AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ

ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಸೇರಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಳಿಕ ಅದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ. ಈ ಕುರಿತು ಮನೆಯವರಿಗೆ ವಿಚಾರ ತಿಳಿಯುತ್ತಿದ್ದಂತೆ ಸಂತ್ರಸ್ಥೆ ಮನೆಬಿಟ್ಟು ಹೋಗಿದ್ದಾರೆ.

ಜೀವ ಬೆದರಿಕೆ ಹಾಕಿ ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ನಾಲ್ವರ ಬಂಧನ
ಬಂಧಿತ ಆರೋಪಿಗಳು
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 01, 2024 | 5:13 PM

Share

ವಿಜಯಪುರ, ಮೇ.01: ಎಲ್ಲೆಡೆ ಪ್ರಜ್ವಲ ರೇವಣ್ಣ ಆಶ್ಲೀಲ್ ವಿಡಿಯೋ ಹರಿದಾಡುತ್ತಿದ್ದು ಬಾರೀ ಚರ್ಚೆಗೆ ಗ್ರಾಸವಾಗಿದೆ. ಇಷ್ಟರ ಮದ್ಯೆ ಇದೇ ಮಾದರಿಯ ಘಟನೆ ವಿಜಯಪುರ(Vijayapura) ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡು ನಂತರ ಆ ಮಹಿಳೆಗೆ ಬೆದರಿಕೆ ಹಾಕಿ ನಿರಂತವಾಗಿ ದೈಹಿಕವಾಗಿ ಬಳಸಿಕೊಂಡಿದ್ದಾರಂತೆ.

ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ವಿಡಿಯೋ ವೈರಲ್

ಇನ್ನು ಈ ವಿಚಾರ ಬಹಿರಂಗ ಮಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಸಾಲದೆಂಬಂತೆ ಮಹಿಳೆಯ ಜೊತೆಗಿನ ವಿಡಿಯೋವನ್ನು ವೈರಲ್ ಮಾಡಿದ್ದಾರೆ. ವೈರಲ್ ಆದ ವಿಡಿಯೋವನ್ನು ಅತ್ಯಾಚಾರಕ್ಕೀಡಾದ ಪತಿ ನೋಡಿ ಅದನ್ನು ಮನೆಯವರಿಗೆ ತಿಳಿಸಿದ್ಧಾನೆ. ನಂತರ ಆ ಮಹಿಳೆಯನ್ನು ವಿಚಾರಣೆ ಮಾಡಿದಾಗ, ‘ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಎಂಬಿಬ್ಬರು ನನಗೆ ಜೀವ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಮಾಡಿದ್ದಾರೆ. ಈ ವಿಚಾರ ಹೊರಗಡೆ ಹೇಳಿದರೆ ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದರು. ಭಯದಿಂದ ಈ ವಿಚಾರವನ್ನು ನಾನು ಎಲ್ಲಿಯೂ ಹೇಳಿಲ್ಲ ಎಂದು ಮಹಿಳೆ ವಿಷಯ ಮನೆಯವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಬರ್ಹಿದೆಸೆಗೆ ತೆರಳಿದ್ದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಯುವಕ ಪರಾರಿ

ಮನೆ ಬಿಟ್ಟು ಹೋದ ಸಂತ್ರಸ್ಥೆ

ಮನೆಯಲ್ಲಿ ವಿಚಾರ ಗೊತ್ತಾದ ಕಾರಣ ಮನನೊಂದ ಮಹಿಳೆ, ‘ತನ್ನ 6 ವರ್ಷದ ಮಗನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ. ಈ ಕುರಿತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪತಿ ಹಾಗೂ ಮನೆಯವರು ಮನಗೂಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನಿಖೆ ನಡೆಸಿದ ಮನಗೂಳಿ ಪೊಲೀಸ್ ಸಬ್ ಇನ್ಸಪೆಕ್ಟರ್ ಶ್ರೀಕಾಂತ ಕಾಂಬಳೆ ಹಾಗೂ ತಂಡ, ಕೃತ್ಯ ಎಸಗಿರುವ ಆಕಾಶ ಹಡಗಲಿ, ಅಭಿಷೇಕ ಸಜ್ಜನ ಹಾಗೂ ಇವರಿಗೆ ಸಹಾಯ ಮಾಡಿದ ಸೋಮಪ್ಪ ಸಜ್ಜನ ಹಾಗೂ ಜಯಶ್ರೀ ಹಡಗಲಿ ಎಂಬುವವರನ್ನು ಬಂಧಿಸಿದ್ಧಾರೆ. ಈ ಕುರಿತು ತನಿಖೆ ಮುಂದುವರೆದಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಿಂದ ಕಾಣೆಯಾಗಿರುವ ಮಹಿಳೆ ಹಾಗೂ ಆಕೆಯ ಮಗು ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ