AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕರ ಪುಂಡಾಟ; ಇಬ್ಬರು ಅರೆಸ್ಟ್​

ಗಣೇಶ ವಿಸರ್ಜನೆ ವೇಳೆ ಇಬ್ಬರು ವ್ಯಕ್ತಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಮೆರೆದ ಘಟನೆ ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ನಡೆದಿದೆ. ಫೈರ್​ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕರ ಪುಂಡಾಟ; ಇಬ್ಬರು ಅರೆಸ್ಟ್​
ಗಣೇಶ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕರ ಪುಂಡಾಟ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 18, 2024 | 4:59 PM

Share

ವಿಜಯಪುರ, ಸೆ.18: ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಇಬ್ಬರು ವ್ಯಕ್ತಿಗಳು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಇದೀಗ ಆರೋಪಿಗಳಾದ ಪ್ರಶಾಂತ ಬಿರಾದಾರ ಹಾಗೂ ಮುದಕಪ್ಪ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸಪ್ಟೆಂಬರ್ 14 ರಂದು ನಡೆದಿದ್ದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗಾಳಿಯಲ್ಲಿ ಗುಂಡು ಹಾರಿಸುವ ವಿಡಿಯೋ ವೈರಲ್

ಹೌದು, ಪ್ರಶಾಂತ್​ ಬಿರಾದಾರ ಎಂಬುವವರ ಬಳಿಯಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್​ನಿಂದ ಮುದಕಪ್ಪ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಇದಕ್ಕೂ ಮೊದಲು ಪ್ರಶಾಂತ್​ ಬಿರಾದಾರ್ ಕೂಡ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಪರವಾನಿಗೆ ಹೊಂದಿದ ಪಿಸ್ತೂಲ್​ನನ್ನು ಮತ್ತೊಬ್ಬರ ಕೈಗೆ ಕೊಟ್ಟ ಪ್ರಶಾಂತ್​, ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಮಾಡಿದ್ದ ಆರೋಪದ ಮೇಲೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:Video: ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ನವ ದಂಪತಿ ವಿರುದ್ಧ ಎಫ್‌ಐಆರ್ ದಾಖಲು

ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ, ಗಾಯಾಳು ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು, ಸವಾರನ ಸ್ಥಿತಿ ಗಂಭೀರವಾಗಿದೆ. ತುಮಕೂರಿನ SIT ಬಡಾವಣೆ ನಿವಾಸಿ ನಂದೀಶ್(47)ಗಾಯಾಳು. ಇನ್ನು ಅಪಘಾತವಾಗುತ್ತಿದ್ದಂತೆ ಕೂಡಲೇ ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Wed, 18 September 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!