AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕೃಷ್ಣಾ ನದಿ ಪಾಲಾದ ಐವರಲ್ಲಿ ಮೂವರ ಶವ ಪತ್ತೆ, ಮುಂದುವರೆದ ಶೋಧ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣ ನದಿಯ ತಟದಲ್ಲಿ ಎಂಟು ಜನರು ಇಸ್ಪೀಟ್​ ಆಡುತ್ತಿದ್ದರು. ಈ ವಿಚಾರ ತಿಳಿದು ಪೊಲೀಸರು ದಾಳಿ ಮಾಡಿದ್ದು, ತಪ್ಪಿಸಿಕೊಳ್ಳಲು ಎಂಟೂ ಜನರು ತೆಪ್ಪದಲ್ಲಿ ನದಿಯ ಮತ್ತೊಂದು ತಟಕ್ಕೆ ಹೋಗುತ್ತಿದ್ದ ವೇಳೆ ತೆಪ್ಪ ಮಗಚಿದೆ. ಐವರು ನೀರು ಪಾಲಾಗಿದ್ದು, ಮೂವರ ಮೃತ ದೇಹ ಸಿಕ್ಕಿದೆ. ಮೂವರು ಈಜಿ ದಡ ಸೇರಿದ್ದಾರೆ.

ವಿಜಯಪುರ: ಕೃಷ್ಣಾ ನದಿ ಪಾಲಾದ ಐವರಲ್ಲಿ ಮೂವರ ಶವ ಪತ್ತೆ, ಮುಂದುವರೆದ ಶೋಧ
ಮುಂದುವರೆದ ಶೋಧ ಕಾರ್ಯ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 03, 2024 | 1:21 PM

Share

ವಿಜಯಪುರ, ಜುಲೈ 03: ಕೊಲ್ಹಾರ (Kolhar) ತಾಲೂಕಿನ ಬಳೂತಿ ಜಾಕವೆಲ್ ಬಳಿ ತೆಪ್ಪ ಮಗುಚಿ ಕೃಷ್ಣಾ ನದಿಯಲ್ಲಿ (Krishna River) ಐವರು ನೀರು ಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೃತದೇಹ ಪತ್ತೆಯಾಗಿದ್ದು, ಇಬ್ಬರಿಗಾಗಿ ಶೋಧಕಾರ್ಯ ನಡೆದಿದೆ. ನೀರು ಪಾಲಾಗಿದ್ದ ಪುಂಡಲೀಕ ಯಂಕಂಚಿ, ತಯ್ಯಬ್ ಚೌಧರಿ (40), ಕೊಲ್ಹಾರ ಪಟ್ಟಣದ ನಿವಾಸಿ ದಶರಥ ಗೌಡರ್ (54) ಮೃತದೇಹ ಪತ್ತೆಯಾಗಿವೆ. ಆಂಬುಲೆನ್ಸ್ ಮೂಲಕ ಮರಣೋತ್ತರ ಪರೀಕ್ಷೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ಶವಗಳನ್ನು ರವಾನೆ ಮಾಡಲಾಗಿದೆ. ರಫೀಕ್ ಬಾಂಬೆ ಹಾಗೂ ಮೆಹಬೂಬ್ ವಾಲೀಕಾರಗಾಗಿ ಅಗ್ನಿಶಾಮಕ ದಳ, ಪೊಲೀಸರಿಂದ ಶೋಧಕಾರ್ಯ ನಡೆದಿದೆ.

ಬಳೂತಿ ಜಾಕ್​​ವೆಲ್ ಬಳಿಯ ಕೃಷ್ಣ ನದಿ ತಟದಲ್ಲಿ ಎಂಟು ಜನರು ಇಸ್ಪೀಟ್ ಆಟವಾಡುತ್ತಿದ್ದರು. ಸ್ಥಳಕ್ಕೆ ಪೊಲೀಸರು ಬರುತ್ತಿದ್ದಾರೆಂಬ ಮಾಹಿತಿ ದೊರೆಯುತ್ತಿದ್ದಂತೆ ಭಯದಿಂದ ತಪ್ಪಿಸಿಕೊಳ್ಳಲು ತೆಪ್ಪದ ಮೂಲಕ ನದಿಯ ತಟಕ್ಕೆ ಹೋಗುತ್ತಿದ್ದರು. ಆದರೆ, ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನಡು ನದಿಯಲ್ಲಿ ಮಗುಚಿ ಬಿದ್ದಿದೆ. ನಂತರ, ಕೊಲ್ಹಾರ ಪಟ್ಟಣದ ಸಚಿನ್ ಕಟಬರ ಈಜಿ ದಡ ಸೇರಿದ್ದಾನೆ. ಬಶೀರ್ ಹೊನವಾಡ ಎಂಬಾತ ಈಜಿ ದಡ ಸೇರಿ ಗುಪ್ತವಾಗಿ ಮನೆ ಸೇರಿದ್ದಾನೆ. ಸ್ಥಳದಲ್ಲೇ ಇದ್ದ ಜಗದೀಶ ಸುಣಗದ ಹಾಗೂ ಮುತ್ತು ಬಾನಿ ಎಂಬುವರು ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದ ಫಾರುಖ ಫತ್ತೇಮಹದ್ ಎಂಬಾತನನ್ನು ರಕ್ಷಣೆ ಮಾಡಿದ್ದಾರೆ. ಉಳಿದ ಐವರು ನೀರು ಪಲಾಗಿದ್ದಾರೆ. ಐವರಲ್ಲಿ ಮೂವರ ಮೃತ ದೇಹ ಪತ್ತೆಯಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸಾವು

ಘಟನೆ ಸಂಬಂಧ ಪ್ರತ್ಯೇಕ್ಷದರ್ಶಿ ಬಶೀರ್ ಹೊನವಾಡ ಮಾತನಾಡಿ, ಎಂಟು ಜನರು‌ ನದಿ ತಟದಲ್ಲಿ ಇಸ್ಪೀಟ್ ಆಡುತ್ತಿದ್ದರು. ಆಗ ಪೊಲೀಸರು ಬರುತ್ತಾರೆಂಬ ಕಾರಣ ಎಲ್ಲರೂ ಓಡಿದರು. ತೆಪ್ಪದ‌ಲ್ಲಿ ಹತ್ತಿದರು. ನಾನೂ‌ ಗಾಬರಿಯಾಗಿ ತೆಪ್ಪದಲ್ಲಿ‌ ಹತ್ತಿದೆ. ತೆಪ್ಪದಲ್ಲಿದ್ದವರು ಬೇಡಾ ಎಂದು‌ ಕೆಳಗಿಳಿಸಿದರು. ತೆಪ್ಪದಲ್ಲಿ‌ ನದಿಯ ಆಚೆ ದಡದತ್ತ ತೆರಳುತ್ತಿತ್ತು. ಆಗ ಸ್ಥಳಕ್ಕೆ ಪೊಲೀಸರು ಆಗಮಿಸಿದರು. ಕೆಲ‌ ಹೊತ್ತಿನಲ್ಲೇ ತೆಪ್ಪ ನದಿಯಲ್ಲಿ ಮಗುಚಿ ಎಲ್ಲರೂ ನದಿ ಪಾಲಾದರು. ಇಸ್ಪೀಟ್ ಆಡುತ್ತಿದ್ದವರು ಓಡುತ್ತಿದ್ದ ಕಾರಣ ಭಯದಲ್ಲಿ ಅವರ ತೆಪ್ಪ ಏರಿದ್ದೆ. ಆದರೆ ನಾನು‌ ಇಸ್ಪೀಟ್ ಆಡಲು ಹೋಗಿಲ್ಲ ಎಂದು ಹೇಳಿದರು.

ಕೊರ್ತಿ-ಕೊಲ್ಹಾರ ಬ್ರಿಡ್ಜ್​

ಮೆಹಬೂಬ್ ತಂದೆ ನೂರಲಿ ವಾಲಿಕಾರ ಮಾತನಾಡಿ, ಪೊಲಿಸರು ಬೆನ್ನು ಹತ್ತಿದ್ದರು. ಅವರಿಂದ ತಪ್ಪಿಸಿಕೊಳ್ಳಲು ಹೋದಾಗ ಘಟನೆ ನಡೆದಿದೆ. ಇದು ಆಗ ಬಾರದಿತ್ತು, ಆಗಿ ಬಿಟ್ಟಿದೆ. ಪೊಲಿಸರು ಬೆನ್ನು ಹತ್ತಿರದಿದ್ದರೆ ಅವರು ಉಳಿತಾ ಇದ್ದರು ಎಂದು ಕಣ್ಣೀರು ಹಾಕಿದರು.

ನಾಪತ್ತೆಯಾಗಿರುವವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಪತ್ನಿ, ಇಬ್ಬರು ಮಕ್ಕಳ ಹಾಗೂ ಪೋಷಕರನ್ನು ಅಗಲಿರುವ ಮೆಹಬೂಬ್, ಸಂಬಂಧಿಕರು ಕಣ್ಣೀರಿಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್