AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ

ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಸೇರಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಳಿಕ ಅದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ. ಈ ಕುರಿತು ಮನೆಯವರಿಗೆ ವಿಚಾರ ತಿಳಿಯುತ್ತಿದ್ದಂತೆ ಸಂತ್ರಸ್ಥೆ ಮನೆಬಿಟ್ಟು ಹೋಗಿದ್ದಾರೆ.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ
ಬಂಧಿತ ಆರೋಪಿಗಳು
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 01, 2024 | 5:13 PM

ವಿಜಯಪುರ, ಮೇ.01: ಎಲ್ಲೆಡೆ ಪ್ರಜ್ವಲ ರೇವಣ್ಣ ಆಶ್ಲೀಲ್ ವಿಡಿಯೋ ಹರಿದಾಡುತ್ತಿದ್ದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಇಷ್ಟರ ಮದ್ಯೆ ಇದೇ ಮಾದರಿಯ ಘಟನೆ ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ನಂತರ ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ.

ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ವಿಡಿಯೋ ವೈರಲ್

ಇನ್ನು ಈ ವಿಚಾರ ಬಹಿರಂಗ ಮಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಸಾಲದೆಂಬಂತೆ ಮಹಿಳೆಯ ಜೊತೆಗಿನ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ವೈರಲ್ ಆದ ವಿಡಿಯೋವನ್ನು ಅತ್ಯಾಚಾರಕ್ಕೀಡಾದ ಪತಿ ನೋಡಿ ಅದನ್ನು ಮನೆಯವರಿಗೆ ತಿಳಿಸಿದ್ಧಾನೆ. ನಂತರ ಆ ಮಹಿಳೆಯನ್ನು ವಿಚಾರಣೆ ಮಾಡಿದಾಗ, ‘ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಎಂಬಿಬ್ಬರು ನನಗೆ ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾರೆ. ಈ ವಿಚಾರ ಹೊರಗಡೆ ಹೇಳಿದರೆ ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದರು. ಭಯದಿಂದ ಈ ವಿಚಾರವನ್ನು ನಾನು ಎಲ್ಲಿಯೂ ಹೇಳಿಲ್ಲ ಎಂದು ಮಹಿಳೆ ವಿಷಯ ಮನೆಯವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಬರ್ಹಿದೆಸೆಗೆ ತೆರಳಿದ್ದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಯುವಕ ಪರಾರಿ

ಮನೆ ಬಿಟ್ಟು ಹೋದ ಸಂತ್ರಸ್ಥೆ

ಮನೆಯಲ್ಲಿ ವಿಚಾರ ಗೊತ್ತಾದ ಕಾರಣ ಮನನೊಂದ ಮಹಿಳೆ, ‘ತನ್ನ 6 ವರ್ಷದ ಮಗನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ. ಈ ಕುರಿತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪತಿ ಹಾಗೂ ಮನೆಯವರು ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನಿಖೆ ನಡೆಸಿದ ಮನಗೂಳಿ ಪೊಲೀಸ್ ಸಬ್ ಇನ್ಸಪೆಕ್ಟರ್ ಶ್ರೀಕಾಂತ ಕಾಂಬಳೆ ಹಾಗೂ ತಂಡ, ಕೃತ್ಯ ಎಸಗಿರುವ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಹಾಗೂ ಇವರಿಗೆ ಸಹಾಯ ಮಾಡಿದ ಸೋಮಪ್ಪ ಸಜ್ಜನ ಹಾಗೂ ಜಯಶ್ರೀ ಹಡಗಲಿ ಎಂಬುವವರನ್ನು ಬಂಧಿಸಿದ್ಧಾರೆ. ಈ ಕುರಿತು ತನಿಖೆ ಮುಂದುವರೆದಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಿಂದ ಕಾಣೆಯಾಗಿರುವ ಮಹಿಳೆ ಹಾಗೂ ಆಕೆಯ ಮಗು ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ