AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ

ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಸೇರಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಳಿಕ ಅದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ. ಈ ಕುರಿತು ಮನೆಯವರಿಗೆ ವಿಚಾರ ತಿಳಿಯುತ್ತಿದ್ದಂತೆ ಸಂತ್ರಸ್ಥೆ ಮನೆಬಿಟ್ಟು ಹೋಗಿದ್ದಾರೆ.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ
ಬಂಧಿತ ಆರೋಪಿಗಳು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: May 01, 2024 | 5:13 PM

Share

ವಿಜಯಪುರ, ಮೇ.01: ಎಲ್ಲೆಡೆ ಪ್ರಜ್ವಲ ರೇವಣ್ಣ ಆಶ್ಲೀಲ್ ವಿಡಿಯೋ ಹರಿದಾಡುತ್ತಿದ್ದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಇಷ್ಟರ ಮದ್ಯೆ ಇದೇ ಮಾದರಿಯ ಘಟನೆ ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ನಂತರ ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ.

ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ವಿಡಿಯೋ ವೈರಲ್

ಇನ್ನು ಈ ವಿಚಾರ ಬಹಿರಂಗ ಮಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಸಾಲದೆಂಬಂತೆ ಮಹಿಳೆಯ ಜೊತೆಗಿನ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ವೈರಲ್ ಆದ ವಿಡಿಯೋವನ್ನು ಅತ್ಯಾಚಾರಕ್ಕೀಡಾದ ಪತಿ ನೋಡಿ ಅದನ್ನು ಮನೆಯವರಿಗೆ ತಿಳಿಸಿದ್ಧಾನೆ. ನಂತರ ಆ ಮಹಿಳೆಯನ್ನು ವಿಚಾರಣೆ ಮಾಡಿದಾಗ, ‘ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಎಂಬಿಬ್ಬರು ನನಗೆ ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾರೆ. ಈ ವಿಚಾರ ಹೊರಗಡೆ ಹೇಳಿದರೆ ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದರು. ಭಯದಿಂದ ಈ ವಿಚಾರವನ್ನು ನಾನು ಎಲ್ಲಿಯೂ ಹೇಳಿಲ್ಲ ಎಂದು ಮಹಿಳೆ ವಿಷಯ ಮನೆಯವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಬರ್ಹಿದೆಸೆಗೆ ತೆರಳಿದ್ದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಯುವಕ ಪರಾರಿ

ಮನೆ ಬಿಟ್ಟು ಹೋದ ಸಂತ್ರಸ್ಥೆ

ಮನೆಯಲ್ಲಿ ವಿಚಾರ ಗೊತ್ತಾದ ಕಾರಣ ಮನನೊಂದ ಮಹಿಳೆ, ‘ತನ್ನ 6 ವರ್ಷದ ಮಗನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ. ಈ ಕುರಿತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪತಿ ಹಾಗೂ ಮನೆಯವರು ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನಿಖೆ ನಡೆಸಿದ ಮನಗೂಳಿ ಪೊಲೀಸ್ ಸಬ್ ಇನ್ಸಪೆಕ್ಟರ್ ಶ್ರೀಕಾಂತ ಕಾಂಬಳೆ ಹಾಗೂ ತಂಡ, ಕೃತ್ಯ ಎಸಗಿರುವ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಹಾಗೂ ಇವರಿಗೆ ಸಹಾಯ ಮಾಡಿದ ಸೋಮಪ್ಪ ಸಜ್ಜನ ಹಾಗೂ ಜಯಶ್ರೀ ಹಡಗಲಿ ಎಂಬುವವರನ್ನು ಬಂಧಿಸಿದ್ಧಾರೆ. ಈ ಕುರಿತು ತನಿಖೆ ಮುಂದುವರೆದಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಿಂದ ಕಾಣೆಯಾಗಿರುವ ಮಹಿಳೆ ಹಾಗೂ ಆಕೆಯ ಮಗು ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!