AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ

ಕರ್ನಾಟಕದಲ್ಲಿ ಹೆಣ್ಣು ಸಿಗದೆ ಮದುವೆಯಾಗಲು ಸಾಧ್ಯವಾಗದ ಕಾರಣ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ದುರದೃಷ್ಟಕರ ಘಟನೆಗಳು ನಡೆದಿವೆ. ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಕೃಷಿ ಸಮುದಾಯದಲ್ಲಿ, ವಿವಾಹಕ್ಕೆ ವಧುಗಳನ್ನು ಹುಡುಕುವುದು ಸವಾಲಾಗಿದೆ. ಈ ಕಾರಣದಿಂದ ಯುವಕರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ.

ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ
ಮೃತ ಯುವಕರುImage Credit source: Tv9 Kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Apr 04, 2026 | 7:24 PM

Share

ವಿಜಯಪುರ/ಚಿಕ್ಕಮಗಳೂರು, ಏಪ್ರಿಲ್​​ 04: ಹಳ್ಳಿಗಳಲ್ಲಿ ನೆಲೆಸಿರುವವರಿಗೆ ಅದರಲ್ಲೂ ಕೃಷಿಕ ಯುವಕರಿಗೆ ಮದುವೆಗೆ ಹೆಣ್ಣು ಸಿಗೋದೇ ಕಷ್ಟ ಎಂಬ ಸ್ಥಿತಿ ಸದ್ಯ ಸಮಾಜದಲ್ಲಿದೆ. ಇದೇ ಕಾರಣಕ್ಕೆ ಅದೆಷ್ಟೋ ಯುವಕರಿಗೆ ಈವರೆಗೂ ಕಂಕಣ ಭಾಗ್ಯವೇ ಕೂಡಿಬರುತ್ತಿಲ್ಲ. ಈ ನಡುವೆ ವಿವಾಹಕ್ಕೆ ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ತೀವ್ರ ನೊಂದು ಯುವಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ರಾಜ್ಯದಲ್ಲಿ ನಡೆದಿವೆ. ವಿಜಯಪುರದಲ್ಲಿ ಕುರಿಗಾಹಿ ನೇಣಿಗೆ ಶರಣಾಗಿದ್ದರೆ ಇತ್ತ ಚಿಕ್ಕಮಗಳೂರಲ್ಲಿ ಕುಡಿದ ಮತ್ತಿನಲ್ಲಿ ಮತ್ತೋರ್ವ ಪ್ರಾಣ ಕಳೆದುಕೊಂಡಿದ್ದಾನೆ.

ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

2 ವರ್ಷದ ಹಿಂದೆ ಮದುವೆ ನಿಶ್ಚಯವಾಗಿ ಮುರಿದು ಬಿದ್ದಬಳಿಕ ಎಷ್ಟೇ ಹುಡುಕಿದ್ರೂ ಹೆಣ್ಣು ಸಿಗದಿದ್ದಕ್ಕೆ ತೀವ್ರವಾಗಿ ನೊಂದಿದ್ದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿ 2 ಗ್ರಾಮದ ಯುವಕ ಶಂಕರ ತಳವಾರ(25) ಮರಕ್ಕೆ ನೇಣುಹಾಕಿಕೊಂಡು ಪ್ರಾಣ ಬಿಟ್ಟಿದ್ದಾನೆ. ಈ ಬಗ್ಗೆ ನಿಡಗುಂದಿ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಇತ್ತ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೋರಗಾನಹಳ್ಳಿಯಲ್ಲೂ ಕುಮಾರ್​(26) ಇದೇ ಕಾರಣಕ್ಕೆ ಸೂಸೈಡ್​​ ಮಾಡಿಕೊಂಡಿದ್ದಾನೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಯುವಕ ಕುಡಿದ ಮತ್ತಿನಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಹೆಣ್ಣು ಸಿಗದಿದ್ದಕ್ಕೆ ಮಾನಸಿಕವಾಗಿ ಈತ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದ್ದು, ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ. ಕಡೂರು ತಾಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿ ಮಂದೆ ಬಿಟ್ಟುಕೊಂಡಿದ್ದ ಕುಮಾರ್, ರಾಮನವಮಿ ಹಬ್ಬಕ್ಕೆ ಊರಿಗೆ ಹೋದಾಗ ಮದುವೆ ಮಾಡುವಂತೆ ಮನೆಯವರನ್ನು ಒತ್ತಾಯಿಸಿದ್ದ. ಆದರೆ ಇಬ್ಬರು ಸಹೋದರರ ಮದುವೆಯಾದ ಬಳಿಕ ವಿವಾಹ ಮಾಡುವುದಾಗಿ‌ ಪೋಷಕರು ಹೇಳಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಶಿರಾ ಬ್ರಹ್ಮಸಂದ್ರ ಗ್ರಾಮಕ್ಕೆ ರವಾನೆ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:24 pm, Sat, 4 April 26

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ