AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಗಂಡು ನರೇಂದ್ರ ಮೋದಿ, ಕಾಂಗ್ರೆಸ್ ನಲ್ಲಿ ಮದುವೆ ಗಂಡು ಇಲ್ಲ: ಸಿಟಿ ರವಿ

ಲೋಕಸಭೆ ಹಿನ್ನಲೆ ವಿಜಯಪುರ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಿಟಿ ರವಿ, ‘ ‘ಕಾಂಗ್ರೆಸ್​ನಲ್ಲಿ ಮದುವೆ ಗಂಡು ಇಲ್ಲ, ಯಾರು ಗಂಡು ಎಂದು ಅವರಿಗೆ ಗೊತ್ತಿಲ್ಲ. ಆದರೆ, ಹತ್ತಾರು ಯೋಜನೆ‌ ಮಾಡಿರುವ ನರೇಂದ್ರ ಮೋದಿ ಅವರು ನಮ್ಮ ಗಂಡು ಎನ್ನುವ ಮೂಲಕ ಕಾಂಗ್ರೆಸ್​ ವಿರುದ್ದ ಕಿಡಿಕಾರಿದರು.

ನಮ್ಮ ಗಂಡು ನರೇಂದ್ರ ಮೋದಿ, ಕಾಂಗ್ರೆಸ್ ನಲ್ಲಿ ಮದುವೆ ಗಂಡು ಇಲ್ಲ: ಸಿಟಿ ರವಿ
ಸಿಟಿ ರವಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 16, 2024 | 3:26 PM

Share

ವಿಜಯಪುರ, ಏ.16: ದೇಶಕ್ಕೆ ಮೋದಿ, ವಿಜಯಪುರಕ್ಕೆ ಜಿಗಜಿಣಗಿ ಎಂದು ಸಿಟಿ ರವಿ(CT Ravi) ಹೇಳಿದ್ದಾರೆ. ವಿಜಯಪುರ (Vijayapura) ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಇಂದು(ಏ.16) ಹಮ್ಮಿಕೊಂಡಿದ್ದ ಬಿಜೆಪಿ(BJP) ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ ನಮ್ಮದು ಜನತಾದಳದ್ದು ಹೊಸ ಸಂಬಂಧ ಅಲ್ಲ, ಇದು ಹಳೆಯ ಸಂಬಂಧ. 1977 ರ ತುರ್ತು ಪರಿಸ್ಥಿತಿಯಲ್ಲಿ ಹಾಗೂ ರಾಮಕೃಷ್ಟ ಹೆಗಡೆ ಸಿಎಂ ಆಗಿದ್ದಾಗ ಕೂಡ ಬಿಜೆಪಿ ಬೆಂಬಲ ನೀಡಿದ್ದೇವೆ. ಹಿಂದೆ 20-20 ಮ್ಯಾಚ್ ಇದ್ದಾಗ ಕುಮಾರಸ್ವಾಮಿ ಸಿಎಂ ಮಾಡಿದ್ದೇವೆ. ದೇವೇಗೌಡರು ನಮಗೆ ಮಂಡಿ ನೋವಿದೆ. ಆದರೆ, ಬುದ್ದಿ ಇದೆ, ಹಾಗಾಗಿ ಮೋದಿ ಅವರಿಗೆ ಬೆಂಬಲ ನೀಡಿದ್ದೇವೆ ಎಂದಿದ್ದಾರೆ.

ಕಾಂಗ್ರೆಸ್​ನಲ್ಲಿ ಮದುವೆ ಗಂಡು ಇಲ್ಲ, ಯಾರು ಗಂಡೆಂದು ಅವರಿಗೆ ಗೊತ್ತಿಲ್ಲ

ಇದೇ ವೇಳೆ ನೆರೆದ ಜನರ ಎರಡೂ‌ ಕೈ ಮುಷ್ಟಿ ಕಟ್ಟಿಸಿ ಭಾರತ ಮಾತಾಕಿ, ಹರ ಹರ ಮಹಾದೇವ, ಬಸವಣ್ಣ, ಕನಕದಾಸ, ವಾಲ್ಮೀಕಿ ಅಂಬೇಡ್ಕರ್ ಪರ ಜಯ ಘೋಷ ಹಾಕಿಸಿದರು. ‘ಕಾಂಗ್ರೆಸ್​ನಲ್ಲಿ ಮದುವೆ ಗಂಡು ಇಲ್ಲ, ಯಾರು ಗಂಡು ಎಂದು ಅವರಿಗೆ ಗೊತ್ತಿಲ್ಲ. ಮದುವೆಗೆ ಗಂಡೇ ಇಲ್ಲದೇ ಮದುವೆ ಹೇಗೆ?, ರಾಹುಲ್ ಗಾಂಧಿ ಮದುವೆ ಗಂಡು ಎಂದರೆ ಓಡಿ ಹೋಗುತ್ತಾರೆ. ನಮ್ಮ ಗಂಡು ನರೇಂದ್ರ ಮೋದಿ, ಹತ್ತಾರು ಯೋಜನೆ‌ ಮಾಡಿರೋ ಗಂಡು‌ ನಮ್ಮ ಮೋದಿ. ಹತ್ತು‌‌ ಕೆಜಿ ಅಕ್ಕಿ ಎಲ್ಲಿ, ಮೋದಿ‌ ಕೊಡುವ ಅಕ್ಕಿ ಬಿಟ್ಟು, ಎಲ್ಲಿದೆ ಅಕ್ಕಿ ಎಂದು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್, ರಾಹುಲ್ ಗಾಂಧಿ​ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕಷ್ಟೆ: ಸಿಟಿ ರವಿ ವ್ಯಂಗ್ಯ

2004 ರಿಂದ 2014 ರವರೆಗೆ ಕಾಂಗ್ರೆಸ್​ಗೆ ಅಧಿಕಾರ ನೀಡಿದ್ದೇವು. ಆಕಾಶ ಭೂಮಿ ಪಾತಾಳದಲ್ಲೂ ಲೂಟಿ ಹೊಡೆದರು. ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶದಲ್ಲಿ ಬಾಂಬ್ ಸ್ಪೋಟದ ಸುದ್ದಿಗಳೇ ಇರುತ್ತಿದ್ದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬಾಂಬ್ ತಯಾರಿಕೆ ಆರಂಭವಾಗಿವೆ. ಮಂಗಳೂರಿನಲ್ಲಿ ಶಾಲೆಯಲ್ಲಿ ಬಾಂಬ್ ಸ್ಪೋಟ್ ಮಾಡಲು ಹೋಗುವಾಗಲೇ ದಾರಿಯಲ್ಲಿ ಸ್ಪೋಟವಾಗಿ ಅನಾಹುತ ತಪ್ಪಿತ್ತು. ಆದರೆ, ಸ್ಪೋಟ ಮಾಡಲು ಹೊರಟಿದ್ದವರನ್ನು ಬ್ರದರ್ಸ್ ಎಂದು ಡಿಕೆ ಶಿವಕುಮಾರ್​ ಹೇಳಿದರು. ಈಗಲೂ ಅದೇ 41 ಜನ ಬ್ರದರ್ಸ್​ಗಳನ್ನು ಎನ್​ಐಎ ಬಂಧಿಸಿದೆ.

ದೇಶ ಉಳಿಸೋರನ್ನು ನೋಡಿ ಮತ ಹಾಕಿ

ಯೋಗಿ ಥರ ಬುಲ್ಡೋಜರ್ ಚಾಲೂ ಮಾಡಿದರೆ ಇವರಿಗೆ ಬಲೆ ಹಾಕಲು ಸಾಧ್ಯ. ಈ ಚುನಾವಣೆ ಜಾತಿಯ ಮೇಲಲ್ಲ, ನೀತಿ ಮೇಲೆ ನಡೆದಿದೆ. ನಮ್ಮ ದೇಶ ಉಳಿಸೋರು ಯಾರು ಎಂದು ನೋಡಿ ಮತ‌ ಹಾಕೋ ಚುನಾವಣೆ ಇದು, ದೇಶದ ಮಕ್ಕಳ ಭವಿಷ್ಯ ಯೋಚಿಸುವವರಿಗೆ ಮತ ಹಾಕಿ. ಕಾಂಗ್ರೆಸ್ ಹೊತ್ತಿ ಉರಿಯೋ ಮನೆ, ಹತ್ತಿರ ಹೋದರೆ ಭಸ್ಮವಾಗುತ್ತೀರಿ ಎಂದು ಅಂಬೇಡ್ಕರ್ ಹೇಳಿದ್ದರು. ಅದೇ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಇಲ್ಲ, ಬದಲಾವಣೆ ‌ಮಾಡುತ್ತೇವೆಂಬುದು ಸುಳ್ಳು ಎಂದರು.

ಇದನ್ನೂ ಓದಿ:ಈಗ ನಡೆಯುತ್ತಿರುವುದು ಲೋಕಸಭಾ ಚುನಾವಣೆ ಅಂತ ಸಿಎಂ ಸಿದ್ದರಾಮಯ್ಯ ಮರೆತಂತಿದೆ: ಸಿಟಿ ರವಿ

ಮೀಸಲಾತಿ‌ ಹೆಚ್ಚಳ, ತಾಂಡಾಗಳನ್ನು‌ ಕಂದಾಯ ಗ್ರಾಮಗಳನ್ನಾಗಿ‌ ಮಾಡಿದ್ದು ಕೂಡ ಬಿಜೆಪಿ. ಮೋದಿ‌ ಗ್ಯಾರಂಟಿ ದೇಶ ಉಳಿಸುತ್ತದೆ. ಅಮೆರಿಕದಲ್ಲಿ ಕೊರೋನಾ ಲಸಿಕೆಗೆ ಒಂದೂವರೆ ಲಕ್ಷ ರೂಪಾಯಿಯಾದರೆ, ಮೋದಿ ನಮಗೆ ‌ಉಚಿತ ಲಸಿಕೆ ನೀಡಿದ್ದಾರೆ. ಅವರ ಋಣ ತೀರಿಸಬೇಕಿದೆ. ಇತ್ತ ಕಾಂಗ್ರೆಸ್​ ಕ್ವಾಟರ್ ಮದ್ಯದ ದರ 50 ರೂಪಾಯಿ ಏರಿಕೆ ಮಾಡಿದರು. ಮದ್ಯ ಏರಿಕೆ ಮಾಡಿದ ಹಣವನ್ನು ಮಹಿಳೆಯರಿಗೆ ನೀಡಲಾಗಿದೆ. ಬಸ್ ದರ ಏರಿಕೆ, ಆರ್​ಟಿಸಿ ಪಹಣಿ ದರ, ವಿದ್ಯುತ್ ಸಂಪರ್ಕ ಸಹಾಯ ಧನ‌ ಬಂದ್ ಮಾಡಿದ್ದರೆ, ಗಂಡದ್ದು ಕಿತ್ತು ಹೆಂಡತಿಗೆ ಕೊಡುತ್ತಿದ್ದಾರೆ. ಇದರ ಮೇಲೆ ನುಡಿದಂತೆ‌ ನಡೆದಿದ್ದೇವೆ ಎಂದು ಸಿದ್ದರಾಮಯ್ಯ ಮಾತನಾಡುತ್ತಾರೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ಕಿಡಿಕಾರಿದರು.

ನಾಳೆ ರಾಮನವಮಿ ಇದ್ದು, ರಾಮಮಂದಿರ ಆಗಲು ಐನೂರು ವರ್ಷ‌ ಬೇಕಾಯಿತು. ಮುಂದೆ ಮಥುರೆ ಕೃಷ್ಣ, ಕಾಶಿ ವಿಶ್ವನಾಥ ಮಂದಿರವೂ ಆಗಬೇಕು. ಭಾರತ್​ ಮಾತಾಕಿ ಜೈ ಎನ್ನಲು ಲಕ್ಷ್ಮಣ ಸವದಿ ಖರ್ಗೆ ಅವರ ಪರವಾನಿಗೆ ಕೇಳುತ್ತಾರೆ. ಆದರೆ, ಬಿಜೆಪಿಯಲ್ಲಿ ಭಾರತ್​ ಮಾತಾಕಿ ಜೈ ಎನ್ನಲು ಯಾರ ಪರವಾನಿಗೆ ಬೇಕಿಲ್ಲ. ಇವರಿಗೆ ಪಾಕಿಸ್ತಾನ ಜಿಂದಾಬಾದ್ ಎಂದು‌ ಕೂಗಲು ಯಾರ ಪರವಾನಿಗೆ ಬೇಡಾ, ಪಂಚಾಯತಿಯಿಂದ ಪಾರ್ಲಿಮೆಂಟ್​ವರೆಗೂ ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ