AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CLARIFICATION: ಕಪ್ಪು ಶಿಲೆಯ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ, ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಸ್ಪಷ್ಟನೆ

ಈ ಪ್ರದೇಶದ ವ್ಯಾಪ್ತಿಯಲ್ಲಿ ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ಭೂಕಂಪನಸಾಧ್ಯತೆ ಇರುವುದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿರುವುದಿಲ್ಲ. ಇದಲ್ಲದೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ತಜ್ಞರ ತಂಡವನ್ನು ಜಿಲ್ಲೆಗೆ ನಿಯೋಜಿಸಲು ಸರ್ಕಾರಕ್ಕೆ ಸಹ ಪತ್ರ ಬರೆಯಲಾಗಿದ್ದು ಶೀಘ್ರವೆ ತಜ್ಞರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದೆ.

CLARIFICATION: ಕಪ್ಪು ಶಿಲೆಯ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ, ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಸ್ಪಷ್ಟನೆ
Clarification: ಕಪ್ಪು ಶಿಲೆಯ ವಿಜಯಪುರ ಜಿಲ್ಲೆಯಲ್ಲಿ ಪದೇ ಪದೇ ಭೂಕಂಪ, ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಸ್ಪಷ್ಟನೆ
TV9 Web
| Updated By: ಸಾಧು ಶ್ರೀನಾಥ್​|

Updated on: Aug 24, 2022 | 8:51 PM

Share

ಕಪ್ಪು ಶಿಲೆಯಿಂದ ಆವೃತವಾಗಿರುವ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಯಾವುದೇ ಹಾನಿ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ (Vijayapura DC) ಸ್ಪಷ್ಟನೆ ನೀಡಿದ್ದಾರೆ. ಇದು ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ವಲಯವಾಗಿದೆ. ಹೀಗಾಗಿ ಈ ರೀತಿಯ ಪ್ರದೇಶಗಳಲ್ಲಿನ ಭೂಕಂಪನಗಳು (Intermittent earthquakes) ಯಾವುದೇ ಹಾನಿ ಸೃಷ್ಟಿಸುವುದಿಲ್ಲ. ಆದ್ದರಿಂದ ಸಾರ್ವಜನಿಕರು ಭಯ ಪಡುವ ಅಗತ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮೇಲಿಂದ ಮೇಲೆ ಕಡಿಮೆ ತೀವ್ರತೆ ಉಳ್ಳ ಭೂಕಂಪನ ಸಂಭವಿಸುತ್ತಿದೆ. ಈ ಬಗ್ಗೆ ಆಗಸ್ಟ್ 23ರಂದು ಜಿಲ್ಲಾಡಳಿತದಿಂದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿ ಜಿಲ್ಲೆಯಲ್ಲಿಯ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಸುತ್ತಿರುವ ತಾಂತ್ರಿಕ ತಜ್ಞರ ಹಾಗೂ ಜಿಲ್ಲೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳ ಕ್ರೋಡೀಕರಿಸಿ ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ.

ಜಿಲ್ಲೆಯು ಭೌಗೋಳಿಕವಾಗಿ ದಖನ್ ಪ್ರಸ್ಥಭೂಮಿಯಲ್ಲಿದ್ದು, ಈ ಪ್ರದೇಶವು ಅಂದಾಜು ಶೇ.80 ರಷ್ಟು ಬೆಸಾಲ್ಟ್ (ಕಪ್ಪು ಶಿಲೆ)ಶಿಲೆಯಿಂದ ಆವೃತವಾಗಿದ್ದು, ಭಾರತದ ಭೂಕಂಪನ ವಲಯಗಳ ನಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಭೂಸ್ಥರವು ಝೋನ್-2 ಮತ್ತು ಝೋನ್-3 ಪ್ರದೇಶಗಳ ವ್ಯಾಪ್ತಿಯಲ್ಲಿ ಗುರುತಿಸಲಾಗಿರುತ್ತದೆ. ಇದು ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ವಲಯವಾಗಿರುತ್ತದೆ. ಈ ರೀತಿಯ ಪ್ರದೇಶಗಳಲ್ಲಿನ ಭೂಕಂಪನಗಳು ಯಾವುದೇ ಹಾನಿಯನ್ನು ಸೃಷ್ಟಿಸುವುದಿಲ್ಲ.

ಹೀಗಾಗಿ ಈ ಪ್ರದೇಶದ ವ್ಯಾಪ್ತಿಯಲ್ಲಿ ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ಭೂಕಂಪನಸಾಧ್ಯತೆ ಇರುವುದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿರುವುದಿಲ್ಲ. ಇದಲ್ಲದೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ತಜ್ಞರ ತಂಡವನ್ನು ಜಿಲ್ಲೆಗೆ ನಿಯೋಜಿಸಲು ಸರ್ಕಾರಕ್ಕೆ ಸಹ ಪತ್ರ ಬರೆಯಲಾಗಿದ್ದು ಶೀಘ್ರವೆ ತಜ್ಞರ ತಂಡ ಜಿಲ್ಲೆಗೆ ಭೇಟಿ ನೀಡಿ ವಿಸ್ತೃತವಾಗಿ ಪರಿಶೀಲನೆ ಕೈಗೊಳ್ಳಲಿದೆ.

ಇದಲ್ಲದೆ ಶಾಲಾ-ಕಾಲೇಜು, ಹಾಸ್ಟೆಲ್‌ಗಳಲ್ಲಿ ಭೂಕಂಪನ ಕುರಿತು ಅರಿವನ್ನು ಮೂಡಿಸಲು ವಿಪತ್ತು ನಿರ್ವಹಣಾ ಸಭೆಯಲ್ಲಿ ಸೂಚಿಸಿದ್ದು ಇರುತ್ತದೆ ಎಂದು ಅವರು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮ ಅನುಸರಿಸಿ:

ಆದಾಗ್ಯೂ ಇಷ್ಟರ ಮಧ್ಯೆ ಭೂಕಂಪನ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆಗಳಂತೆ ಕೆಲವು ಪ್ರಮುಖ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿಗಳು ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.

* ಮನೆಯ ಕಪಾಟುಗಳನ್ನು ಬಲಪಡಿಸುವುದು ಹಾಗೂ ಎತ್ತರದ ಪಿಠೋಪಕರಣಗಳು ಇದ್ದಲ್ಲಿ ಗೋಡೆಗೆ ಅಲುಗಾಡದಂತೆ ಸ್ಥಿರಪಡಿಸಬೇಕು.

* ಮನೆಯಲ್ಲಿ ಮತ್ತು ಸಮೀಪದಲ್ಲಿ ಸುರಕ್ಷಿತ ಆಶ್ರಯ ತಾಣಗಳನ್ನು ಮತ್ತು ಅವುಗಳ ಮಾರ್ಗಗಳನ್ನು ಗುರುತಿಸಿಟ್ಟುಕೊಳ್ಳಬೇಕು.

* ಕಟ್ಟಡದಲ್ಲಿ ಯಾವುದೇ ಸಮಸ್ಯೆ ಇದ್ದಲ್ಲಿ ಎಂಜಿನೀಯರ್‌ಗಳಿಂದ ಸಲಹೆ ಪಡೆದು ಮರು ರೂಪಿಸಿಕೊಳ್ಳುವುದು.

* ಗಾಜಿನ ಕಿಟಕಿಯಿಂದ ದೂರವಿರಬೇಕು.

* ನಿಮ್ಮನ್ನು ಸುರಕ್ಷಿಸಿಕೊಳ್ಳಲು ಭಾರವಾದ ವಸ್ತುಗಳಿಂದ ದೂರವಿರಬೇಕು. ಕುರ್ಚಿ, ಟೇಬಲ್, ಮಂಚದ ಕೆಳಗಡೆ ಅವಿತುಕೊಳ್ಳಬೇಕು.

* ಗ್ಯಾಸ್ ಸ್ಟೋವ್‌ಗಳನ್ನು ಮತ್ತು ವಿದ್ಯುತ್ ದೀಪಗಳನ್ನು ಆರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದ್ದಾರೆ.

ಸಹಾಯವಾಣಿಗಳಿಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಮನವಿ:

ಭೂಕಂಪನ ದಂತಹ ತುರ್ತು ಸಂದರ್ಭಗಳಲ್ಲಿ ತುರ್ತು ಸಮಯದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 1077. ಟಾಲ್ ಫ್ರೀ ಸಂಖ್ಯೆ 08352-221261, ಪೊಲೀಸ್ ಸಹಾಯವಾಣಿ ಸಂಖ್ಯೆ: 100 (ಟಾಲ್ ಫ್ರೀ) 112 (ಟಾಲ್ ಫ್ರೀ) 08352-250844 ಅಥವಾ ಆರೋಗ್ಯ ಸಹಾಯವಾಣಿ ಸಂಖ್ಯೆ : 104 ( ಟಾಲ್ ಫ್ರೀ) ಸಂಖ್ಯೆಗಳಿಗೆ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವದಂತಿಗೆ ಕಿವಿಗೊಡಬೇಡಿ:

ಭೂಂಕಪನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ದವಾಗಿದೆ. ಯಾವುದೇ ಕಾರಣಕ್ಕೂ ವದಂತಿಗಳಿಗೆ ಕಿವಿ ಕೊಡಬಾರದು. ಮತ್ತು ಆತಂಕಕ್ಕೆ ಒಳಗಾಗಬಾರದು ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

– ಅಶೋಕ ಯಡಳ್ಳಿ, ಟಿವಿ 9, ವಿಜಯಪುರ

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ