ವಿಜಯಪುರ: ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ; ಏನಿದು ಪ್ರಕರಣ?

ವಿಜಯಪುರ(Vijayapura) ಜಿಲ್ಲೆಯಲ್ಲಿ ಗರ್ಭಿಣಿಗೆ ಬೆಂಕಿ ಹಚ್ಚಿ ಮಾರ್ಯಾದೆ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ವಿಚಾರಣೆ ಅಂತ್ಯಗೊಳಿಸಿ ಮರ್ಯಾದೆ ಹತ್ಯೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ, ಇತರೆ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 4.19 ಲಕ್ಷ ರೂಪಾಯಿ ದಂಡ ವಿಧಿಸಿ ವಿಜಯಪುರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ವಿಜಯಪುರ: ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ; ಏನಿದು ಪ್ರಕರಣ?
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: May 03, 2024 | 9:35 PM

ವಿಜಯಪುರ, ಮೇ.03: ಮರ್ಯಾದೆಗೇಡು ಹತ್ಯೆ ಮಾಡಿದ ಆರೋಪಿಗಳ ಕೃತ್ಯ ಸಾಬೀತಾಗಿ ಇಬ್ಬರಿಗೆ ಗಲ್ಲು ಶಿಕ್ಷೆ ಜಾರಿ ಮಾಡಿ ನ್ಯಾಯಾಧೀಶರು ಆದೇಶ ಮಾಡಿದ್ದಾರೆ.‌‌ ವಿಜಯಪುರ(Vijayapura) ಜಿಲ್ಲೆಯಲ್ಲಿ ಗರ್ಭಿಣಿಗೆ ಬೆಂಕಿ ಹಚ್ಚಿ ಮಾರ್ಯಾದೆ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ವಿಚಾರಣೆ ಅಂತ್ಯಗೊಳಿಸಿ ಮರ್ಯಾದೆ ಹತ್ಯೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ, ಇತರೆ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 4.19 ಲಕ್ಷ ರೂಪಾಯಿ ದಂಡ ವಿಧಿಸಿ ಇಲ್ಲಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಮುದ್ದೇಬಿಹಾಳ ತಾಲೂಕಿನ ಗುಂಡಕನಾಳ ಗ್ರಾಮದ ಇಬ್ರಾಹಿಂಸಾಬ ಮಹಮ್ಮದಸಾಬ್ ಅತ್ತಾರ ಹಾಗೂ ಅಕ್ಬರ್ ಮಹಮ್ಮದಸಾಬ್ ಅತ್ತಾರ ಗಲ್ಲು ಶಿಕ್ಷೆಗೊಳಗಾದರೆ, ಹತ್ಯೆಗೀಡಾದ ಮಹಿಳೆಯ ತಾಯಿ ರಮಜಾನಬಿ ಅತ್ತಾರ, ಸಂಬಂಧಿಗಳಾದ ದಾವಲಬಿ ಬಂದೇನವಾಜ್ ಜಮಾದಾರ, ಅಜಮಾ ಜಿಲಾನಿ ದಖನಿ, ಜಿಲಾನಿ ಅಬ್ದುಲ್‌ಖಾದರ್ ದಖನಿ, ದಾವಲಬಿ ಸುಭಾನ್ ಧನ್ನೂರ ಜೀವಾವಧಿ ಶಿಕ್ಷೆಗೊಳಗಾದವರು.

ಇದನ್ನೂ ಓದಿ:ನ್ಯಾಯದಾನ ಮಾಡಬೇಕಿರುವ ನ್ಯಾಯಾಧೀಶರಿಗೇ ಗಲ್ಲು ಶಿಕ್ಷೆ ನೀಡಿದ್ದ ನ್ಯಾಯಾಲಯ, ಇದು 45 ವರ್ಷಗಳ ಹಿಂದಿನ ಘಟನೆ

ಏನಿದು ಘಟನೆ?

ರಮಜಾನಭೀ ಪುತ್ರಿ ಬಾನುಬೇಗಂ ಅತ್ತಾರ ಅದೇ ಗ್ರಾಮದ ಸಾಯಬಣ್ಣ ಕೊಣ್ಣೂರ ಎಂಬಾತನನ್ನು ಪ್ರೀತಿಸಿ, 2017ರಲ್ಲಿ ಮದುವೆಯಾಗಿದ್ದಳು. ಯುವತಿ ಗರ್ಭಿಣಿಯಾಗಿದ್ದನ್ನರಿತ ಕುಟುಂಬ ಸದಸ್ಯರು, ಯುವತಿ ಹಾಗೂ ಯುವಕನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಮದುವೆಯಾಗಿ ಬೇರೆ ನಗರದಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರೇಮಿಗಳು ಬಾನುಬೇಗಂ ಗರ್ಭಿಣಿಯಾದ ಬಳಿಕ ಹೆರಿಗೆಗಾಗಿ ಗಂಡನ ಮನೆಗೆ ಬಂದಿದ್ದಳು‌. ಪತಿ ಸಾಯಬಣ್ಣ ಹಾಗೂ ಗರ್ಭಿಣಿಯ ತವರು ಒಂದೇ ಊರಾದ ಕಾರಣ ಇವರ ಮೇಲೆ ಭಾನು ಬೇಗಂ ಕುಟುಂಬಸ್ಥರ ಕೆಂಗಣ್ಣು ಬಿದ್ದಿತ್ತು.‌ ಏನಾದರೂ ಮಾಡಿ ಬಾನು ಬೇಕಂ ಹಾಗು ಸಾಯಬಣ್ಣರನ್ನ ಕೊಲೆ ಮಾಡ ಬಿಡಬೇಕೆಂದು ಆಕೆಯ ಪೋಷಕರು ನಿರ್ಧಾರ ಮಾಡಿದ್ದರು.

ಗರ್ಭಿಣಿಯಾಗಿ ಗಂಡನ ಮನೆಗೆ ಬಂದಿದ್ದ ವೇಳೆ ಆಕೆ ಹಾಗೂ ಸಾಯಬಣ್ಣರನ್ನು ಕೊಲೆ ಮಾಡಲು ಮುಂದಾಗಿದ್ದರು. ಆಗ ಕೈಗೆ ಸಿಕ್ಕ ಯುವತಿಯನ್ನು ಹೊಡೆಯುತ್ತಿದ್ದಾಗ ಆಕೆ ಮೂರ್ಛೆ ಹೋಗಿ ಕೆಳಗೆ ಬಿದ್ದಿದ್ದಳು. ಆಗ ಆರೋಪಿತರು ಈಕೆ ಬೇರೆಯವರ ವಂಶ ಉದ್ದಾರ ಮಾಡಲಿಕ್ಕೆ ನಮ್ಮ‌ ಮನೆತನದ ಮರ್ಯಾದೆ ಮಣ್ಣು ಪಾಲು ಮಾಡಿದ್ದಾಳೆ. ಹೀಗಾಗಿ ಈಕೆಯನ್ನು ಸುಟ್ಟು ಬಿಡೋಣ ಎಂದು ನಿರ್ಧರಿಸಿ, ಆಕೆಯ ಮೈಮೇಲೆ ಸೀಮೆಎಣ್ಣೆ ಹಾಕಿ, ಬೆಂಕಿ ಹಚ್ಚಿ ಕೊಲೆ ಮಾಡಿದ್ದರು. ಏತನ್ಮಧ್ಯೆ ಆಕೆಯ ಪತಿ ಸಾಯಬಣ್ಣ ಆರೋಪಿಗಳಿಂದ ರಕ್ಷಣೆಯಾಗಿದ್ದ ಎಂದು ತಾಳಿಕೋಟೆ ಠಾಣೆ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸತೀಶ್​ ಎಲ್.ಪಿ. ಅವರು, ಆರೋಪಿಗಳ ಮೇಲಿನ ಆಪಾಧನೆಗಳು ರುಜುವಾತಾಗಿವೆ ಎಂದು ತೀರ್ಮಾನಿಸಿ, 1 ಮತ್ತು 2ನೇ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ಹಾಗೂ ಬಾಕಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಇನ್ನು ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಸ್.ಎಸ್. ಲೋಕೂರ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us