ಕಳ್ಳತನಕ್ಕೆ ಬಂದಿದ್ದ ಕಳ್ಳನ ಕರಾಮತ್ತು; ಸಾರ್ವಜನಿಕರ ಕೈಗೆ ಸಿಗ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನ

ಇತ್ತೀಚೆಗೆ ಕಳ್ಳತನ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಪೊಲೀಸರು ಎಷ್ಟೇ ಕ್ರಮಕೈಗೊಂಡರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ವಿಜಯಪುರ (Vijayapura) ನಗರದ ಶಿಕಾರಿಖಾನೆಯಲ್ಲಿ ಕಳ್ಳತನ ಮಾಡಲು‌ ಬಂದಿದ್ದ ಕಳ್ಳ, ಸಾರ್ವಜನಿಕರ ಕೈಗೆ ಸಿಗುತ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಎಪಿಎಂಸಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳತನಕ್ಕೆ ಬಂದಿದ್ದ ಕಳ್ಳನ ಕರಾಮತ್ತು; ಸಾರ್ವಜನಿಕರ ಕೈಗೆ ಸಿಗ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನ
ನಗ್ನನಾಗಿ ಪರಾರಿಯಾಗಲು ಯತ್ನಿಸಿದ ಕಳ್ಳ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 07, 2024 | 3:02 PM

ವಿಜಯಪುರ, ಜು.07: ಕಳ್ಳತನ ಮಾಡಲು‌ ಬಂದಿದ್ದ ಕಳ್ಳ, ಸಾರ್ವಜನಿಕರ ಕೈಗೆ ಸಿಗುತ್ತಿದ್ದಂತೆ ಬಟ್ಟೆ ಬರೆ ಕಳಚಿ‌ ನಗ್ನನಾಗಿ ಪರಾರಿಯಾಗಲು ಯತ್ನಿಸಿದ ಘಟನೆ ವಿಜಯಪುರ(Vijayapura) ನಗರದ ಶಿಕಾರಿಖಾನೆಯಲ್ಲಿ ನಡೆದಿದೆ. ನಗ್ನಗೊಂಡ ಸ್ಥಿತಿಯಲ್ಲೇ‌ ಜನರು ಕಳ್ಳನನ್ನ ಹಿಡಿದು ಕಟ್ಟಿ ಹಾಕಿದ್ದಾರೆ. ಇನ್ನು ಈ ಕಳ್ಳ, ತನ್ನ ದೇಹಕ್ಕೆಲ್ಲ ಎಣ್ಣೆ ಹಚ್ಚಿಕೊಂಡು ಬಂದಿದ್ದನಂತೆ. ಕೂಡಲೇ ಆತನನ್ನು ಹಗ್ಗದಿಂದ ಕಟ್ಟಿ ಪೊಲಿಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾಸ್ ಕಟರ್ ಬಳಸಿ ಎಟಿಎಂ ನಲ್ಲಿ ಹಣ ಕಳ್ಳತನ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಎಟಿಎಂ ನಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ತಡರಾತ್ರಿ ಎಟಿಎಂ ಗೆ ನುಗ್ಗಿದ ಖದೀಮರು, ಸಿಸಿ ಕ್ಯಾಮರಾಗಳಿಗೆ ಪೆಯೀಂಟ್ ಸ್ಪ್ರೇ ಮಾಡಿ. ಗ್ಯಾಸ್​ ಕಟರ್​ ಬಳಸಿ ಎಸ್​ಬಿಐ ಬ್ಯಾಂಕ್​ಗೆ ಸೇರಿದ ಎಟಿಎಮ್​ನಿಂದ ಬರೋಬ್ಬರಿ 15 ಲಕ್ಷಕ್ಕೂ ಅಧಿಕ ಹಣವನ್ನು ಕಳ್ಳತನ ಮಾಡಿ ಎಸ್ಕೇಫ್​ ಆಗಿದ್ದಾರೆ. ಯಾವುದೇ ಸೆಕ್ಯೂರಿಟಿ ಗಾರ್ಡ್​ಗಳಿಲ್ಲದ ಕಾರಣ ಈ ಘಟನೆ ನಡೆದಿದೆ. ಇನ್ನು ಬೆಳಗ್ಗೆ ಎಟಿಎಂ ಓಪನ್ ಆಗಿರುವುದನ್ನ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು  ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಮನೆ ಬೀಗ ಮುರಿದು ಚಿನ್ನಾಭರಣ ಕಳ್ಳತನ; ರಾಯರ ದರ್ಶನ ಪಡೆದು ಮನೆಗೆ ವಾಪಸ್ಸಾದವರಿಗೆ ಬಿಗ್ ಶಾಕ್

ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಬೈಕ್ ಸವಾರ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಬೆಸಗರಹಳ್ಳಿ ಗ್ರಾಮದ ನಿವಾಸಿ ಮಧುಕುಮಾರ್(34) ಮೃತ ರ್ದುದೈವಿ. ಈ ಕುರಿತು ಮದ್ದೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸ್ಥಳೀಯ ಪತ್ರಿಕೆ ವರದಿಗಾರನಾಗಿದ್ದ ಮಧುಕುಮಾರ
ಕೆಲಸ ಮುಗಿಸಿ ರಾತ್ರಿ 9 ಗಂಟೆಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Sun, 7 July 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us