AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ

ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಸೇರಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಳಿಕ ಅದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ. ಈ ಕುರಿತು ಮನೆಯವರಿಗೆ ವಿಚಾರ ತಿಳಿಯುತ್ತಿದ್ದಂತೆ ಸಂತ್ರಸ್ಥೆ ಮನೆಬಿಟ್ಟು ಹೋಗಿದ್ದಾರೆ.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ
ಬಂಧಿತ ಆರೋಪಿಗಳು
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 01, 2024 | 5:13 PM

Share

ವಿಜಯಪುರ, ಮೇ.01: ಎಲ್ಲೆಡೆ ಪ್ರಜ್ವಲ ರೇವಣ್ಣ ಆಶ್ಲೀಲ್ ವಿಡಿಯೋ ಹರಿದಾಡುತ್ತಿದ್ದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಇಷ್ಟರ ಮದ್ಯೆ ಇದೇ ಮಾದರಿಯ ಘಟನೆ ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ನಂತರ ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ.

ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ವಿಡಿಯೋ ವೈರಲ್

ಇನ್ನು ಈ ವಿಚಾರ ಬಹಿರಂಗ ಮಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಸಾಲದೆಂಬಂತೆ ಮಹಿಳೆಯ ಜೊತೆಗಿನ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ವೈರಲ್ ಆದ ವಿಡಿಯೋವನ್ನು ಅತ್ಯಾಚಾರಕ್ಕೀಡಾದ ಪತಿ ನೋಡಿ ಅದನ್ನು ಮನೆಯವರಿಗೆ ತಿಳಿಸಿದ್ಧಾನೆ. ನಂತರ ಆ ಮಹಿಳೆಯನ್ನು ವಿಚಾರಣೆ ಮಾಡಿದಾಗ, ‘ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಎಂಬಿಬ್ಬರು ನನಗೆ ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾರೆ. ಈ ವಿಚಾರ ಹೊರಗಡೆ ಹೇಳಿದರೆ ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದರು. ಭಯದಿಂದ ಈ ವಿಚಾರವನ್ನು ನಾನು ಎಲ್ಲಿಯೂ ಹೇಳಿಲ್ಲ ಎಂದು ಮಹಿಳೆ ವಿಷಯ ಮನೆಯವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಬರ್ಹಿದೆಸೆಗೆ ತೆರಳಿದ್ದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಯುವಕ ಪರಾರಿ

ಮನೆ ಬಿಟ್ಟು ಹೋದ ಸಂತ್ರಸ್ಥೆ

ಮನೆಯಲ್ಲಿ ವಿಚಾರ ಗೊತ್ತಾದ ಕಾರಣ ಮನನೊಂದ ಮಹಿಳೆ, ‘ತನ್ನ 6 ವರ್ಷದ ಮಗನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ. ಈ ಕುರಿತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪತಿ ಹಾಗೂ ಮನೆಯವರು ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನಿಖೆ ನಡೆಸಿದ ಮನಗೂಳಿ ಪೊಲೀಸ್ ಸಬ್ ಇನ್ಸಪೆಕ್ಟರ್ ಶ್ರೀಕಾಂತ ಕಾಂಬಳೆ ಹಾಗೂ ತಂಡ, ಕೃತ್ಯ ಎಸಗಿರುವ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಹಾಗೂ ಇವರಿಗೆ ಸಹಾಯ ಮಾಡಿದ ಸೋಮಪ್ಪ ಸಜ್ಜನ ಹಾಗೂ ಜಯಶ್ರೀ ಹಡಗಲಿ ಎಂಬುವವರನ್ನು ಬಂಧಿಸಿದ್ಧಾರೆ. ಈ ಕುರಿತು ತನಿಖೆ ಮುಂದುವರೆದಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಿಂದ ಕಾಣೆಯಾಗಿರುವ ಮಹಿಳೆ ಹಾಗೂ ಆಕೆಯ ಮಗು ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು