AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಪತಿ ಚೌಕ್ ಮೇಲೆ ಕಲ್ಲು ಎಸೆತ: ಆರೋಪಿ ಸೊಹೇಲ್, ಜುಬೇರ್ ಹೆಡೆಮುರಿ ಕಟ್ಟಿದ ಪೋಲಿಸರು

ಮಂಡ್ಯ, ದಾವಣಗೆರೆ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಮಾಡಿದ್ದ ದುರುಳರು ವಿಜಯಪುರದಲ್ಲೂ ಗಲಭೆ ಉಂಟು ಮಾಡಲು ಮುಂದಾಗಿದ್ದರು. ಆದರೆ, ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ‌ ಆರೋಪಿಗಳನ್ನು ಬಂಧಿಸಿದ್ದು, ಕೋಮ ಗಲಾಟೆ ತಪ್ಪಿಸಿದ್ದಾರೆ. ಮಾಡಬಾರದ ಕೆಲಸ ಮಾಡಿದ ಇಬ್ಬರನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಗಣಪತಿ ಚೌಕ್ ಮೇಲೆ ಕಲ್ಲು ಎಸೆತ: ಆರೋಪಿ ಸೊಹೇಲ್, ಜುಬೇರ್ ಹೆಡೆಮುರಿ ಕಟ್ಟಿದ ಪೋಲಿಸರು
ವಿಜಯಪುರದಲ್ಲಿ ಚತುರ್ಮುಖ ಗಣೇಶನಿಗೆ ಕಲ್ಲು ತೂರಿದ ದುಷ್ಕರ್ಮಿಗಳು ಆರೆಸ್ಟ್​
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 04, 2024 | 5:46 PM

Share

ವಿಜಯಪುರ, ಅ.04: ಗುಮ್ಮಟ ನಗರ ವಿಜಯಪುರದ ಐತಿಹಾಸಿಕ ಗಣಪತಿ ಚೌಕ್​ನಲ್ಲಿ ಕಲ್ಲೆಸೆದು ವಿಕೃತಿ ಮೆರೆದಿದ್ದ ಇಬ್ಬರು ಮುಸ್ಲಿಂ ಯುವಕರನ್ನ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ(Vijayapura)ದ ಅಫಜಲಪುರ ಟಕ್ಕೆ ನಿವಾಸಿಗಳಾದ ಸೋಹೆಲ್ ಜಮಾದಾರ್ ಹಾಗೂ ಜುಬೇರ್ ಬಂಧಿತ ಆರೋಪಿಗಳು. ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಆಧಾರದ ಮೇಲೆ ಈ ಇಬ್ಬರು ದುರುಳರನ್ನ ಬಂಧಿಸಿದ್ದಾರೆ.

ಏನಿದು ಘಟನೆ?

ಇದೇ ಅಕ್ಟೋಬರ್ 3 ರ ಮಧ್ಯರಾತ್ರಿ 1 ಗಂಟೆಗೆ ಆಟೋದಲ್ಲಿ ಗಣೇಶ ವೃತ್ತದ ಬಳಿ ಬಂದ  ಕಿಡಿಗೇಡಿಗಳು, ಕಲ್ಲು ಎಸೆಯಲು ಮುಂದಾಗುತ್ತಾರೆ. ಈ ವೇಳೆ ಸ್ಥಳಕ್ಕೆ ಬಂದ್ ಹೋಮ ಗಾರ್ಡ್, ಇಬ್ಬರನ್ನ ತಡೆಯಲು ಮುಂದಾಗಿದ್ದರು. ಈ ವೇಳೆ ಇಬ್ಬರು ಕಲ್ಲು ತೂರಾಟ ಮಾಡಿ, ಬಳಿಕ ಅದರ ಪೋಟೋ ತೆಗೆದುಕೊಂಡು ಹೋಗುತ್ತಾರೆ. ವಿಡಿಯೋದಲ್ಲಿ ಕಂಡ ಆಟೋದ ಆಧಾರದ ಮೇಲೆ ಆರೋಪಿಗಳನ್ನ ಬಂಧಿಸಿದ್ದಾರೆ.

ಇದನ್ನೂ ಓದಿ:ವಿಜಯಪುರದ ಚತುರ್ಮುಖ ಗಣೇಶನಿಗೆ ಕಲ್ಲು ತೂರಿದ ದುಷ್ಕರ್ಮಿಗಳು; ಸ್ಥಳದಲ್ಲಿ ಬಿಗುವಿನ ವಾತಾವರಣ

ಘಟನೆ ಬಳಿಕ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆ ಮುಖಂಡರು ದೂರು ದಾಖಲಿಸಿದ್ದರು. ಜೊತೆಗೆ ಕತ್ಯದಲ್ಲಿ ಸೆರೆಸಿಕ್ಕ ಆಟೋ, ನಿತ್ಯ ಆಶ್ರಮ ರಸ್ತೆಯಲ್ಲಿ ಓಡಾಡುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದರು. ಇದೀಗ ತನಿಖೆ ನಡೆಸಿ ಇಬ್ಬರನ್ನ ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಬೇಕಂತಲೇ ಕಲ್ಲು ಎಸೆದು ಕೋಮ ಗಲಭೆ ಹಬ್ಬಿಸಲು ಮುಂದಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಡಿಯೋ ವೈರಲ್ ಆಗುತ್ತಲ್ಲೇ ಆಕ್ರೋಶಗೊಂಡ ಹಿಂದೂ ಮುಖಂಡರು, ನೇರ ಸವಾಲು ಹಾಕಿದ್ದಾರೆ. ನವರಾತ್ರಿ ಹಬ್ಬದ ಪ್ರಯುಕ್ತ ಶಾಂತವಾಗಿದ್ದೇವೆ. ಮುಂದಿನ ದಿನಗಳಲ್ಲಿ ನಿಮಗೆ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ‌.

ಘಟನೆ ಬಳಿಕ ಇಡೀ ವಿಜಯಪುರದಲ್ಲಿ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಂತವಾಗಿದ್ದ ವಿಜಯಪುರದಲ್ಲಿ ದುರುಳರಿಬ್ಬರು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಹಿಂದೂಗಳ ಸಂಯಮದಿಂದ ವರ್ತಿಸಿ ಪರಿಸ್ಥಿತಿ ಶಾಂತವಾಗಿಸಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ