AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಒಬ್ಬ ಸ್ಟ್ರಾಂಗ್‌ ಗೃಹ ಸಚಿವರು ಬೇಕಾಗಿದ್ದಾರೆಂದು ಜಾಹೀರಾತು ನೀಡಲಿ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಗೃಹ ಸಚಿವ ವಿರುದ್ಧ ಯತ್ನಾಳ ಅಸಮಾಧಾನ ವ್ಯಕ್ತಪಡಿಸಿದ್ದು, ಗೃಹ ಸಚಿವರು ಪರಿಶೀಲನೆ ಕೆಲಸ ಕೈ ಬಿಡಬೇಕು. ಇನ್ಮೇಲೆ ಓನ್ಲಿ ಆ್ಯಕ್ಷನ್ ಆಗಬೇಕು ಅಷ್ಟೇ. ಬರೀ ಕಥೆ ಹೇಳುವ ಕೆಲಸ ಆಗಬಾರದು.

ಕರ್ನಾಟಕಕ್ಕೆ ಒಬ್ಬ ಸ್ಟ್ರಾಂಗ್‌ ಗೃಹ ಸಚಿವರು ಬೇಕಾಗಿದ್ದಾರೆಂದು ಜಾಹೀರಾತು ನೀಡಲಿ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on: Apr 18, 2022 | 4:11 PM

Share

ವಿಜಯಪುರ: ಎಲ್ಲೂ ಗಲಾಟೆ ಆಗ್ತಿಲ್ಲ, ರಾಜ್ಯದಲ್ಲಿ ಮಾತ್ರ ಗಲಾಟೆ ಆಗ್ತಿದೆ. ಎಲ್ಲೆಲ್ಲಿ ವೀಕ್ ಇದೆಯೋ ಅಲ್ಲಲ್ಲಿ ಗಲಾಟೆಯಾಗುತ್ತಿದೆ. ಹೀಗಾಗಿ ರಾಜ್ಯಕ್ಕೆ ಸ್ಟ್ರಾಂಗ್‌ ಗೃಹ ಸಚಿವರು (Strong Home Minister) ಬೇಕಾಗಿದ್ದಾರೆ ಎಂದು ಜಾಹೀರಾತು ನೀಡಲಿ ಎಂದು ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ‌ ಗಲಾಟೆ ಪ್ರಕರಣ ಕುರಿತು ಶಾಸಕ ಪ್ರತಿಕ್ರಿಯೆ ನೀಡಿದ್ದು, ಗಲಾಟೆಗೆ ಸಂಬಂಧ ಮನೆ ಮನೆಯ ಸರ್ಚ್ ಆಪರೇಷನ್ ಆಗಬೇಕು. ಗಲಭೆಯಲ್ಲಿ ಕೆಲವೊಂದು ಶಕ್ತಿಗಳು ಕೆಲಸ ಮಾಡುತ್ತಿವೆ. ಮೆರವಣಿಗೆ ಹೋಗುವ ಮೊದಲು ಮನೆಯ, ಅಂಗಡಿಯ ಮೇಲೆ ಸರ್ಚ್ ಮಾಡಬೇಕು. ಯಾರ ಮನೆಯಲ್ಲಿ ತಲ್ವಾರ್, ಜಂಬೆ ಇವೆ ಎಂಬುದರ ಕುರಿತು ಸರ್ಚ್ ಮಾಡಬೇಕು.

ಗೃಹ ಸಚಿವ ವಿರುದ್ಧ ಯತ್ನಾಳ ಅಸಮಾಧಾನ ವ್ಯಕ್ತಪಡಿಸಿದ್ದು, ಗೃಹ ಸಚಿವರು ಪರಿಶೀಲನೆ ಕೆಲಸ ಕೈ ಬಿಡಬೇಕು. ಇನ್ಮೇಲೆ ಓನ್ಲಿ ಆ್ಯಕ್ಷನ್ ಆಗಬೇಕು ಅಷ್ಟೇ. ಬರೀ ಕಥೆ ಹೇಳುವ ಕೆಲಸ ಆಗಬಾರದು. ಬಿಜೆಪಿ ಅಧಿಕಾರ ಇದೆ, ನೀವೇನು ಮಾಡುತ್ತೀರಾ ಎಂದು ಜನತೆ ಕೇಳುತ್ತಾರೆ. ಕಾಂಗ್ರೆಸ್​ನವರು ಮಾಡಿದ್ದರೆ ಜೈಲ್ ಒಳಗೆ ಹಾಕಿ. ಡಿಜೆ ಹಳ್ಳಿಯಲ್ಲಿ ಕೇಸ್‌ನಲ್ಲಿ ಶಾಸಕ ಜಮೀರ ಅಹ್ಮದ್ ಮೇಲೆ ಆ್ಯಕ್ಷನ್ ಆಗಬೇಕಿತ್ತು. ಒಳಗೆ ಎಲ್ಲವೂ ಹೊಂದಾಣಿಕೆ ಇದೆ ಎಂದು ಸ್ವಪಕ್ಷೀಯರ ವಿರುದ್ಧ ಕಿಡಿ ಕಾರಿದರು. ಮುಗ್ಧ ಹಿಂದುಗಳು ಸಾಯುತ್ತಿದ್ದಾರೆ. ಕರ್ನಾಟಕ ಹಿತದೃಷ್ಟಿಯಿಂದ ಆ್ಯಕ್ಷನ್ ಆಗಬೇಕೆಂದು ಯತ್ನಾಳ್ ಒತ್ತಾಯಿಸಿದರು.

ಗೃಹ ಸಚಿವ ಆರಗ ಜ್ನಾನೇಂದ್ರಗೆ ಇನ್ನೂ ತಾನು ಗೃಹ ಮಂತ್ರಿ ಅಂತಾನೆ ಗೊತ್ತಿಲ್ಲ. ಬೆಳಿಗ್ಗೆ ಒಂದು ಹೇಳ್ತಾರೆ ಸಂಜೆ ಇನ್ನೊಂದು ಹೇಳ್ತಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಜೆ.ಡಿ.ಎಸ್ ನೂತನ ರಾಜ್ಯಾದ್ಯಕ್ಷ  ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಬಸವರಾಜ್ ಬೊಮ್ಮಾಯಿಗೆ ಅನುಭವ ಇದೆ. ಆದ್ರೆ ಬೊಮ್ಮಾಯಿಗೆ ಕಷ್ಟವಾಗಿದೆ. ಬಿಜೆಪಿಯಲ್ಲಿ ಎತ್ತು ಏರಿಗೆ ಕೋನ ಕೆರೆಗೆ ಎಳೆಯುತ್ತಿದೆ ಎಂದು ಹೇಳಿದರು. ಚುನಾವಣೆಯಲ್ಲಿ ಜಾತಿಗಳು ನಡೆಯುತ್ತೆ ಕೋಮುಗಲಭೆಗಳು ನಡೆಯಲ್ಲ. ಈಗ ನಾನು ಒಂದು ಪಕ್ಷದ ಅಧ್ಯಕ್ಷನಾಗಿದ್ದೇನೆ. ಯಾವುದನ್ನು ಹೇಳಬೇಕು ಅದನ್ನು ಮಾತ್ರ ಹೇಳಬೇಕು. ಚುನಾವಣೆಯಲ್ಲಿ ಹಿಂದೂ ಮುಸ್ಲಿಂ ಅನ್ನೊ ವಿಚಾರ ಬರಲ್ಲ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ದಿಶಾ ಪಟಾನಿ ಬೋಲ್ಡ್​ ಫೋಟೋಗಳು; ಬೀಚ್​ನಲ್ಲಿ ಬಿಂದಾಸ್​ ಆಗಿ ಪೋಸ್​ ನೀಡಿದ ಬಾಲಿವುಡ್​ ಚೆಲುವೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ