AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ವಿವಾದ: ಡಿಸಿ ಮನವೊಲಿಕೆ ಯಶಸ್ವಿ, ಪ್ರತಿಭಟನೆ ಕೈಬಿಟ್ಟ ವಿಜಯಪುರ ರೈತರು

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿಚಾರದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಜಿಲ್ಲಾಧಿಕಾರಿಗಳು ಪಹಣಿಯಲ್ಲಿನ ವಕ್ಫ್ ಬೋರ್ಡ್ ಎಂಬ ಪದ ತೆಗೆಯುವುದು ಮತ್ತು ಭವಿಷ್ಯದಲ್ಲಿ ಯಾವುದೇ ಸಮಸ್ಯೆ ಆಗದಂತೆ ಶಾಶ್ವತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದರು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ವಿಷಯದ ಕುರಿತು ವಾಗ್ವಾದ ನಡೆದಿದೆ.

ವಕ್ಫ್​ ವಿವಾದ: ಡಿಸಿ ಮನವೊಲಿಕೆ ಯಶಸ್ವಿ, ಪ್ರತಿಭಟನೆ ಕೈಬಿಟ್ಟ ವಿಜಯಪುರ ರೈತರು
ಪ್ರತಿಭಟನೆ ನಡೆಸಿದ್ದ ರೈತರು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 30, 2024 | 10:17 PM

Share

ವಿಜಯಪುರ, ಅಕ್ಟೋಬರ್​ 30: ವಕ್ಫ್ (Waqf)​ ಆಸ್ತಿ ವಿಚಾರ ಸದ್ಯ ಕರ್ನಾಟಕದಲ್ಲಿ (Karnataka) ಸಾಕಷ್ಟು ಚರ್ಚೆಯಾಗುತ್ತಿದೆ. ವಿಜಯಪುರ, ಯಾದಗಿರಿ, ಧಾರವಾಡ ಸೇರಿದಂತೆ ಇನ್ನೂ ಹಲವು ಜಿಲ್ಲೆಗಳ ರೈತರನ್ನು ಕಂಗಾಲಾಗಿಸಿದೆ. ತಮ್ಮ ಜಮೀನುಗಳ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದು ಆಗಿದ್ದು ಮತ್ತು ನೋಟಿಸ್ ನೀಡಿದ್ದನ್ನು ವಿರೋಧಿ ವಿಜಯಪುರ (Vijayapura) ಜಿಲ್ಲೆಯ ರೈತರು ಮಂಗಳವಾರ (ಅ.29) ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಪ್ರತಿಭಟನಾ ನಿರತರ ರೈತರ ಮನವೊಲಿಸುವಲ್ಲಿ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್, ಹೆಚ್ಚುವರಿ ಡಿಸಿ ಸೋಮಲಿಂಗ ಗೆಣ್ಣೂರು ಯಶಸ್ವಿಯಾಗಿದ್ದಾರೆ.

ಇಂದು (ಅ.30) ಪ್ರತಿಭಟನಾ ನಿರತ ರೈತರ ಬಳಿ ಬಂದ ಜಿಲ್ಲಾಧಿಕಾರಿಗಳು, “ಪಹಣಿಯಲ್ಲಿನ ವಕ್ಫ್ ಬೋರ್ಡ್ ಎಂಬ ಪದ ತೆಗೆಯಲಾಗಿದೆ. ಭವಿಷ್ಯದಲ್ಲೂ ಯಾವುದೇ ಸಮಸ್ಯೆ ಆಗುವುದಿಲ್ಲ. ಮತ್ತು ವಕ್ಫ್ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲಾಗುವುದೆಂದು” ಭರವಸೆ ನೀಡಿದರು. ಅಲ್ಲದೇ ಇಂಡಿ ತಾಲೂಕಿನ 41 ರೈತರ ಜಮೀನು ಇಂದೀಕರಣವನ್ನು ಈಗಾಗಲೇ ರದ್ದು ಮಾಡಿದ್ದೇವೆ. ಕೂಡಲೇ ಹೋರಾಟ ಕೈಬಿಡುವಂತೆ ಮನವೊಲಿಸಿದರು. ಜಿಲ್ಲಾಧಿಕಾರಿಗಳು ನೀಡಿದ ಭರವಸೆಯಿಂದ ರೈತರು ಅಹೋರಾತ್ರಿ ಹೋರಾಟ ಕೈಬಿಟ್ಟು ನಿರ್ಗಮಿಸಿದರು.

ಬಿಜೆಪಿ ವಿರುದ್ಧ ಜಮೀರ್​ ವಾಗ್ದಾಳಿ

ವಕ್ಫ್ ಬೋರ್ಡ್ ಹೆಸರಿನಲ್ಲಿ ರೈತರ ಭೂಮಿ ಕಬಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಚಿವ ಜಮೀರ್​ ಅಹ್ಮದ್​​ ತಿರುಗೇಟು ನೀಡಿದ್ದಾರೆ. ಶಿಗ್ಗಾಂವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಕ್ಫ್​ ಆಸ್ತಿ ವಿಚಾರವನ್ನು ಬಿಜೆಪಿ ಉಪಚುನಾವಣೆಗೆ ಬಳಸಿಕೊಳ್ಳುತ್ತಿದೆ. ನಿಮ್ಮ ಆಸ್ತಿ ತೆಗೆದುಕೊಳ್ಳಲು ಸಾಧ್ಯನಾ? ಇದು ರಾಜಕೀಯ ಗಿಮಿಕ್ ಎಂದಿದ್ದಾರೆ.​​

ಇದನ್ನೂ ಓದಿ: ಅಂತ್ಯಸಂಸ್ಕಾರಕ್ಕೆಂದು ತುಸು ಜಾಗ ನೀಡಿದ್ದರೆ ಇಡೀ ಆಸ್ತಿಯನ್ನೇ ಕಬಳಿಸಿದ ವಕ್ಫ್!

ಮಹಾರಾಷ್ಟ್ರ ಸೇರಿದಂತೆ ಹಲವೆಡೆ ಚುನಾವಣೆ ನಡೆಯುತ್ತಿದೆ. ಪ್ರಚಾರಕ್ಕೆ ಬೇರೆ ವಿಷಯ ಇಲ್ಲದಿದ್ದಕ್ಕೆ ಬಿಜೆಪಿಯವರು ವಕ್ಫ್​ ವಿಚಾರ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಭೂಮಿಯನ್ನು ಯಾರೂ ತೆಗೆದುಕೊಳ್ಳಲು ಆಗಲ್ಲ ಎಂದರು.

ಕೆಲವು ಧಾರ್ಮಿಕ ಕೇಂದ್ರಗಳು ಸಹ ವಕ್ಫ್​​​​ಗೆ ಸೇರಿಕೊಳ್ಳುತ್ತವೆ: ದಿನೇಶ್​

ರೈತರ ಭೂಮಿ ವಕ್ಫ್​ಗೆ ಸೇರಿಸಿದ್ದಾರೆಂಬುದು ಸುಳ್ಳು, ಅರೆಬರೆ ಸುದ್ದಿ. ಹಿಂದಿನ ಬಿಜೆಪಿ ಅವಧಿಯಲ್ಲಿ ವಕ್ಫ್​ ವಿಚಾರದಲ್ಲಿ ನೋಟಿಸ್​ ನೀಡಲಾಗಿದೆ. ರೈತರ ಜಮೀನುಗಳನ್ನು ವಕ್ಫ್​ ಬೋರ್ಡ್​ ಕಿತ್ತುಕೊಳ್ಳಲು ಸಾಧ್ಯವಿಲ್ಲ. ವಕ್ಫ್​ ಆಸ್ತಿ ಬಗ್ಗೆ ಇರುವ ಗೊಂದಲವನ್ನು ನಿವಾರಣೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ದಾನ ಮಾಡಿರುವ ಭೂಮಿ ವಕ್ಫ್​​ ಬೋರ್ಡ್​ಗೆ ಸೇರಿರುತ್ತೆ. ಕೆಲವು ಧಾರ್ಮಿಕ ಕೇಂದ್ರಗಳು ಸಹ ವಕ್ಫ್​​​​ ಆಸ್ತಿಗೆ ಸೇರಿಕೊಳ್ಳುತ್ತವೆ. ಈ ಸಂಬಂಧ ಈಗಾಗಲೇ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಮುಸ್ಲಿಮರ ಹೆಸರನ್ನು ತಂದಿದ್ದಾರೆ. ಹಿಂದೂ, ಮುಸ್ಲಿಮರ ನಡುವೆ ದ್ವೇಷ ಮೂಡಿಸುವುದೇ ಬಿಜೆಪಿ ಉದ್ದೇಶ. ಕಾಂಗ್ರೆಸ್ ದೇಶ ಮತ್ತು ರಾಜ್ಯದಲ್ಲಿ ಭೂಸುಧಾರಣೆ ಕಾಯ್ದೆ ಜಾರಿ ಮಾಡಿದೆ​​​​. ಹಿಂದೆ ಕಾಂಗ್ರೆಸ್ ಸರ್ಕಾರ ರೈತರಿಗೆ ಜಮೀನ್ದಾರರಿಂದ ಭೂಮಿ ಕೊಡಿಸಿದೆ. ಯಾರು ಕೂಡ ರಾಜ್ಯದ ರೈತರಿಗೆ ಮೋಸ ಮಾಡಲು ಸಾಧ್ಯವಿಲ್ಲ ಎಂದರು.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:17 pm, Wed, 30 October 24

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು