ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ವಿಜಯಪುರ (Vijayapura) ತಾಲೂಕಿನ ದ್ಯಾಬೇರಿ ಗ್ರಾಮದ ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಸಾವು
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 18, 2024 | 5:36 PM

ವಿಜಯಪುರ, ಜೂ.18: ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ ವಿಜಯಪುರ (Vijayapura) ತಾಲೂಕಿನ ದ್ಯಾಬೇರಿ ಗ್ರಾಮದ ಕೆರೆಯಲ್ಲಿ ನಡೆದಿದೆ. ರೋಹಿತ್ ಅನಿಲ್ ಚವ್ಹಾಣ್(8) ಹಾಗೂ ವಿಜಯ ಪಿಂಟು ಚವ್ಹಾಣ್(16) ಮೃತರು. ಕೆರೆಯಲ್ಲಿ ಮೀನು ಹಿಡಿಲು ತೆರಳಿದ್ದಾಗ ವಿದ್ಯುತ್ ತಂತಿ ತುಂಡಾಗಿ ಕೆರೆಗೆ ಬಿದ್ದಿದ್ದನ್ನ ಗಮನಿಸದೆ ಇಬ್ಬರು ಬಾಲಕರು ಕೆರೆಗೆ ಇಳಿದಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

2 ಬೈಕ್​​ಗಳ ಮುಖಾಮುಖಿ ಡಿಕ್ಕಿ; ಓರ್ವ ಸಾವು

ಚಿತ್ರದುರ್ಗ: ಚಿತ್ರದುರ್ಗದ ಜೈಲ್ ರಸ್ತೆಯಲ್ಲಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದರೆ,  ಇಬ್ಬರಿಗೆ ಗಾಯವಾಗಿದೆ. ಕೂಡಲೇ ಗಾಯಾಳುಗಳನ್ನು ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈವರೆಗೆ ಮೃತ ವ್ಯಕ್ತಿಯ ಗುರುತು ಪತ್ತೆ ಆಗಿಲ್ಲ. ಈ ಕುರಿತು ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲಾರಿ ಡಿಕ್ಕಿ: ಕೂಡಲಸಂಗಮಕ್ಕೆ ತೆರಳುತ್ತಿದ್ದ ಬಾಲಕರಿಬ್ಬರ ದುರ್ಮರಣ

ಅಂಗಡಿಗಳ ಸೆಟರ್ಸ್ ಕೀಲಿ ಮುರಿದು ಸರಣಿ ಕಳ್ಳತನ

ಬಾಗಲಕೋಟೆ: ಇಳಕಳ್​ ನಗರದ ಬಸವೇಶ್ವರ ಸರ್ಕಲ್​​ ಬಳಿ ನಾಲ್ಕು ಅಂಗಡಿ ಹಾಗೂ N.H. ಸರ್ವಿಸ್​ ರಸ್ತೆಯ ಹನುಮಸಾಗರ ರಸ್ತೆಯಲ್ಲಿ ಮುಂಜಾನೆ 6 ರಿಂದ 7 ಅಂಗಡಿಗಳ ಕೀ ಮುರಿದು ಸರಣಿ ಕಳ್ಳತನ ಮಾಡಲಾಗಿದೆ. ಮುಖ ಕಾಣದಂತೆ ಕ್ಯಾಪ್​ ಧರಿಸಿ ಕಬ್ಬಿಣದ ರಾಡ್​ನಿಂದ ಅಂಗಡಿಗಳ ಕೀ ಮುರಿದು ಮೊಬೈಲ್, 35 ಸಾವಿರ ಕಳ್ಳತನ ಎಸಗಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕಳ್ಳತನ‌ವಾದ ಅಂಗಡಿಗಳಿಗೆ ಇಳಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us