AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಗೆ ಮನೆಯವರ ವಿರೋಧ, ಓಡಿ ಹೋಗಿ ಮದುವೆಯಾದ ಪ್ರೇಮಿಗಳು; ಪೋಷಕರಿಂದ ಜೀವ ಬೆದರಿಕೆ

ಇವರಿಬ್ಬರು ಒಂದೇ ಗ್ರಾಮದ ಯುವಕ, ಯುವತಿ. ಅದರಲ್ಲೂ ಎದುರು ಬದುರು ಮನೆಯಲ್ಲಿದ್ದ ಅವರಿಬ್ಬರು ಸ್ನೇಹಿತರಾಗಿದ್ದರು. ಅವರಿಬ್ಬರ ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಪ್ರೇಮ ಹಕ್ಕಿಗಳಿಗೆ ಮನೆಯವರೇ ವಿಲನ್ ಆಗಿದ್ದರು. ಯುವತಿಯ ಮನೆಯವರ ವಿರೋಧ ತುಸು ಹೆಚ್ಚೇ ಇತ್ತು. ಹೀಗಾಗಿ ಇಬ್ಬರು ಪ್ರೇಮಿಗಳು ಮನೆಯಿಂದ ಓಡಿ ಹೋಗಿ ದರ್ಗಾವೊಂದರಲ್ಲಿ ವಿವಾಹವಾಗಿದ್ದಾರೆ. ಇದೀಗ ಯುವತಿಯ ಮನೆಯವರಿಂದ, ಯುವಕನ ಕುಟುಂಬದವರಿಗೆ ಜೀವ ಬೆದರಿಕೆಯಂತೆ. ರಕ್ಷಣೆಗಾಗಿ ಈ ನವಜೋಡಿ ಎಸ್ಪಿ ಕಚೇರಿಯ ಬಾಗಿಲು ತಟ್ಟಿದ್ದಾರೆ.

ಪ್ರೀತಿಗೆ ಮನೆಯವರ ವಿರೋಧ, ಓಡಿ ಹೋಗಿ ಮದುವೆಯಾದ ಪ್ರೇಮಿಗಳು; ಪೋಷಕರಿಂದ ಜೀವ ಬೆದರಿಕೆ
ಯುವ ಪ್ರೇಮಿಗಳು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Nov 17, 2023 | 10:16 PM

Share

ವಿಜಯಪುರ, ನ.17: ಜಿಲ್ಲೆಯ ತಾಳಿಕೋಟೆ(Talikoti) ಪಟ್ಟಣದ ಕೆಂಬಾವಿ ಕಾಲೋನಿಯ ನಿವಾಸಿಗಳಾದ ಯುವಕ ಇಸಾಕ್‌ ಜನ್ನಳ್ಳಿ  ಹಾಗೂ ಯುವತಿ ಸುಮಯ್ಯ ಡೋಣಿ ಎಂಬುವವರ ಮಧ್ಯೆ ಸ್ನೇಹ ಹುಟ್ಟಿ. ಅದು ಪ್ರೀತಿ(Love)ಯಾಗಿ ಬೆಳೆದು ಪರಸ್ಪರ ಇಷ್ಟಪಟ್ಟಿದ್ದರು. ಇವರ ಸಂಬಂಧಕ್ಕೆ ಯುವತಿ ಸುಮಯ್ಯಾ ಕುಟುಂಬದವರು ತೀವ್ರ ವಿರೋಧ ಮಾಡಿದ್ದರು. ಈ ಹಿನ್ನಲೆ ಇಸಾಕ್ ಹಾಗೂ ಸುಮಯ್ಯಾ ಮನೆ ಬಿಟ್ಟು, ಓಡಿ ಹೋಗಿ ಮುಸ್ಲಿಂ ಧರ್ಮದ ನಿಯಮಗಳಂತೆ ವಿಜಯಪುರದ ದರ್ಗಾವೊಂದರಲ್ಲಿ ನಿಖಾ(ಮದುವೆ) ಮಾಡಿಕೊಂಡಿದ್ದರು. ಇದು ಸುಮಯ್ಯಾ ಪೋಷಕರ ಪಿತ್ತನೆತ್ತಿಗೇರುವಂತೆ ಮಾಡಿದೆ. ಇದೀಗ ನಿಮ್ಮನ್ನು ಹಾಗೂ ಯುವಕ ಇಸಾಕ್ ಮನೆಯವರನ್ನು ಕೊಲೆ ಮಾಡುತ್ತೇವೆ ಎಂದು ಸುಮ್ಯಯಾ ಪೋಷಕರು ಬೆದರಿಕೆ ಹಾಕಿದ್ದಾರಂತೆ.

ಈ ವಿಚಾರವಾಗಿ ಇಸಾಕ್ ಮೇಲೆ ಸುಮಯ್ಯಾಳನ್ನು ಅಪಹರಣ ಮಾಡಿದ್ಧಾನೆಂದು ಯುವತಿಯ ಪೋಷಕರು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರಂತೆ. ತಾಳಿಕೋಟೆ ಪೊಲೀಸರಿದ ಇಸಾಕ್ ಕುಟುಂಬದವರಿಗೆ ಹಿಂಸೆ ಕೊಡಿಸುತ್ತಿದ್ದಾರೆಂದು ಇವರು ಆರೋಪ ಮಾಡಿದ್ದಾರೆ. ಹೀಗಾಗಿ ನಮಗೆ ರಕ್ಷಣೆಬೇಕೆಂದು ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದಾರೆ. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದ ನಾವುಗಳು, ಪರಸ್ಪರ ಇಷ್ಟಪಟ್ಟು ಮದುವೆಯಾಗಿದ್ದೇವೆ. ನಮ್ಮ ಮನೆಯವರಿಂದ ನಮಗೆ ಜೀವ ಬೆದರಿಕೆ ಇದೆ ಎಂದು ಯುವತಿ ಆರೋಪ ಮಾಡಿದ್ದಾಳೆ.

ಇದನ್ನೂ ಓದಿ:ಅನೈತಿಕ ಸಂಬಂಧ; ಪ್ರೀತಿಸಿ ಮದುವೆಯಾದ ಹೆಂಡತಿಗೆ ಕಟ್ಟಿದ ಚಟ್ಟ, ಏನಿದು ಕಥೆ ಅಂತೀರಾ?ಈ ಸ್ಟೋರಿ ಓದಿ

ತಾಳಿಕೋಟೆಯ ಕೆಂಬಾವಿ ಕಾಲೋನಿಯಲ್ಲಿ ಇಸಾಕ್‌ ಅಜ್ಜ-ಅಜ್ಜಿ ಇರುತ್ತಾರಂತೆ. ಇವರ ಮನೆ ಎದುರಲ್ಲೇ ಸುಮಯ್ಯ ಮನೆ ಇದೆ. ಇಸಾಕ್‌ ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿ ಮೆಕಾನಿಕಲ್‌ ಕೆಲಸ ಮಾಡುತ್ತಿದ್ದರೆ, ಇತ್ತ ಸುಮಯ್ಯ ಈಗಷ್ಟೇ ಭೀ ಪಾರ್ಮಸಿ ಓದಿ ಮುಗಿಸಿದ್ದು, ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿದ್ದಾಳೆ. ಇಷ್ಟರ ಮಧ್ಯೆ ಇವರಿಬ್ಬರು ಮನೆಯಿಂದ ಓಡಿ ಹೋಗಿ ಮದುವೆಯಾಗಿರುವುದು ಸಮಸ್ಯೆಗೆ ಕಾರಣವಾಗಿದೆ. ಆದರೆ, ಯುವತಿ ಸುಮಯ್ಯಳ ಕುಟುಂಬದವರು ಇಸಾಕ್ ಬಡನನಾಗಿದ್ದು, ಗ್ಯಾರೇಜ್ ಕೆಲಸ ಮಾಡುತ್ತಾನೆ. ನಾವು ಶ್ರೀಮಂತರು ಎಂದು ಇವರಿಬ್ಬರ ಮದುವೆಗೆ ವಿರೋಧ ಮಾಡುತ್ತಿದ್ಧರಂತೆ. ಮೇಲಾಗಿ ಪ್ರಭಾವ ಉಳ್ಳವರಾಗಿದ್ದು, ಇಸಾಕ್ ಕುಟುಂಬದ ಮೇಲೆ ಒತ್ತಡ ಹಾಕಿ ಬೆದರಿಕೆ ಹಾಕುತ್ತಿದ್ದಾರಂತೆ. ಇದರಿಂದ ನಮಗೆ ರಕ್ಷಣೆ ಬೇಕು. ತಾಳಿಕೋಟೆ ಪೊಲೀಸರ ಮೇಲೆ ನಮಗೆ ನಂಬಿಕೆಯಿಲ್ಲ ಎಂದು ಎಸ್ಪಿ ಅವರಿಗೆ ಭೇಟಿಯಾಗಿ ಸಹಾಯಕ್ಕಾಗಿ ಅಂಗಲಾಚಿದ್ದಾರೆ.

ಪ್ರೇಮಿಸಿ ಮದುವೆಯಾದ ಇಸಾಕ್ ಹಾಗೂ ಸುಮಯ್ಯ ವಯಸ್ಕರಾಗಿದ್ದು, ಎಸ್ಪಿ ಋಷಿಕೇಶ ಸೋನೆವಣೆ ಅವರು ಸಮಸ್ಯೆಯನ್ನು ಆಲಿಸಿದ್ದಾರೆ. ಇಬ್ಬರೂ ಇಷ್ಟಪಟ್ಟು ಮದುವೆಯಾಗಿದ್ದರ ಬಗ್ಗೆಯೂ ಮಾಹಿತಿ ಪಡೆದು ರಕ್ಷಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಈ ಕುರಿತು ಹೆಚ್ಚಿನ ಮಾಹಿತಿ ಹಾಗೂ ಹೇಳಿಕೆ ನೀಡದ ಅವರು, ಕಾನೂನು ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಒಟ್ಟಾರೆ ಒಂದೇ ಗ್ರಾಮ, ಒಂದೇ ಸಮುದಾಯದವರಾಗಿದ್ದರೂ ಸಹ ಬಡವ-ಶ್ರೀಮಂತ ಎಂಬ ಭಾವನೇ ಇಲ್ಲಿ ಪ್ರೇಮಿಗಳಿಗೆ ಸಮಸ್ಯೆಯನ್ನು ತಂದೊಡ್ಡಿದೆ. ಪೊಲೀಸರ ರಕ್ಷಣೆಯೇ ಹೊಸ ದಾಂಪತ್ಯಕ್ಕೆ ಕಾಲಿಟ್ಟವರಿಗೆ ಭರವಸೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ