಖಿಯರಿಂದ ಯುವತಿ ಮೇಲೆ ಹಲ್ಲೆ ಪ್ರಕರಣ; ಐವರು ಅರೆಸ್ಟ್​
ಮಂಗಳಮುಖಿಯರಿಂದ ಯುವತಿ ಮೇಲೆ ಹಲ್ಲೆ; ಐವರು ಅರೆಸ್ಟ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 01, 2024 | 11:01 PM

ವಿಜಯಪುರ, ಆ.01: ಮಂಗಳಮುಖಿಯರು ಸೇರಿಕೊಂಡು ಹೆಣ್ತನದಿಂದ ವಿಮುಖಳಾಗಿ ಪುರುಷರಂತೆ ವೇಷಭೂಷಣ ತೊಟ್ಟಿದ್ದ ಯುವತಿಯನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್​ ಮಾಡಲಾಗಿದೆ. ವಿಜಯಪುರ(Vijayapura) ನಗರದ ಕೇಂದ್ರ ಬಸ್ ನಿಲ್ಧಾಣದ ಬಳಿ ಜುಲೈ 21 ರಂದು ಯುವತಿಯನ್ನು ಸಂಪೂರ್ಣ ಬೆತ್ತಲೆ ಮಾಡಿ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ, ವಿಡಿಯೋ ವೈರಲ್ ಆದ 24 ಗಂಟೆಗಳಲ್ಲಿ ಐವರು ಮಂಗಳಮುಖಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

6 ಮಂಗಳಮುಖಿಯರ ಮೇಲೆ ದೂರು

ಹಲ್ಲೆಗೊಳಗಾದ ಯುವತಿ (ರೇಖಾ ರೆಡ್ಡಿ ಉರ್ಪ್ ಸಚಿವ ರೆಡ್ಡಿ) ಅವರು 6 ಮಂಗಳಮುಖಿಯರ ಮೇಲೆ ನಗರದ ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಸದ್ಯ ಮಂಗಳಮುಖಿಯರಾದ ಅಶ್ವಿನಿ, ಹುಲಿಗೆಮ್ಮಾ, ಕವಿತಾ, ದಾನಮ್ಮಾ ಹಾಗೂ ಮಾಹನಮ್ಮಾ ಅವರನ್ನು ಬಂಧಿಸಲಾಗಿದೆ. ಈ ಹಲ್ಲೆಯ ಕುರಿತು ತನಿಖೆ ಮಾಡಲಾಗುತ್ತಿದೆ, ತನಿಖೆ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ವಿಜಯಪುರ ಎಸ್ಪಿ ಋಷಿಕೇಷ ಸೋನೆವಣೆ ಹೇಳಿದ್ದಾರೆ.

ಇದನ್ನೂ ಓದಿ:ವಿಜಯಪುರ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಹಲ್ಲೆ

ಇನ್ನು ತನ್ನ ಮೇಲೆ ಹಲ್ಲೆ ಮಾಡಿರೋ ಮಂಗಳಮುಖಿಯರ ಬಂಧನವಾಗಿದ್ದಕ್ಕೆ ಹಲ್ಲೆಗೊಳಗಾದ ಯುವತಿ ಸಂತಸ ಪಟ್ಟು, ನಾನು ಹೆಣ್ಣಾಗಿ ಹುಟ್ಟಿ ಪುರುಷರಂತೆ ಬದಲಾಗಿದ್ದೇನೆ. ಮಂಗಳಮುಖಿ ಅಶ್ವಿನಿ ಜೊತೆಗೆ ನನ್ನ ಒಡನಾಟ ಇತ್ತು. ಆಕೆ ಜೊತೆಗೆ ಪೂನಾದಲ್ಲೇ ಇದ್ದೇ. ನಾನು ಗಂಡಲ್ಲಾ, ಹೆಣ್ಣು ಎಂದು ಮಂಗಳಮುಖಿಯರಿಗೆ ಗೊತ್ತಾಗಿತ್ತು. ಪೂನಾದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದ್ದರು ಆಗ ನಾನು ನಮ್ಮೂರಿಗೆ ಬಂದು ನೆಲೆಸಿದ್ದೆ. ನಂತರ ಇನ್ಸಸ್ಟಾಗ್ರಾಂನಲ್ಲಿ ನನ್ನ ಮೇಲೆ ಹಲ್ಲೆ ಮಾಡಿದವರಿಗೆ ಬೈಯ್ದ ವಿಡಿಯೋ ಪೋಸ್ಟ್ ಮಾಡಿದ್ದೇ. ಅದರಿಂದ ಸಿಟ್ಟಾಗಿ ಮಂಗಳಮುಖಿಯರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಮಂಗಳಮುಖಿಯರ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕೆಂದು ಹಲ್ಲೆಗೊಳದಾದ ಯುವತಿ ಹೇಳಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 pm, Thu, 1 August 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us