AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಡೆದಿದೆ. ಇತ್ತ ಉಡುಪಿ ತಾಲೂಕಿನ ಮಲ್ಪೆ ಬೀಚ್​ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ವಿಜಯಪುರ: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
ಮೃತ ಬಾಲಕರು
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 30, 2024 | 7:00 PM

Share

ವಿಜಯಪುರ, ಏ.30: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ ಆಲಮೇಲ(16) ಹಾಗೂ ಮಲಿಕ್ ನದಾಫ್(16) ಮೃತ ರ್ದುದೈವಿಗಳು. ಬೀಸಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈಜು ಬಾರದಿದ್ದರೂ ಬಾಲಕರು ಬಾವಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಉಡುಪಿ: ತಾಲೂಕಿನ ಮಲ್ಪೆ ಬೀಚ್​ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಿಸಿದ ಘಟನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vijayapura Two boys drowned in a well

ಇದನ್ನೂ ಓದಿ:ಪ್ರತ್ಯೇಕ ಪ್ರಕರಣ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು, ಆಡು ಮೇಯಿಸಲು ಹೋಗಿದ್ದ ಯುವಕ ನದಿಯಲ್ಲಿ ‌ಮುಳುಗಿ ಸಾವು ಶಂಕೆ

ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮೋರಿಗೆ ಬಿದ್ದ ಸ್ಕಾರ್ಪಿಯೊ, ಚಾಲಕ ಸಾವು

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ಹಳೆನಿಜಗಲ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಸ್ಕಾರ್ಪಿಯೋ ಕಾರು ಮೋರಿಗೆ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ರಾಜಸ್ಥಾನ ಮೂಲದ ಸಚಿನ್(19) ಕೊನೆಯುಸಿರೆಳೆದಿದ್ದಾರೆ. ಗಾಯಾಳು ಬಲವಂತ್ ಸಿಂಗ್​​ಗೆ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Tue, 30 April 24

Follow Us
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ