AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ಮಾನ್ ಕಾರ್ಡ್ ಹೆಸರಲ್ಲಿ ಹಣ ಲೂಟಿ? ಗ್ರಾಮಸ್ಥರು ಪ್ರಶ್ನಿಸುತ್ತಿದ್ದಂತೆ ದುರುಳರು ಪರಾರಿ

ವಿಜಯಪುರ: ದೇವರು ವರ ಕೊಟ್ಟರೂ ಪೂಜಾರಿ ಬಿಡಲಿಲ್ಲ ಎನ್ನೋ ಮಾತಿದೆ. ಇದಕ್ಕೆ ತಕ್ಕಂತೆ ಕೆಲ ದುರುಳರು ಸರ್ಕಾರ ಬಡವರಿಗಾಗಿ ಕಲ್ಯಾಣ ಯೋಜನೆಗಳನ್ನ ಮಾಡಿದ್ರೂ, ನಡುವೆ ಲಂಚ ತಿನ್ನೋಕೆ ಇನ್ನಿಲ್ಲದ ಕಸರತ್ತು ಮಾಡ್ತಾರೆ. ಇಂಥದ್ದೆ ಒಂದು ಘಟನೆ ಪಂಚನದಿಗಳ ನಾಡು ವಿಜಯಪುರದಿಂದ ವರದಿಯಾಗಿದೆ. ಹೌದು, ಬಡ ಜನರಿಗೆ ಆರೋಗ್ಯ ಸೇವೆಗಳು ಸಿಗಬೇಕೆಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಆಯುಷ್ಮಾನ್ ಭಾರತ ಯೋಜನೆ ಜಾರಿಯಾಗಿದೆ. ಬಡವರು ಬಡತನ ರೇಖೆಗಿಂತ ಕೆಳಗಿರುವವರಿಗೆ ಆರೋಗ್ಯ ಸೇವೆಗಳು ಉಚಿತವಾಗಿ ಸಿಗಲು ಹಾಗೂ […]

ಆಯುಷ್ಮಾನ್ ಕಾರ್ಡ್ ಹೆಸರಲ್ಲಿ ಹಣ ಲೂಟಿ? ಗ್ರಾಮಸ್ಥರು ಪ್ರಶ್ನಿಸುತ್ತಿದ್ದಂತೆ ದುರುಳರು ಪರಾರಿ
Guru
| Edited By: |

Updated on:Jun 28, 2020 | 5:52 PM

Share

ವಿಜಯಪುರ: ದೇವರು ವರ ಕೊಟ್ಟರೂ ಪೂಜಾರಿ ಬಿಡಲಿಲ್ಲ ಎನ್ನೋ ಮಾತಿದೆ. ಇದಕ್ಕೆ ತಕ್ಕಂತೆ ಕೆಲ ದುರುಳರು ಸರ್ಕಾರ ಬಡವರಿಗಾಗಿ ಕಲ್ಯಾಣ ಯೋಜನೆಗಳನ್ನ ಮಾಡಿದ್ರೂ, ನಡುವೆ ಲಂಚ ತಿನ್ನೋಕೆ ಇನ್ನಿಲ್ಲದ ಕಸರತ್ತು ಮಾಡ್ತಾರೆ. ಇಂಥದ್ದೆ ಒಂದು ಘಟನೆ ಪಂಚನದಿಗಳ ನಾಡು ವಿಜಯಪುರದಿಂದ ವರದಿಯಾಗಿದೆ.

ಹೌದು, ಬಡ ಜನರಿಗೆ ಆರೋಗ್ಯ ಸೇವೆಗಳು ಸಿಗಬೇಕೆಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಆಯುಷ್ಮಾನ್ ಭಾರತ ಯೋಜನೆ ಜಾರಿಯಾಗಿದೆ. ಬಡವರು ಬಡತನ ರೇಖೆಗಿಂತ ಕೆಳಗಿರುವವರಿಗೆ ಆರೋಗ್ಯ ಸೇವೆಗಳು ಉಚಿತವಾಗಿ ಸಿಗಲು ಹಾಗೂ ಇತರರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆಗಳು ಲಭಿಸಲಿ ಎನ್ನುವುದು ಈ ಯೋಜನೆಯ ಉದ್ದೇಶ. ನಿಗದಿ ಪಡಿಸಿದ ಆಸ್ಪತ್ರೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ಆರೋಗ್ಯ ಸೇವೆಗಳು ಆಯುಷ್ಮಾನ್ ಭಾರತ ಯೋಜನೆಯಿಂದ ಸಾಧ್ಯ.

ಆಯುಷ್ಮಾನ್‌ ಕಾರ್ಡ್‌ ಹೆಸರಲ್ಲಿ ದಂಧೆ ಆಯುಷ್ಮಾನ್ ಭಾರತ ಯೋಜನೆ ಪಡೆಯಲು ಸರ್ಕಾರ ನಿಗದಿ ಪಡಿಸಿರುವ ಆಯುಷ್ಮಾನ್ ಆರೋಗ್ಯ ಕಾರ್ಡ್ ಪಡೆಯಬೇಕು. ಈ ಕಾರ್ಡ್ ಪಡೆಯಲು ತಹಶೀಲ್ದಾರ್‌ ಕಚೇರಿ, ಪಂಚಾಯಿತಿ ಮಟ್ಟದಲ್ಲಿ ಹಾಗೂ ನಾಗರಿಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನಿಗದಿತ 10 ರೂಪಾಯಿ ಶುಲ್ಕ ಭರಿಸಬೇಕು. ನಂತರ ಆಯುಷ್ಮಾನ್ ಭಾರತ ಕಾರ್ಡ್ ಅಂಚೆ ಮೂಲಕ ಮನೆಗೆ ಬರುತ್ತದೆ.

ಆದರೆ ಇದೇ ಆಯುಷ್ಮಾನ್ ಭಾರತ ಕಾರ್ಡ್ ಹೆಸರಲ್ಲಿ ಹಣ ಪೀಕುವ ದಂಧೆ ಈಗ ವಿಜಯಪುರ ಜಿಲ್ಲೆಯಲ್ಲಿ ಜೋರಾಗಿ ನಡೆಯುತ್ತಿದೆ. ಅಮಾಯಕ ಗ್ರಾಮೀಣ ಭಾಗದ ಜನರಿಗೆ ಆಯುಷ್ಮಾನ್ ಭಾರತ ಕಾರ್ಡ್ ನೀಡುವ ಭರವಸೆ ನೀಡಿ ಕೆಲವು ವ್ಯಕ್ತಿಗಳು ಹಣ ವಸೂಲಿ ಮಾಡುತ್ತಿವೆ. ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಜೀರಂಕಲಗಿ ಗ್ರಾಮಕ್ಕೆ ಬಂದಿದ್ದ ಇಬ್ಬರು ವ್ಯಕ್ತಿಗಳು, ಅದೇ ಗ್ರಾಮದ ಆಶಾ ಕಾರ್ಯಕರ್ತೆ ಶಶಿಕಲಾ ಕೋಳಿ ಎಂಬುವರ ಜತೆ ಸೇರಿ ಗ್ರಾಮಸ್ಥರಿಂದ ಹಣ ವಸೂಲಿ ಮಾಡಿದ್ದಾರೆ ಎನ್ನಲಾಗ್ತಿದೆ.

ಪ್ರತಿಯೊಬ್ಬರಿಂದ 100ರೂ. ವಸೂಲಿ ಚಡಚಣದಿಂದ ಕಂಪ್ಯೂಟರ್ ಸೆಂಟರ್‌ವೊಂದರ ಸಿಬ್ಬಂದಿಯನ್ನ ಕರೆಸಿರುವ ಆಶಾ ಕಾರ್ಯಕರ್ತೆ ಶಶಿಕಲಾ ಕೋಳಿ, ಗ್ರಾಮಕ್ಕೆ ಕಂಪ್ಯೂಟರ್ ಸಿಸ್ಟಮ್, ಫಿಂಗರ್ ಪ್ರಿಂಟ್ ಮಶೀನ್ ಸಮೇತ ಇಬ್ಬರನ್ನು ಕರೆಯಿಸಿದ್ದಾರೆ. ಆಯುಷ್ಮಾನ್ ಭಾರತ ಕಾರ್ಡ್ ಬೇಕು ಅಂದ್ರೇ ಒಬ್ಬರಿಗೆ 100 ರೂಪಾಯಿ ನೀಡಬೇಕು. ಒಂದು ಕುಟುಂಬದಲ್ಲಿ ಎಷ್ಟು ಜನರಿದ್ದಾರೋ ಅಷ್ಟು ಜನ ತಲಾ ಒಂದು ನೂರು ರೂಪಾಯಿ ನೀಡಬೇಕೆಂದು ಹಣ ವಸೂಲಿ ಮಾಡಿದ್ದಾರೆ. ಆಯುಷ್ಮಾನ್ ಭಾರತ ಕಾರ್ಡ್‌ಗಾಗಿ ಇಲ್ಲಿನ ಜನರು ರೇಷನ್ ಕಾರ್ಡ್ ಪ್ರತಿ ನೀಡಿ ಹಾಗೂ ತಮ್ಮ ಫಿಂಗರ್ ಪ್ರಿಂಟ್ ನೀಡಿದ್ದಾರೆ.ೇ ಇವನ್ನು ಪಡೆದು ಫೋಟೋ ತೆಗೆದ ಬಳಿಕ ನಿಮ್ಮ ಕಾರ್ಡ್ ಪೋಸ್ಟ್ ಮೂಲಕ ಮನೆಗೆ ಬರುತ್ತದೆ ಎಂದು ಜನರಿಗೆ ಹೇಳಿದ್ದಾರೆ.

ಗ್ರಾಮಸ್ಥರು ರಸೀದಿ ಕೇಳಿದಾಗ ಕಾಲ್ಕಿತ್ತ ದುರುಳರು ಆಗ ಅನುಮಾನಗೊಂಡ ಗ್ರಾಮದ ಕೆಲ ಯುವಕರು ಹಾಗೂ ಇತರರು ಇವರನ್ನು ಆಯುಷ್ಮಾನ್ ಕಾರ್ಡ್‌ಗೆ 100 ರೂಪಾಯಿ ತೆಗೆದುಕೊಳ್ಳುತ್ತಿದ್ದೀರಿ. ಸರ್ಕಾರ 10 ರೂಪಾಯಿ ಮಾತ್ರ ನಿಗದಿ ಮಾಡಿದೆ. ನಮ್ಮಿಂದ 100 ರೂಪಾಯಿ ತೆಗೆದುಕೊಂಡಿದ್ದಕ್ಕೆ ರಸೀದಿ ನೀಡಿ ಎಂದು ಕೇಳಿದ್ದಾರೆ. ಆಗ ಆಶಾ ಕಾರ್ಯಕರ್ತೆ ಶಶಿಕಲಾ ಕೋಳಿ ಹಾಗೂ ಕಂಪ್ಯೂಟರ್ ಆಪರೇಟರ್ಸ್ ಆಯುಷ್ಮಾನ್ ಭಾರತ ಕಾರ್ಡ್ ಬೇಕಿದ್ರೆ ಹಣ ನೀಡಿ ಇಲ್ಲದಿದ್ದರೆ ಬಿಡಿ ಎಂದು ಮರುತ್ತರ ನೀಡಿದ್ದಾರೆ. ಇಷ್ಟಕ್ಕೇ ಜನ ಸುಮ್ಮನಾಗದೇ ತರಾಟೆಗೆ ತೆಗೆದುಕೊಂಡಾಗ ಕಂಪ್ಯೂಟರ್ ಹಾಗೂ ಸ್ಕ್ಯಾನಿಂಗ್ ಯಂತ್ರ ಸಮೇತ ಅವರೆಲ್ಲಾ ಜಾಗ ಖಾಲಿ ಮಾಡಿದ್ದಾರೆ. -ಅಶೋಕ ಯಡಳ್ಳಿ

Published On - 5:51 pm, Sun, 28 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!