AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್, ರಾಹುಲ್ ಗಾಂಧಿ​ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕಷ್ಟೆ: ಸಿಟಿ ರವಿ ವ್ಯಂಗ್ಯ

ಹಲವು ಬಾರಿ ಕಾಂಗ್ರೆಸ್ ಮತ್ತು ಪಾಕಿಸ್ತಾನಕ್ಕೆ ಲಿಂಕ್ ಮಾಡಿ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಸಿಟಿ ರವಿ ಮತ್ತೆ ಅದೇ ರೀತಿ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್​​ಗೆ ಇನ್ನು ಭಾರತದ ಹಿಂದೂ ಪ್ರಾಬಲ್ಯ ಇರುವ ಪ್ರದೇಶಗಳಲ್ಲಿ ನೆಲೆ ಇರುವುದಿಲ್ಲ. ಅದಕ್ಕೆ ಅವರು ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕಷ್ಟೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್, ರಾಹುಲ್ ಗಾಂಧಿ​ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕಷ್ಟೆ: ಸಿಟಿ ರವಿ ವ್ಯಂಗ್ಯ
ಸಿಟಿ ರವಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 16, 2024 | 2:58 PM

Share

ವಿಜಯಪುರ, ಏಪ್ರಿಲ್ 16: ಕಾಂಗ್ರೆಸ್‌ಗೆ ಭಾರತದಲ್ಲಿ, ಮುಖ್ಯವಾಗಿ ಹಿಂದೂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾವುದೇ ಬೆಂಬಲವಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಬೆಂಬಲವನ್ನು ಹುಡುಕುವುದನ್ನು ಬಿಟ್ಟು ಆ ಪಕ್ಷಕ್ಕೆ ಬೇರೆ ದಾರಿಯಿಲ್ಲ. ಹೀಗಾಗಿ ಕಾಂಗ್ರೆಸ್ (Congress) ಗೆದ್ದಾಗ ಕೆಲವರು ಪಾಕಿಸ್ತಾನವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗುತ್ತಾರೆ ಎಂದು ಬಿಜೆಪಿ (BJP) ನಾಯಕ ಸಿಟಿ ರವಿ (CT Ravi) ವ್ಯಂಗ್ಯವಾಡಿದರು. ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಸುವ ಮೆರವಣಿಗೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ನೆಲೆ ಹುಡುಕಿಕೊಳ್ಳಲಿ ಎಂಬುದಾಗಿ ಸಲಹೆ ನೀಡುವೆ ಎಂದರು.

ಸಾಂಪ್ರದಾಯಿಕ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಹೋಗಿದ್ದಾರೆ. ಅಲ್ಲಿ ಶೇ 52 ರಷ್ಟು ಮುಸ್ಲಿಂ ಜನಸಂಖ್ಯೆ ಇರುವುದರಿಂದ ರಾಹುಲ್ ಅಲ್ಲಿಂದ ಸ್ಪರ್ಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಹೆಸರನ್ನು ಬಳಸುವುದರಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಗೆ ಬರುತ್ತಿದ್ದ ಮತಗಳನ್ನೂ ಕಳೆದುಕೊಳ್ಳುತ್ತದೆ ಎಂದು ರವಿ ಟೀಕಿಸಿದರು.

ಕಾಂಗ್ರೆಸ್‌ಗೆ ಯಾವುದೇ ದೂರದೃಷ್ಟಿ ಇಲ್ಲ ಅಥವಾ ಬಿಜೆಪಿಯಂತೆ ಸೂಕ್ತ ಪ್ರಧಾನಿ ಅಭ್ಯರ್ಥಿಯನ್ನು ಹೊಂದಿಲ್ಲ. ಆದ್ದರಿಂದ, ನಿಮ್ಮ (ಇಂಡಿಯಾ ಮೈತ್ರಿಕೂಟ) ಪ್ರಧಾನಿ ಅಭ್ಯರ್ಥಿ ಯಾರು ಎಂಬುದಾಗಿ ಜನರು ಕೇಳುತ್ತಿದ್ದಾರೆ ಎಂದು ಸಿಟಿ ರವಿ ಹೇಳಿದರು.

ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪರನ್ನು ಪಕ್ಷದಿಂದ ಅಮಾನತು ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಬಗ್ಗೆ ಪ್ರತಿಕ್ರಿಯಿಸುವ ಅಧಿಕಾರ ನನಗಿಲ್ಲ. ಆದರೆ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಮರುಪರಿಶೀಲಿಸಿ ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಈಶ್ವರಪ್ಪ ಅವರಿಗೆ ಮನವಿ ಮಾಡಿದರು. ಬಿಜೆಪಿ ಹಿತಾಸಕ್ತಿಗೆ ಧಕ್ಕೆ ತರುವ ಕೆಲಸ ಮಾಡಬೇಡಿ ಎಂದರು.

ಅಸಮಾಧಾನಿತರ ಬಗ್ಗೆ ಪ್ರತಿಕ್ರಿಯಿಸಿ, ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ. ಹೀಗಾಗಿ ಕೆಲವರ ಅಸಮಾಧಾನವನ್ನು ಶಮನಗೊಳಿಸಲಾಗುವುದು ಎಂದರು.

ದೇವೇಗೌಡರ ಸಭೆಯಲ್ಲಿ ನಡೆದ ಘಟನೆಗೆ ಖಂಡನೆ

ತುಮುಕೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಎದುರು ಮಹಿಳಾ ಕಾಂಗ್ರೆಸ್ಸಿಗರು ದಿಕ್ಕಾರ ಕೂಗಿರುವ ಬಗ್ಗೆ ಪ್ರತಿಕ್ರಿಯಿಸಿದ ರವಿ, ಇದು ಕಾಂಗ್ರೆಸ್ ಪ್ರಾಯೋಜಿತ ಪ್ರತಿಭಟನೆ. ಮೈಸೂರಿನಲ್ಲಿ ದೇವೇಗೌಡರ ಗರ್ಜನೆ ಕೇಳಿದ ಕಾಂಗ್ರೆಸ್ ಕಾರ್ಯಕರ್ತರನ್ನು‌ ಛೂ ಬಿಟ್ಟಿದೆ ಎಂದರು.

ಇದನ್ನೂ ಓದಿ: ದೇವೇಗೌಡರ ಸಭೆಗೆ ನುಗ್ಗಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ: ಚುನಾವಣಾ ಆಯೋಗಕ್ಕೆ ಜೆಡಿಎಸ್- ಬಿಜೆಪಿ ದೂರು

ಗ್ಯಾರಂಟಿ ಯೋಜನೆಯಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಲು ಸಿಟಿ ರವಿ ನಿರಾಕರಿಸಿದರು. ಕುಮಾರಸ್ವಾಮಿ ಅವರು ಈಗಾಗಲೇ ತಮ್ಮ ಮಾತನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ